AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಬಗ್ಗೆ ಕೀಳು ಮಾತು; ‘ಡಂಕಿ’ ರಿಲೀಸ್ ಬಳಿಕ ವೈರಲ್ ಆಯ್ತು ಆಮಿರ್ ಹಳೆಯ ವಿಡಿಯೋ

ಬಹುತೇಕ ಸೆಲೆಬ್ರಿಟಿಗಳಿಗೆ ಪಿಆರ್ ತಂಡ ಇರುತ್ತದೆ. ನಟನ ಬಗ್ಗೆ ಮಾಧ್ಯಮದಲ್ಲಿ ಪಾಸಿಟಿವ್ ಆಗಿ ಸುದ್ದಿಗಳು ಪಬ್ಲಿಶ್ ಆಗುವಂತೆ ನೋಡಿಕೊಳ್ಳೋದು ಈ ತಂಡದ ಕೆಲಸ.

ಶಾರುಖ್ ಖಾನ್ ಬಗ್ಗೆ ಕೀಳು ಮಾತು; ‘ಡಂಕಿ’ ರಿಲೀಸ್ ಬಳಿಕ ವೈರಲ್ ಆಯ್ತು ಆಮಿರ್ ಹಳೆಯ ವಿಡಿಯೋ
ಆಮಿರ್-ಶಾರುಖ್
TV9 Web
| Edited By: |

Updated on:Dec 23, 2023 | 2:35 PM

Share

ಶಾರುಖ್ ಖಾನ್, ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ (Salman Khan) ಈಗ ಒಳ್ಳೆಯ ಗೆಳೆಯುರು. ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ಆದರೆ ಈ ಮೊದಲು ಈ ರೀತಿ ಇರಲಿಲ್ಲ. ಶಾರುಖ್ ಖಾನ್ ಅವರನ್ನು ಕಂಡರೆ ಆಮಿರ್ ಖಾನ್​ಗೆ ಆಗುತ್ತಿರಲಿಲ್ಲ. ಈಗ ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ರಿಲೀಸ್ ಆಗಿದೆ. ಈ ಸಂದರ್ಭದಲ್ಲಿ ಆಮಿರ್ ಖಾನ್ ಅವರ ಹಳೆಯ ಸಂದರ್ಶನದ ತುಣುಕು ವೈರಲ್ ಆಗಿದೆ ‘ಶಾರುಖ್ ಖಾನ್​ಗೆ ಒಳ್ಳೆಯ ಪಿಆರ್ ಟೀಂ ಸಿಕ್ಕಿದೆ’ ಎಂದು ಅವರು ಹೇಳಿದ್ದರು.

ಬಹುತೇಕ ಸೆಲೆಬ್ರಿಟಿಗಳಿಗೆ ಪಿಆರ್ ತಂಡ ಇರುತ್ತದೆ. ನಟನ ಬಗ್ಗೆ ಮಾಧ್ಯಮದಲ್ಲಿ ಪಾಸಿಟಿವ್ ಆಗಿ ಸುದ್ದಿಗಳು ಪಬ್ಲಿಶ್ ಆಗುವಂತೆ ನೋಡಿಕೊಳ್ಳೋದು ಈ ತಂಡದ ಕೆಲಸ. ಹೋದಲ್ಲಿ ಬಂದಲ್ಲಿ ಅವರಿಗೆ ಪ್ರಚಾರ ಸಿಗುವಂತೆ ನೋಡಿಕೊಳ್ಳುತ್ತಾರೆ. ಒಟ್ಟಿನಲ್ಲಿ ಹೀರೋನ ಹೆಸರು ಸದಾ ಪ್ರಚಲಿತದಲ್ಲಿ ಇರುವಂತೆ ನೋಡಿಕೊಳ್ಳುತ್ತಾರೆ. ಈ ಬಗ್ಗೆ ಆಮಿರ್ ಖಾನ್ ಅವರು ಮಾತನಾಡಿದ್ದರು. ಈ ವಿಡಿಯೋನ ವೈರಲ್ ಮಾಡಲಾಗುತ್ತಿದೆ.

‘ಶಾರುಖ್ ಖಾನ್ ಅವರ ಶಕ್ತಿ ಎಂದರೆ ಅವರಿಗೆ ಒಳ್ಳೆಯ ಪ್ರಚಾರ ತಂಡ ಸಿಕ್ಕಿದೆ. ಮಾಧ್ಯಮದವರನ್ನು ಸರಿಯಾಗಿ ನಿರ್ವಹಿಸುವ ಮತ್ತು ಅವರನ್ನು ಖುಷಿಯಾಗಿಡುವ ಗುಣ ಅವರಲ್ಲಿ ಇದೆ. ಎಲ್ಲರಲ್ಲೂ ಆ ಕಲೆ ಇಲ್ಲ. ಇದನ್ನು ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ’ ಎಂದು ಆಮಿರ್ ಖಾನ್ ಹೇಳಿದ್ದರು.

ಆಮಿರ್ ಖಾನ್ ಹೇಳಿದ ಮಾತನ್ನು ಅನೇಕರು ಈಗಲೂ ಒಪ್ಪುತ್ತಾರೆ. ಶಾರುಖ್ ಖಾನ್ ಅವರು ಸಿನಿಮಾ ರಿಲೀಸ್ ಸಂದರ್ಭದಲ್ಲಿ ಅಭಿಮಾನಿಗಳ ಟ್ವೀಟ್​ಗಳನ್ನು ರೀಟ್ವೀಟ್ ಮಾಡುತ್ತಾರೆ. ಈ ಟ್ವೀಟ್​ಗಳನ್ನು ಮಾಡೋದು ಶಾರುಖ್ ಖಾನ್ ಅವರ ಪಿಆರ್ ತಂಡ ಅನ್ನೋದು ಅನೇಕರ ಅಭಿಪ್ರಾಯ. ಆದರೆ, ಈ ಬಗ್ಗೆ ಶಾರುಖ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Aamir Khan talking about SRK’s PR and how good he is at manipulating media. Nepo Daddy was always an insecure superstar. byu/Siyaah_ inBollyBlindsNGossip

ಇದನ್ನೂ ಓದಿ: ಶಾರುಖ್ ಖಾನ್, ಅಜಯ್, ಅಕ್ಷಯ್​ ಕುಮಾರ್​ಗೆ ನೊಟೀಸ್

ಶಾರುಖ್ ಖಾನ್ ಅವರು ಸದ್ಯ ‘ಡಂಕಿ’ ಸಿನಿಮಾ ರಿಲೀಸ್ ಆದ ಖುಷಿಯಲ್ಲಿದ್ದಾರೆ. ಎರಡು ದಿನಕ್ಕೆ ಈ ಸಿನಿಮಾ ಭಾರತದಲ್ಲಿ 50 ಕೋಟಿ ರೂಪಾಯಿ ಗಳಿಕೆ ಮಾಡಿದೆ.  ಆಮಿರ್ ಖಾನ್ ಅವರು ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಈ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Sat, 23 December 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ