AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya Rai: ಖ್ಯಾತ ನಟಿ ಐಶ್ವರ್ಯಾ ರೈಗೆ ಭೂ ಸಂಕಷ್ಟ, ಮನೆಗೆ ಬಂತು ನೋಟಿಸ್

ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ನಾಸಿಕ್ ಭೂಕಂದಾಯ ಇಲಾಖೆ ನೋಟಿಸ್ ನೀಡಿದೆ. ಹೌದು ನಾಸಿಕ್‌ನಲ್ಲಿ ಆಸ್ತಿ ಹೊಂದಿರುವ ನಟಿ ಐಶ್ವರ್ಯಾ ರೈ ಭೂ ತೆರಿಗೆ ಪಾವತಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

Aishwarya Rai: ಖ್ಯಾತ ನಟಿ ಐಶ್ವರ್ಯಾ ರೈಗೆ ಭೂ ಸಂಕಷ್ಟ, ಮನೆಗೆ ಬಂತು ನೋಟಿಸ್
Aishwarya Rai
TV9 Web
| Edited By: |

Updated on:Jan 17, 2023 | 5:46 PM

Share

ಮಹಾರಾಷ್ಟ್ರ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ (Aishwarya Rai) ಅವರಿಗೆ  ನಾಸಿಕ್ ಭೂಕಂದಾಯ ಇಲಾಖೆ ನೋಟಿಸ್ ನೀಡಿದೆ. ಹೌದು ನಾಸಿಕ್‌ನಲ್ಲಿ ಆಸ್ತಿ ಹೊಂದಿರುವ ನಟಿ ಐಶ್ವರ್ಯಾ ರೈ ಅವರು  ಭೂ ತೆರಿಗೆ ಪಾವತಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ನಟಿ ಐಶ್ವರ್ಯಾ ರೈಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಟಿ ನಾಸಿಕ್​ನಲ್ಲಿ ಆಸ್ತಿಯನ್ನು ಹೊಂದಿದ್ದು ಇದೀಗ ಒಂದು ವರ್ಷದಿಂದ ಆ ಭೂಮಿಗೆ ಸಂಬಂಧಿಸಿದಂತೆ ಯಾವುದೇ ತೆರಿಗೆ ಪಾವತಿಸಿಲ್ಲ. ಹೀಗಾಗಿ, ಜಿಲ್ಲಾಡಳಿತದ ಸಂಬಂಧಪಟ್ಟ ಅಧಿಕಾರಿಗಳು ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಗೆ ನೋಟಿಸ್ ಕಳುಹಿಸಿದ್ದಾರೆ.

ವರದಿಗಳ ಪ್ರಕಾರ, ಐಶ್ವರ್ಯಾ ಅವರು ಸಿನ್ನಾರ್‌ನ ತಂಗಾವ್ ಬಳಿಯ ನಾಸಿಕ್‌ನ ಅಡ್ವಾಡಿಯಲ್ಲಿ ಆಸ್ತಿ ಹೊಂದಿದ್ದಾರೆ. ಅವರು ಈ ಪ್ರದೇಶದಲ್ಲಿ ಸುಮಾರು ಒಂದು ಹೆಕ್ಟೇರ್ ಭೂಮಿಯನ್ನು ಹೊಂದಿದ್ದಾರೆಂದು ವರದಿಯಾಗಿದೆ. ಹಲವಾರು ಜ್ಞಾಪನೆಗಳ ಹೊರತಾಗಿಯೂ ಕಳೆದ ಮೌಲ್ಯಮಾಪನ ವರ್ಷದಿಂದ ಈ ಭೂಮಿಗೆ ತೆರಿಗೆ ಪಾವತಿಸಲಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದರ ಪರಿಣಾಮವಾಗಿ ಸಿನ್ನಾರ್ ತಹಸೀಲ್ದಾರ್ ಇದೀಗ ನಟಿಗೆ ನೋಟಿಸ್ ಕಳುಹಿಸಿದ್ದಾರೆ ಎಂದು  ವರದಿ ತಿಳಿಸಿದೆ.

ಇದನ್ನು ಓದಿ: Aishwarya Rai Bachchan: ಮಗಳು ಆರಾಧ್ಯಾ ತುಟಿಗೆ ಮುತ್ತು ನೀಡಿ ಬರ್ತ್​ಡೇ ವಿಶ್​ ಮಾಡಿದ ಐಶ್ವರ್ಯಾ ರೈ​; ನೆಟ್ಟಿಗರ ತಕರಾರು

ಐಶ್ವರ್ಯಾ ಅವರು ಭೂ ತೆರಿಗೆಯಲ್ಲಿ 21,960 ರೂ. ಬಾಕಿಯನ್ನು ಸ್ವೀಕರಿಸಿದ 10 ದಿನಗಳಲ್ಲಿ ಪಾವತಿಸದಿದ್ದರೆ, ಐಶ್ವರ್ಯಾ ವಿರುದ್ಧ ಮಹಾರಾಷ್ಟ್ರ ಭೂಕಂದಾಯ ಕಾಯಿದೆ, 1966 ರ ಕಲಂ 174 ರ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ ಹೇಳುತ್ತದೆ ಎಂದು ಏಷ್ಯಾನೆಟ್ ವರದಿ ಉಲ್ಲೇಖಿಸಿದೆ.

ಜನವರಿ 9ರಂದು ನೋಟಿಸ್ ನೀಡಲಾಗಿದೆ ಆದರೆ ಐಶ್ವರ್ಯಾ ಅವರು ನೋಟಿಸ್ ಸ್ವೀಕರಿಸಿದ್ದಾರೆಯೇ ಅಥವಾ ಅದಕ್ಕೆ ಪ್ರತಿಕ್ರಿಯಿಸಿದ್ದಾರೆಯೇ ಎಂಬುದು ಇನ್ನೂ ತಿಳಿದು ಬಂದಿಲ್ಲ. ಸಿನ್ನಾರ್‌ನಲ್ಲಿರುವ 1200 ಆಸ್ತಿ ಮಾಲೀಕರಲ್ಲಿ ಐಶ್ವರ್ಯಾ ಕೂಡ ಒಬ್ಬರು, ಅವರು ತಮ್ಮ ತೆರಿಗೆಯನ್ನು ಪಾವತಿಸದಕ್ಕೆ ಈ ನೋಟಿಸ್‌ಗಳನ್ನು ಕಳುಹಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ (ಮಾರ್ಚ್ ಅಂತ್ಯದೊಳಗೆ) ಎಲ್ಲಾ ಬಾಕಿಗಳನ್ನು ಸಂಗ್ರಹಿಸಲು ಮಹಾರಾಷ್ಟ್ರದ ಭೂಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ, ಅದಕ್ಕಾಗಿಯೇ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Tue, 17 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್