AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ

ಕಾನ್ 2026ರಲ್ಲಿ ಐಶ್ವರ್ಯಾ ರೈ ಮತ್ತು ಆರಾಧ್ಯ ಬಚ್ಚನ್ ರೆಡ್ ಕಾರ್ಪೆಟ್ ಮೇಲೆ ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ. ಪ್ರತಿ ವರ್ಷ ತಾಯಿಯೊಂದಿಗೆ ಬರುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಕಾಣಿಸಿಕೊಂಡರು. ಲೊರಿಯಲ್ ಪ್ಯಾರಿಸ್‌ನ ಕಾರ್ಯಕ್ರಮದಲ್ಲಿ ತಾಯಿ-ಮಗಳ ಜೋಡಿ ಎಲ್ಲರ ಗಮನ ಸೆಳೆಯಿತು.

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ
ಆರಾಧ್ಯಾ-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: May 23, 2026 | 10:12 AM

Share

ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಆರಾಧ್ಯ ಬಚ್ಚನ್ ಕೆಂಪು ಬಣ್ಣದ ಗೌನ್ ಧರಿಸಿ ಕಂಗೊಳಿಸಿದರು. ಐಶ್ವರ್ಯಾ ರೈ ಗುಲಾಬಿ ಬಣ್ಣದ ಆಕರ್ಷಕ ಉಡುಪಿನಲ್ಲಿ ಅದ್ಭುತವಾಗಿ ಕಾಣಿಸಿಕೊಂಡರು. ಐಶ್ವರ್ಯಾ ಅವರ ಡ್ರೆಸ್ ಹೂವಿನ ಅಲಂಕಾರದಿಂದ ಕೂಡಿದ್ದು, ಎಂದಿನ ತಮ್ಮ ಸಿಗ್ನೇಚರ್ ರೆಡ್ ಲಿಪ್ಸ್ಟಿಕ್ ಬದಲಿಗೆ ಈ ಬಾರಿ ಲೈಟ್ ಮೇಕ್ಅಪ್ ಲುಕ್‌ನಲ್ಲಿ ಎಲ್ಲರ ಮನ ಗೆದ್ದರು. ಸದ್ಯ ಇವರಿಬ್ಬರ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

ಈ ಮೊದಲು ಐಶ್ವರ್ಯಾ ರೈ ಪ್ರಸಿದ್ಧ ಡಿಸೈನರ್ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ‘ಅಬಿಸ್ ಬ್ಲೂ’ ಬಣ್ಣದ ಕೌತುಕದ ಉಡುಪಿನಲ್ಲಿ ಕಾಣಿಸಿಕೊಂಡಿದ್ದರು. ಬೆಳಕಿಗೆ ತಕ್ಕಂತೆ ಬಣ್ಣ ಬದಲಾಯಿಸುವ ಈ ವಿಶಿಷ್ಟ ಕಾಸ್ಮಿಕ್ ಡ್ರೆಸ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸೌಂಡ್ ಮಾಡಿತ್ತು.

ಇದನ್ನೂ ಓದಿ: ಮಗಳು ಆರಾಧ್ಯಾ ಜೊತೆ ಕಾನ್ ಸಿನಿಮೋತ್ಸವಕ್ಕೆ ತೆರಳಿದ ಐಶ್ವರ್ಯಾ ರೈ

ಈ ವರ್ಷ ಕಾನ್ ಸಿನಿಮೋತ್ಸವದಲ್ಲಿ ಐಶ್ವರ್ಯಾ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಳ್ಳದಿದ್ದಾಗ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಆದರೆ, ವರದಿಗಳ ಪ್ರಕಾರ ಅವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ಈಗ ಮಗಳ ಜೊತೆ ಗ್ರಾಂಡ್ ಎಂಟ್ರಿ ಕೊಡುವ ಮೂಲಕ ತಮ್ಮ ಗ್ಲೋಬಲ್ ಕ್ರೇಜ್ ಅನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ