Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ
ಕಾರ್ತಿಕ್ ಆರ್ಯನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 22, 2024 | 7:23 AM

ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆ ಮಾಡಿಕೊಂಡ ವಿಚಾರ ಗೊತ್ತೇ ಇದೆ. ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ವಿಚಾರ ಚರ್ಚೆಯಲ್ಲಿದೆ. 2020ರಲ್ಲಿ ಅವರು ನಿಧನ ಹೊಂದಿದರು. ಆರಂಭದಲ್ಲಿ ಸುಶಾಂತ್ ಅವರದ್ದು ಆತ್ಮಹತ್ಯೆ ಎಂದೇ ಹೇಳಲಾಯಿತು. ಅವರನ್ನು ಬಾಲಿವುಡ್​ನಲ್ಲಿ ಹೊರಗಿನವರು ಎಂದು ಪರಿಗಣಿಸಲಾಗಿತ್ತು. ಇದೇ ಗತಿ ಕಾರ್ತಿಕ್ ಆರ್ಯನ್​ಗೂ ಬರುತ್ತದೆ ಎನ್ನುವ ಮಾತುಗಳು ಕೇಳಿ ಬಂದವು. ಅದೃಷ್ಟವಶಾತ್ ಆ ರೀತಿ ಆಗಿಲ್ಲ.

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ. ಅವರು ಆರಂಭದಲ್ಲಿ ಸಾಕಷ್ಟು ತೊಂದರೆ ಅನುಭವಿಸಿದ್ದರು.

ಸುಶಾಂತ್ ಅವರನ್ನು ತುಳಿಯುವ ಪ್ರಯತ್ನಗಳು ನಡೆದಿವೆ ಎನ್ನುವ ಆರೋಪ ಇದೆ. ದೊಡ್ಡ ದೊಡ್ಡ ತಲೆಗಳು ಸುಶಾಂತ್ ಸಾವಿಗೆ ಕಾರಣ ಎನ್ನುವ ಆರೋಪ ಇದೆ. ಅವರ ಸಾವಿನ ಬಳಿಕ ಎಲ್ಲರೂ ಕಾರ್ತಿಕ್ ಆರ್ಯನ್ ಬಗ್ಗೆ ಆತಂಕ ಹೊರಹಾಕಿದ್ದರು. ಅವರಿಗೂ ಇದೆ ಗತಿ ಬರಹುದು ಎಂದು ಹೇಳಲಾಗಿತ್ತು.

ಬಾಲಿವುಡ್​ನಲ್ಲಿರುವ ಕಷ್ಟಗಳ ಬಗ್ಗೆ ಮಾತನಾಡಿದ್ದ ಕಾರ್ತಿಕ್ ಆರ್ಯನ್, ‘ಅವಕಾಶ ಸಿಗೋದು ತುಂಬಾನೇ ಕಷ್ಟ. ನೀವು ಹೊರಗಿನವರು ಎಂದಾಗ ನಿಮ್ಮ ಕೆಲಸಗಳನ್ನು ಗುರುತಿಸೋದು ಕೂಡ ಕಡಿಮೆ. ನಾವು ಸಿನಿಮಾ ರಂಗದವರು ಅಲ್ಲ ಎಂಬುದು ಪದೇ ಪದೇ ನಿಮ್ಮ ಮೇಲೆ ಪ್ರಭಾವ ಬೀರುತ್ತಾ ಇರುತ್ತದೆ’ ಎಂದಿದ್ದರು.

ಇದನ್ನೂ ಓದಿ: ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್

ಕಾರ್ತಿಕ್ ಆರ್ಯನ್ ಅವರು ಹೊರಗಿನವರಾದರೂ ‘ಸೋನು ಕಿ ಟು ಕಿ ಸ್ವೀಟಿ’, ’ಭೂಲ್ ಭುಲಯ್ಯ 2’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಭೂಲ್ ಭುಲಯ್ಯ 3’ ಕೂಡ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ.  ಸದ್ಯ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರು ಯಶಸ್ವಿ ಹೀರೋಗಳ ಸಾಲಿನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ