AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ
ಕಾರ್ತಿಕ್ ಆರ್ಯನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 22, 2024 | 7:23 AM

Share

ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆ ಮಾಡಿಕೊಂಡ ವಿಚಾರ ಗೊತ್ತೇ ಇದೆ. ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ವಿಚಾರ ಚರ್ಚೆಯಲ್ಲಿದೆ. 2020ರಲ್ಲಿ ಅವರು ನಿಧನ ಹೊಂದಿದರು. ಆರಂಭದಲ್ಲಿ ಸುಶಾಂತ್ ಅವರದ್ದು ಆತ್ಮಹತ್ಯೆ ಎಂದೇ ಹೇಳಲಾಯಿತು. ಅವರನ್ನು ಬಾಲಿವುಡ್​ನಲ್ಲಿ ಹೊರಗಿನವರು ಎಂದು ಪರಿಗಣಿಸಲಾಗಿತ್ತು. ಇದೇ ಗತಿ ಕಾರ್ತಿಕ್ ಆರ್ಯನ್​ಗೂ ಬರುತ್ತದೆ ಎನ್ನುವ ಮಾತುಗಳು ಕೇಳಿ ಬಂದವು. ಅದೃಷ್ಟವಶಾತ್ ಆ ರೀತಿ ಆಗಿಲ್ಲ.

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ. ಅವರು ಆರಂಭದಲ್ಲಿ ಸಾಕಷ್ಟು ತೊಂದರೆ ಅನುಭವಿಸಿದ್ದರು.

ಸುಶಾಂತ್ ಅವರನ್ನು ತುಳಿಯುವ ಪ್ರಯತ್ನಗಳು ನಡೆದಿವೆ ಎನ್ನುವ ಆರೋಪ ಇದೆ. ದೊಡ್ಡ ದೊಡ್ಡ ತಲೆಗಳು ಸುಶಾಂತ್ ಸಾವಿಗೆ ಕಾರಣ ಎನ್ನುವ ಆರೋಪ ಇದೆ. ಅವರ ಸಾವಿನ ಬಳಿಕ ಎಲ್ಲರೂ ಕಾರ್ತಿಕ್ ಆರ್ಯನ್ ಬಗ್ಗೆ ಆತಂಕ ಹೊರಹಾಕಿದ್ದರು. ಅವರಿಗೂ ಇದೆ ಗತಿ ಬರಹುದು ಎಂದು ಹೇಳಲಾಗಿತ್ತು.

ಬಾಲಿವುಡ್​ನಲ್ಲಿರುವ ಕಷ್ಟಗಳ ಬಗ್ಗೆ ಮಾತನಾಡಿದ್ದ ಕಾರ್ತಿಕ್ ಆರ್ಯನ್, ‘ಅವಕಾಶ ಸಿಗೋದು ತುಂಬಾನೇ ಕಷ್ಟ. ನೀವು ಹೊರಗಿನವರು ಎಂದಾಗ ನಿಮ್ಮ ಕೆಲಸಗಳನ್ನು ಗುರುತಿಸೋದು ಕೂಡ ಕಡಿಮೆ. ನಾವು ಸಿನಿಮಾ ರಂಗದವರು ಅಲ್ಲ ಎಂಬುದು ಪದೇ ಪದೇ ನಿಮ್ಮ ಮೇಲೆ ಪ್ರಭಾವ ಬೀರುತ್ತಾ ಇರುತ್ತದೆ’ ಎಂದಿದ್ದರು.

ಇದನ್ನೂ ಓದಿ: ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್

ಕಾರ್ತಿಕ್ ಆರ್ಯನ್ ಅವರು ಹೊರಗಿನವರಾದರೂ ‘ಸೋನು ಕಿ ಟು ಕಿ ಸ್ವೀಟಿ’, ’ಭೂಲ್ ಭುಲಯ್ಯ 2’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಭೂಲ್ ಭುಲಯ್ಯ 3’ ಕೂಡ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ.  ಸದ್ಯ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರು ಯಶಸ್ವಿ ಹೀರೋಗಳ ಸಾಲಿನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ