AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ
ಕಾರ್ತಿಕ್ ಆರ್ಯನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 22, 2024 | 7:23 AM

Share

ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆ ಮಾಡಿಕೊಂಡ ವಿಚಾರ ಗೊತ್ತೇ ಇದೆ. ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ವಿಚಾರ ಚರ್ಚೆಯಲ್ಲಿದೆ. 2020ರಲ್ಲಿ ಅವರು ನಿಧನ ಹೊಂದಿದರು. ಆರಂಭದಲ್ಲಿ ಸುಶಾಂತ್ ಅವರದ್ದು ಆತ್ಮಹತ್ಯೆ ಎಂದೇ ಹೇಳಲಾಯಿತು. ಅವರನ್ನು ಬಾಲಿವುಡ್​ನಲ್ಲಿ ಹೊರಗಿನವರು ಎಂದು ಪರಿಗಣಿಸಲಾಗಿತ್ತು. ಇದೇ ಗತಿ ಕಾರ್ತಿಕ್ ಆರ್ಯನ್​ಗೂ ಬರುತ್ತದೆ ಎನ್ನುವ ಮಾತುಗಳು ಕೇಳಿ ಬಂದವು. ಅದೃಷ್ಟವಶಾತ್ ಆ ರೀತಿ ಆಗಿಲ್ಲ.

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ. ಅವರು ಆರಂಭದಲ್ಲಿ ಸಾಕಷ್ಟು ತೊಂದರೆ ಅನುಭವಿಸಿದ್ದರು.

ಸುಶಾಂತ್ ಅವರನ್ನು ತುಳಿಯುವ ಪ್ರಯತ್ನಗಳು ನಡೆದಿವೆ ಎನ್ನುವ ಆರೋಪ ಇದೆ. ದೊಡ್ಡ ದೊಡ್ಡ ತಲೆಗಳು ಸುಶಾಂತ್ ಸಾವಿಗೆ ಕಾರಣ ಎನ್ನುವ ಆರೋಪ ಇದೆ. ಅವರ ಸಾವಿನ ಬಳಿಕ ಎಲ್ಲರೂ ಕಾರ್ತಿಕ್ ಆರ್ಯನ್ ಬಗ್ಗೆ ಆತಂಕ ಹೊರಹಾಕಿದ್ದರು. ಅವರಿಗೂ ಇದೆ ಗತಿ ಬರಹುದು ಎಂದು ಹೇಳಲಾಗಿತ್ತು.

ಬಾಲಿವುಡ್​ನಲ್ಲಿರುವ ಕಷ್ಟಗಳ ಬಗ್ಗೆ ಮಾತನಾಡಿದ್ದ ಕಾರ್ತಿಕ್ ಆರ್ಯನ್, ‘ಅವಕಾಶ ಸಿಗೋದು ತುಂಬಾನೇ ಕಷ್ಟ. ನೀವು ಹೊರಗಿನವರು ಎಂದಾಗ ನಿಮ್ಮ ಕೆಲಸಗಳನ್ನು ಗುರುತಿಸೋದು ಕೂಡ ಕಡಿಮೆ. ನಾವು ಸಿನಿಮಾ ರಂಗದವರು ಅಲ್ಲ ಎಂಬುದು ಪದೇ ಪದೇ ನಿಮ್ಮ ಮೇಲೆ ಪ್ರಭಾವ ಬೀರುತ್ತಾ ಇರುತ್ತದೆ’ ಎಂದಿದ್ದರು.

ಇದನ್ನೂ ಓದಿ: ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್

ಕಾರ್ತಿಕ್ ಆರ್ಯನ್ ಅವರು ಹೊರಗಿನವರಾದರೂ ‘ಸೋನು ಕಿ ಟು ಕಿ ಸ್ವೀಟಿ’, ’ಭೂಲ್ ಭುಲಯ್ಯ 2’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಭೂಲ್ ಭುಲಯ್ಯ 3’ ಕೂಡ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ.  ಸದ್ಯ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರು ಯಶಸ್ವಿ ಹೀರೋಗಳ ಸಾಲಿನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ