AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಘಟನೆ ಬಳಿಕ ಸಮಂತಾ ನನ್ನ ಜೊತೆ ಮಾತನಾಡುವುದನ್ನೇ ನಿಲ್ಲಿಸಿದರು’; ವಿಜಯ್ ದೇವರಕೊಂಡ

ಸಮಂತಾಗೆ Myositis ಹೆಸರಿನ ಕಾಯಿಲೆ ಕಾಣಿಸಿಕೊಂಡಿತು. ಈ ಸಮಸ್ಯೆ ಕಾಣಿಸಿಕೊಂಡ ಬಳಿಕ ಸ್ನಾಯುಗಳಲ್ಲಿ ನೋವುಂಟಾಗುತ್ತದೆ. ಇದಕ್ಕೆ ಸಮಂತಾ ಚಿಕಿತ್ಸೆಪಡೆದರು. ಆದಾಗ್ಯೂ ಅವರು ಸಂಪೂರ್ಣವಾಗಿ ಗುಣಮುಖರಾಗಿಲ್ಲ ಎನ್ನಲಾಗುತ್ತಿದೆ. ಅವರಿಗೆ ಅನಾರೋಗ್ಯ ಕಾಡಿದ್ದರಿಂದಲೇ ಸಿನಿಮಾ ಕೆಲಸಗಳು ವಿಳಂಬ ಆದವು.

‘ಆ ಘಟನೆ ಬಳಿಕ ಸಮಂತಾ ನನ್ನ ಜೊತೆ ಮಾತನಾಡುವುದನ್ನೇ ನಿಲ್ಲಿಸಿದರು’; ವಿಜಯ್ ದೇವರಕೊಂಡ
ವಿಜಯ್-ಸಮಂತಾ
ರಾಜೇಶ್ ದುಗ್ಗುಮನೆ
|

Updated on: Aug 16, 2023 | 10:33 AM

Share

ವಿಜಯ್ ದೇವರಕೊಂಡ (Vijay Devarakonda) ಅವರು ಯಾವುದಕ್ಕೂ ಹೆಚ್ಚು ತಲೆಕೆಡಸಿಕೊಳ್ಳುವುದಿಲ್ಲ. ಸೋಲು ಹಾಗೂ ಗೆಲುವನ್ನು ಸರಿ ಸಮನಾಗಿ ಸ್ವೀಕರಿಸುತ್ತಾರೆ. ಸಹ ಕಲಾವಿದರ ಬಗ್ಗೆ ಅವರು ಸಾಕಷ್ಟು ಕಾಳಜಿ ವಹಿಸುತ್ತಾರೆ. ಅವರ ಜೊತೆ ಖುಷಿಖುಷಿಯಾಗಿ ಕಾಲ ಕಳೆಯುತ್ತಾರೆ. ಈಗ ವಿಜಯ್ ದೇವರಕೊಂಡ ಅವರು ಸಮಂತಾ ಬಗ್ಗೆ ಒಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ‘ಖುಷಿ’ ಸಿನಿಮಾದಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ‘ಆ ಘಟನೆ ಬಳಿಕ ಸಮಂತಾ ನನ್ನ ಜೊತೆ ಮಾತನಾಡುವುದನ್ನೇ ನಿಲ್ಲಿಸಿದರು’ ಎಂದಿದ್ದಾರೆ ವಿಜಯ್ ದೇವರಕೊಂಡ.

ಸಮಂತಾಗೆ Myositis ಹೆಸರಿನ ಕಾಯಿಲೆ ಕಾಣಿಸಿಕೊಂಡಿತು. ಈ ಸಮಸ್ಯೆ ಕಾಣಿಸಿಕೊಂಡ ಬಳಿಕ ಸ್ನಾಯುಗಳಲ್ಲಿ ನೋವುಂಟಾಗುತ್ತದೆ. ಇದಕ್ಕೆ ಸಮಂತಾ ಚಿಕಿತ್ಸೆಪಡೆದರು. ಆದಾಗ್ಯೂ ಅವರು ಸಂಪೂರ್ಣವಾಗಿ ಗುಣಮುಖರಾಗಿಲ್ಲ ಎನ್ನಲಾಗುತ್ತಿದೆ. ಅವರಿಗೆ ಅನಾರೋಗ್ಯ ಕಾಡಿದ್ದರಿಂದಲೇ ಸಿನಿಮಾ ಕೆಲಸಗಳು ವಿಳಂಬ ಆದವು. ಈ ಬಗ್ಗೆ ವಿಜಯ್ ಮಾತನಾಡಿದ್ದಾರೆ.

‘ಸಮಂತಾ ನಗುವುದನ್ನು ನೋಡಲು ನಾನು ಬಯಸುತ್ತೇನೆ. ಅವರು ಚಿತ್ರಕ್ಕಾಗಿ ಸಾಕಷ್ಟು ಕಷ್ಟ ಪಟ್ಟಿದ್ದಾರೆ. 2022ರ ಏಪ್ರಿಲ್​​ನಲ್ಲಿ ಖುಷಿ ಶೂಟಿಂಗ್ ಆರಂಭ ಆಯಿತು. ಸಿನಿಮಾ ಶೂಟಿಂಗ್ ಶೇ. 60ರಷ್ಟು ಪೂರ್ಣಗೊಂಡಿತ್ತು. ಶೇ. 40 ಚಿತ್ರೀಕರಣ ಬಾಕಿ ಇತ್ತು. ಜುಲೈ ವೇಳೆಗೆ ಸಮಂತಾ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ನೋಡೋಕೆ ಎಲ್ಲರಂತೆ ಕಾಣುತ್ತಿದ್ದರು. ನಿಮಗೆ ಆಗಿರುವುದಾದರೂ ಏನು? ಎಂದು ನಾನು ಪ್ರಶ್ನೆ ಮಾಡಿದ್ದೆ. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ನಂತರ ಅವರ ಕಷ್ಟ ಅರ್ಥವಾಯಿತು’ ಎಂದಿದ್ದಾರೆ ವಿಜಯ್ ದೇವರಕೊಂಡ.

ಇದನ್ನೂ ಓದಿ: ಮತ್ತೆ ಒಂದಾದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ: ಐದರ ರಹಸ್ಯವೇನು?

‘ನಾನು ನನ್ನ ಇನ್ನೊಂದು ಚಿತ್ರದ ಪ್ರಚಾರದಲ್ಲಿದ್ದೆ. ಸಮಂತಾ ಅವರ ಅನಾರೋಗ್ಯದ ಬಗ್ಗೆ ನನಗೆ ತಿಳಿಯಿತು. ಆರಂಭದಲ್ಲಿ, ಅವರು ಅದರ ಬಗ್ಗೆ ಮಾತನಾಡಲಿಲ್ಲ. ನಾವು ಕಲಾವಿದರು. ನಮ್ಮ ಕಷ್ಟದ ಬಗ್ಗೆ ನಾವು ಹೇಳಬಾರದು ಎಂಬುದು ನನ್ನ ಅಭಿಪ್ರಾಯ ಆಗಿತ್ತು. ಅನಾರೋಗ್ಯದ ಬಗ್ಗೆ ಮುಕ್ತವಾಗಿ ಮಾತನಾಡುವುದು ನನ್ನ ಜವಾಬ್ದಾರಿ ಎಂದು ಸಮಂತಾ ಭಾವಿಸಿದರು. ಆ ಬಳಿಕ ಅವರು ನಮ್ಮೊಂದಿಗೆ ಮಾತನಾಡುವುದನ್ನು ನಿಲ್ಲಿಸಿದರು. ನಮ್ಮನ್ನು ನೋಡುವುದನ್ನು ನಿಲ್ಲಿಸಿದರು. ಅವರು ತೀರಾ ಅಸ್ವಸ್ಥರಾಗಿದ್ದರು’ ಎಂದು ವಿಜಯ್ ದೇವರಕೊಂಡ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ