AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋ ಹಾಗೂ ನಟಿಯರ ವಯಸ್ಸಿನ ಅಂತರದಲ್ಲಿ ಅಜಗಜಾಂತರ; ಹುಟ್ಟಿದೆ ಚರ್ಚೆ

ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ನಟ ಮತ್ತು ನಟಿಯರ ವಯಸ್ಸಿನ ಅಂತರದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಮಲ್ ಹಾಸನ್, ಸೂರ್ಯ, ಚಿರಂಜೀವಿ ಮುಂತಾದ ನಟರ ಜೊತೆ ಯುವ ನಟಿಯರು ನಟಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ನಡುವಿನ ವಯಸ್ಸಿನ ಅಂತರವೂ ಟೀಕೆಗೆ ಗುರಿಯಾಗಿದೆ.

ಹೀರೋ ಹಾಗೂ ನಟಿಯರ ವಯಸ್ಸಿನ ಅಂತರದಲ್ಲಿ ಅಜಗಜಾಂತರ; ಹುಟ್ಟಿದೆ ಚರ್ಚೆ
ಹೀರೋ ಹಾಗೂ ನಟಿಯರ ವಯಸ್ಸಿನ ಅಂತರದಲ್ಲಿ ಅಜಗಜಾಂತರ; ಹುಟ್ಟಿದೆ ಚರ್ಚೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 28, 2025 | 8:05 AM

Share

ಹೀರೋ ಹಾಗೂ ಹೀರೋಯಿನ್ ವಯಸ್ಸಿನ ಅಂತರವು ಚಿತ್ರರಂಗದಲ್ಲಿ ಪ್ರಮುಖ ವಿಷಯ ಆಗಿರುತ್ತದೆ. ಹೀರೋಗೆ ವಯಸ್ಸಾದರೂ ಯಂಗ್ ಹೀರೋಯಿನ್​ಗಳ ಜೊತೆ ರೊಮ್ಯಾನ್ ಮಾಡಿದ ಸಾಕಷ್ಟು ಉದಾಹರಣೆ ಇದೆ. ಈ ರೀತಿ ಆದಾಗ ಕೆಲವೊಮ್ಮೆ ಸಾಕಷ್ಟು ಟೀಕೆಗಳು ಮೂಡಿದ ಉದಾಹರಣೆ ಇದೆ. ಈಗಲೂ ಹಾಗೆಯೇ ಆಗಿದೆ. ಟಾಲಿವುಡ್ (Tollywood) ಹಾಗೂ ಕಾಲಿವುಡ್​ನಲ್ಲಿ ವಯಸ್ಸಿನ ಅಂತರವು ಮತ್ತೊಮ್ಮೆ ಚರ್ಚೆಗೆ ಬಂದಿದೆ. ಆ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಕಮಲ್ ಹಾಸನ್, ಅಭಿರಾಮಿ ಹಾಗೂ ತ್ರಿಷಾ

ಕಮಲ್ ಹಾಸನ್ ಹಾಗೂ ಅಭಿರಾಮಿ, ತ್ರಿಷಾ ಕೃಷ್ಣನ್ ಅವರು ‘ಥಗ್ ಲೈಫ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಕಮಲ್ ಹಾಸನ್ ಹಾಗೂ ಅಭಿರಾಮಿ ಮಧ್ಯೆ ಕಿಸ್ಸಿಂಗ್ ದೃಶ್ಯ ಕೂಡ ವೈರಲ್ ಆಯ್ತು. ಇವರ ಮಧ್ಯೆ ಸುಮಾರು 29 ವರ್ಷ ವಯಸ್ಸಿನ ಅಂತರ ಇದೆ. ತ್ರಿಷಾ ಹಾಗೂ ಕಮಲ್ ನಡುವೆ 28 ವರ್ಷ ಗ್ಯಾಪ್ ಇದೆ. ಈ ವಿಚಾರ ಸೋಶಿಯ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ಸೂರ್ಯ ಹಾಗೂ ಮಮಿತಾ ಬೈಜು

ಸೂರ್ಯ ಹಾಗೂ ಮಮಿತಾ ಬೈಜು ಅವರು ಇತ್ತೀಚೆಗೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಇವರಿಬ್ಬರೂ ಹೀರೋ-ಹೀರೋಯಿನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಇದನ್ನು ಅನೇಕರು ಟೀಕೆ ಮಾಡಿದ್ದರು. ಆದರೆ, ಮಮಿತಾ ಜೊತೆ ಸೂರ್ಯ ಅವರು ರೊಮ್ಯಾನ್ಸ್ ಮಾಡೋದಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ
Image
ನಟಿ ದೀಪಿಕಾಗೆ ಕ್ಯಾನ್ಸರ್; ಹೊಟ್ಟೆಯಲ್ಲಿದೆ ಟೆನಿಸ್ ಬಾಲ್ ಆಕಾರದ ಗಡ್ಡೆ
Image
RCB ಗೆಲುವಿನ ಖುಷಿಯಲ್ಲಿ ವಿರಾಟ್​ಗೆ ಮುತ್ತಿನ ಸುರಿಮಳೆ ಸುರಿಸಿದ ಅನುಷ್ಕಾ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್

ಚಿರಂಜೀವಿ ಹಾಗೂ ಶ್ರೀಮುಖಿ

ಚಿರಂಜೀವಿ ಹಾಗೂ ಶ್ರೀಮುಖಿ ಅವರು ಈ ಮೊದಲು ‘ಭೊಲಾ ಶಂಕರ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿ ಟೀಕೆಗೆ ಒಳಗಾದರು. ಇದು ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟುಹಾಕಿತ್ತು. ಆದರೆ, ಇದಕ್ಕೆ ತಂಡ ಹೆಚ್ಚು ತಲೆಕೆಡಸಿಕೊಂಡಿರಲಿಲ್ಲ.  ಇಬ್ಬರ ಮಧ್ಯೆ ಸಾಕಷ್ಟು ವಯಸ್ಸಿನ ಅಂತರ ಇದೆ.

ಇದನ್ನೂ ಓದಿ: ನಟಿ ಸಾಯಿ ಧನ್ಶಿಕಾ ಜೊತೆ ಮದುವೆಗೆ ಸಜ್ಜಾದ ಕಾಲಿವುಡ್ ನಟ ವಿಶಾಲ್

ರಶ್ಮಿಕಾ-ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಈ ಮೊದಲು ‘ಸಿಕಂದರ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಈ ಬಗ್ಗೆ ಸಲ್ಮಾನ್ ಖಾನ್ ಓಪನ್ ಆಗಿ ಮಾತನಾಡಿದ್ದರು. ‘ಅವರ ಅಪ್ಪನಿಗೇ ಇಲ್ಲದ ಸಮಸ್ಯೆ ನಿಮಗೇಕೆ’ ಎಂದು ಕೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು