ವಿಚ್ಛೇದನ ಹಿಂಪಡೆಯಲಿದ್ದಾರೆಯೇ ಧನುಶ್ ಮತ್ತು ಐಶ್ವರ್ಯಾ?

ರಜನೀಕಾಂತ್ ಪುತ್ರಿ ಐಶ್ವರ್ಯಾ ಮತ್ತು ಧನುಶ್ ತಮ್ಮ 18 ವರ್ಷಗಳ ದಾಂಪತ್ಯವನ್ನು 2022 ರಲ್ಲಿ ಅಂತ್ಯಗೊಳಿಸಿದ್ದರು. ಆದರೆ ಅವರು ತಮ್ಮ ವಿಚ್ಛೇದನ ನಿರ್ಣಯವನ್ನು ಹಿಂಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ವಿಚ್ಛೇದನ ಹಿಂಪಡೆಯಲಿದ್ದಾರೆಯೇ ಧನುಶ್ ಮತ್ತು ಐಶ್ವರ್ಯಾ?
Follow us
|

Updated on: Oct 08, 2024 | 3:27 PM

ರಜನೀಕಾಂತ್ ಪುತ್ರಿ ಐಶ್ವರ್ಯಾ ಮತ್ತು ಧನುಶ್ ಮದುವೆಯಾಗಿ 18 ವರ್ಷ ಒಟ್ಟಿಗೆ ಸಂಸಾರ ಮಾಡಿದ್ದು ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ಎರಡು ವರ್ಷದ ಹಿಂದೆ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಪರಸ್ಪರ ದೂರಾಗುತ್ತಿರುವುದಾಗಿ ಘೋಷಿಸಿದ್ದರು. ಧನುಶ್ ಹಾಗೂ ಐಶ್ವರ್ಯಾ ತಾವು ವಿಚ್ಛೇದನ ಪಡೆಯಲಿರುವುದಾಗಿ ಘೋಷಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದಾದ ಬಳಿಕ ಇವರಿಬ್ಬರ ಈ ವಿಚ್ಛೇದನಕ್ಕೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು, ರಜನೀಕಾಂತ್ ಅಭಿಮಾನಿಗಳು ಸಹ ವಿರೋಧಿಸಿದ್ದರು. ಆ ನಂತರ ಈ ಜೋಡಿ ಕೆಲ ಸಂದರ್ಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿತು. ಇದೀಗ ಇವರು ತಮ್ಮ ವಿಚ್ಛೇದನ ನಿರ್ಣಯವನ್ನು ಹಿಂಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಧನುಶ್ ಹಾಗೂ ಐಶ್ವರ್ಯಾರ ವಿಚ್ಛೇದನದ ಅರ್ಜಿ ಇನ್ನೂ ವಿಲೇವಾರಿ ಆಗಿಲ್ಲ. ಇಂದು ವಿಚ್ಛೇದನದ ಅರ್ಜಿಯ ವಿಚಾರಣೆ ಇತ್ತು, ಆದರೆ ಇಬ್ಬರೂ ಸಹ ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ನ್ಯಾಯಾಧೀಶರು ವಿಚಾರಣೆಯನ್ನು ಅಕ್ಟೋಬರ್ 19ಕ್ಕೆ ಮುಂದೂಡಿದ್ದಾರೆ. ಕೆಲವು ತಿಂಗಳ ಹಿಂದಷ್ಟೆ ಧನುಶ್ ಹಾಗೂ ಐಶ್ವರ್ಯಾ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ವಿಚ್ಛೇದನ ವಿಚಾರಣೆಗೆ ಹಾಜರಾಗದೇ ಇರುವುದು ಆ ಸುದ್ದಿಗಳಿಗೆ ಪುಷ್ಠಿ ನೀಡಿದೆ.

ಇದನ್ನೂ ಓದಿ:ವಿವಾದ ಇತ್ಯರ್ಥ, ಧನುಶ್​ ಮೇಲೆ ವಿಧಿಸಿದ್ದ ನಿಷೇಧ ತೆರವು

ಧನುಶ್ ಹಾಗೂ ಐಶ್ವರ್ಯಾ 2004 ರಲ್ಲಿ ವಿವಾಹವಾಗಿದ್ದರು. ಐಶ್ವರ್ಯಾ, ರಜನೀಕಾಂತ್​ರ ಹಿರಿಯ ಪುತ್ರಿ. ಇವರು ನಿರ್ದೇಶಕಿ ಸಹ ಹೌದು. ಧನುಶ್ ಹಾಗೂ ಶ್ರುತಿ ಹಾಸನ್ ನಟಿಸಿರುವ ‘3’ ಸಿನಿಮಾವನ್ನು ಐಶ್ವರ್ಯಾ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಸಿನಿಮಾದ ಹಾಡುಗಳು ಭಾರಿ ಯಶಸ್ಸು ಗಳಿಸಿದ್ದವು. 18 ವರ್ಷದ ಬಳಿಕ ಧನುಶ್ ಹಾಗೂ ಐಶ್ವರ್ಯಾ ದೂರಾಗಿದ್ದರು. ವಿಚ್ಛೇದನದ ಸುದ್ದಿ ಹೊರಬಿದ್ದಾಗ ಅಭಿಮಾನಿಗಳು ತೀವ್ರ ಬೇಸರ, ವಿರೋಧ ವ್ಯಕ್ತಪಡಿಸಿದ್ದರು. ರಜನೀಕಾಂತ್​ಗೆ ಅನಾರೋಗ್ಯವೂ ಇದರಿಂದಲೇ ಆಯ್ತೆಂದು ಸಹ ಸುದ್ದಿಗಳು ಹರಿದಾಡಿದ್ದವು.

‘3’ ಮಾತ್ರವೇ ಅಲ್ಲದೆ, ‘ವಾಯ್ ರಾಜಾ ವಾಯ್’ ಸಿನಿಮಾ ನಿರ್ದೇಶನ ಮಾಡಿದ್ದರು. ತಮಿಳು ಸಿನಿಮಾ ಇತಿಹಾಸದ ಬಗ್ಗೆ ‘ಸಿನಿಮಾ ವೀರನ್’ ಹೆಸರಿನ ಡಾಕ್ಯುಮೆಂಟರಿ ನಿರ್ದೇಶನ ಮಾಡಿದ್ದರು. ಇತ್ತೀಚೆಗಷ್ಟೆ ರಜನೀಕಾಂತ್, ಕಪಿಲ್ ದೇವ್ ಇನ್ನಿತರರು ನಟಿಸಿದ್ದ ‘ಲಾಲ್ ಸಲಾಂ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿತು. ಇನ್ನು ಧನುಶ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೆ ‘ರಾಯನ್’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು. ಸಿನಿಮಾ ಹಿಟ್ ಆಯ್ತು. ಇದೀಗ ‘ಕುಬೇರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಿಂದಿಯ ಒಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಹಾಲಿವುಡ್​ನ ಸಿನಿಮಾದಲ್ಲಿಯೂ ನಟಿಸಲಿದ್ದಾರೆ. ‘ಇಡ್ಲಿ ಕಡೈ’ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ