AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ ನೀಡಿದ ಉಂಗುರ ಮತ್ತೆ ಕಳೆದುಕೊಂಡು ಹುಡುಕಾಡಿದ ಅರವಿಂದ್​; ವಿಡಿಯೋ ವೈರಲ್

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಹಾಗೂ ದಿವ್ಯಾ ಉರುಡುಗ ಪ್ರೇಮ ಪಕ್ಷಿಗಳಂತೆ ಇದ್ದರು. ಅರವಿಂದ್ ಎಂದರೆ ತುಂಬಾನೇ ಇಷ್ಟ ಎಂದು ದಿವ್ಯಾ ಸಾಕಷ್ಟು ಬಾರಿ ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದಾರೆ.

ದಿವ್ಯಾ ಉರುಡುಗ ನೀಡಿದ ಉಂಗುರ ಮತ್ತೆ ಕಳೆದುಕೊಂಡು ಹುಡುಕಾಡಿದ ಅರವಿಂದ್​; ವಿಡಿಯೋ ವೈರಲ್
ಅರವಿಂದ್ ಕೆಪಿ
ರಾಜೇಶ್ ದುಗ್ಗುಮನೆ
|

Updated on:Jun 16, 2021 | 7:58 PM

Share

 ದಿವ್ಯಾ ಉರುಡುಗ ಹಾಗೂ ಅರವಿಂದ್​ ಕೆ.ಪಿ. ಬಿಗ್​ ಬಾಸ್ ಮನೆಯಲ್ಲಿ ತುಂಬಾನೇ ಅನ್ಯೋನ್ಯವಾಗಿದ್ದರು. ಇದರ ಸಂಕೇತವಾಗಿ ದಿವ್ಯಾ ತಮ್ಮ ಕೈಯಲ್ಲಿದ್ದ ಉಂಗುರವನ್ನು ಅರವಿಂದ್​ಗೆ ನೀಡಿದ್ದರು. ಆದರೆ, ಬಿಗ್​ ಬಾಸ್​ ಮನೆಯಲ್ಲಿ ಈ ಉಂಗುರ ಕಳೆದುಕೊಂಡು ಅರವಿಂದ್ ಪೇಚಿಗೆ ಸಿಲುಕಿದ್ದರು. ಈಗ ಅವರು ಮತ್ತೆ ಇದೇ ತಪ್ಪು ಮಾಡಿದ್ದಾರೆ! ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಹಾಗೂ ದಿವ್ಯಾ ಉರುಡುಗ ಪ್ರೇಮ ಪಕ್ಷಿಗಳಂತೆ ಇದ್ದರು. ಅರವಿಂದ್ ಎಂದರೆ ತುಂಬಾನೇ ಇಷ್ಟ ಎಂದು ದಿವ್ಯಾ ಸಾಕಷ್ಟು ಬಾರಿ ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ, ಪ್ರತಿ ಸ್ಪರ್ಧಿಗಳು ತಮ್ಮಿಷ್ಟದ ವಸ್ತುಗಳನ್ನು ತಮ್ಮ ಪ್ರೀತಿಪಾತ್ರರಿಗೆ ನೀಡಬೇಕು.

ಆಗ ದಿವ್ಯಾ ಅವರು ತಮ್ಮ ತಂದೆ ನೀಡಿದ ಡೈಮಂಡ್​ ರಿಂಗ್​ಅನ್ನು ಅರವಿಂದ್​ಗೆ ನೀಡಿದ್ದರು. ಅಲ್ಲದೆ, ಇದನ್ನು ಜೋಪಾನವಾಗಿ ನೋಡಿಕೊಳ್ಳುವಂತೆ ಕೋರಿದ್ದರು. ಆದರೆ, ಅರವಿಂದ್​ ಉಂಗುರ ಕಳೆದುಕೊಂಡಿದ್ದರು. ಇದಕ್ಕಾಗಿ ಮನೆ ಮಂದಿಯೆಲ್ಲ ಹುಡುಕಾಡಿದ್ದರು. ಕೊನೆಗೂ ಈ ಉಂಗುರ ಸಿಕ್ಕಿತ್ತು. ನಂತರ ಆ ರಿಂಗ್​ ಅನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ ಎನ್ನುವ ಭರವಸೆಯನ್ನು ದಿವ್ಯಾಗೆ ಅರವಿಂದ್ ನೀಡಿದ್ದರು.

ಬಿಗ್ ಬಾಸ್​​ ಎರಡನೇ ಇನ್ನಿಂಗ್ಸ್​ ಆರಂಭವಾಗುತ್ತಿದೆ. ಇದಕ್ಕೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಈ ವಿಡಿಯೋದಲ್ಲಿ ಅರವಿಂದ್, ‘ಇಲ್ಲೇ ಇಟ್ಟಿದ್ನಲ್ಲ, ಸಿಗುತ್ತಿಲ್ಲ. ಎಲ್ಲೋಯ್ತು? ಮತ್ತೆ ಕಳೆದುಕೊಂಡ್ರೆ ಅಷ್ಟೇ’ ಎಂದು ಉಂಗುರಕ್ಕಾಗಿ ಹುಡುಕಾಡಿದ್ದಾರೆ. ಕೊನೆಗೆ ಆ ಉಂಗುರ ಅವರ ಕೈನಲ್ಲೇ ಇರೋದು ಗಮನಕ್ಕೆ ಬಂದಿದೆ. ‘ಈ ಬಾರಿ ಕಳೆದುಕೊಳ್ಳೋ ಸೀನೆ ಇಲ್ಲ. ನಾನ್​ ರೆಡಿ’ ಎಂದು ಅರವಿಂದ್ ಹೇಳಿದ್ದಾರೆ.

ಈ ವಿಡಿಯೋ ನೋಡಿ ಸಾಕಷ್ಟು ಜನರು ಖುಷಿಪಟ್ಟಿದ್ದಾರೆ. ದಿವ್ಯಾ ಹಾಗೂ ಅರವಿಂದ್​ ಕೆಮಿಸ್ಟ್ರಿ ನೋಡೋಕೆ ನಾವು ರೆಡಿ ಆಗಿದ್ದೇವೆ ಎಂದಿದ್ದಾರೆ. ಬಿಗ್​ ಬಾಸ್​ ಸೀಸನ್​ 8 ಅರ್ಧಕ್ಕೆ ನಿಲ್ಲುವುದಕ್ಕೂ ಮೊದಲು ದಿವ್ಯಾ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದು ಅರವಿಂದ್​ಗೆ ಸಾಕಷ್ಟು ನೋವುಂಟು ಮಾಡಿತ್ತು. ಆದರೆ, ಈಗ ಇಬ್ಬರೂ ಮತ್ತೆ ಒಟ್ಟಾಗಿ ಬಿಗ್​ ಬಾಸ್​ ಮನೆ ಸೇರುತ್ತಿರುವುದಕ್ಕೆ ವೀಕ್ಷಕರು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Divya Suresh: ದಿವ್ಯಾ ಸುರೇಶ್ ಈಗ ರೌಡಿ ಬೇಬಿ; ಮಾದಕ ಲುಕ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿ

Published On - 7:47 pm, Wed, 16 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ