AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮಧ್ಯೆಯೂ ಐಶ್ವರ್ಯಾ ಕುಟುಂಬಕ್ಕೆ ವಿಶೇಷ ದಿನ; ಕೇಕ್​ ಕತ್ತರಿಸಿ ಸಂಭ್ರಮ

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಮಹಾರಾಷ್ಟ್ರ ಸೇರಿ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಹೋಗೋಕೆ ಸಾಧ್ಯವಾಗುತ್ತಿಲ್ಲ.

ಲಾಕ್​ಡೌನ್​ ಮಧ್ಯೆಯೂ ಐಶ್ವರ್ಯಾ ಕುಟುಂಬಕ್ಕೆ ವಿಶೇಷ ದಿನ; ಕೇಕ್​ ಕತ್ತರಿಸಿ ಸಂಭ್ರಮ
ಐಶ್ವರ್ಯಾ ರೈ ಕುಟುಂಬ
ರಾಜೇಶ್ ದುಗ್ಗುಮನೆ
|

Updated on:Jun 01, 2021 | 7:10 PM

Share

ಆರಾಧ್ಯಾ ಹುಟ್ಟಿದ ನಂತರದಲ್ಲಿ ನಟಿ ಐಶ್ವರ್ಯಾ ರೈ ಚಿತ್ರರಂಗದಿಂದ ಅಂತರ ಕಾಯ್ದುಕೊಂಡರು. ಮಗು ಹಾಗೂ ಕುಟುಂಬದ ಆರೈಕೆಯಲ್ಲಿ ಹೆಚ್ಚು ಬ್ಯುಸಿ ಆದರು. ಈಗ ತಮ್ಮನ್ನು ಆರೈಕೆ ಮಾಡಿದ ಅವರ ತಾಯಿ ಬೃಂದ್ಯ ರೈ ಅವರ 70ನೇ ಜನ್ಮದಿನವನ್ನು ಮನೆಯಲ್ಲೇ ಸಿಂಪಲ್​ ಆಗಿ ಆಚರಿಸಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿವೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಮಹಾರಾಷ್ಟ್ರ ಸೇರಿ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಹೋಗೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಐಶ್ವರ್ಯಾ ರೈ, ಅಭಿಷೇಕ್​ ಬಚ್ಚನ್​, ಆರಾಧ್ಯ ಮತ್ತು ಬೃಂದ್ಯ ರೈ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ. ಬೃಂದ್ಯ ರೈ ಅವರ 70ನೇ ಜನ್ಮದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ.

ಡೈನಿಂಗ್ ಟೇಬಲ್​ ಮೇಲೆ, ಹೂವು, ಕೇಕ್​ಗಳನ್ನು ಇಡಲಾಗಿದೆ. ನಾನಾ ರೀತಿಯ ಕೇಕ್​ಗಳನ್ನು ಮನೆಯಲ್ಲೇ ಮಾಡಿದ್ದು ಎನ್ನಲಾಗಿದೆ. ಈ ಫೋಟೋಗಳನ್ನು ಐಶ್ವರ್ಯಾ ರೈ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋ ನೋಡಿದ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಐಶ್ವರ್ಯಾ ತಾಯಿಗೆ ಶುಭಾಶಯಗಳ ಸುರಿಮಳೆ ಸುರಿಸಿದ್ದು, ನೂರು ಕಾಲ ಬಾಳುವಂತೆ ಶುಭಹಾರೈಸಿದ್ದಾರೆ. ಅಲ್ಲದೆ, ಕೆಲವರು ಐಶ್ವರ್ಯಾ ಅವರ ಬಳಿ ಮತ್ತೆ ಚಿತ್ರರಂಗಕ್ಕೆ ಮರಳುವಂತೆ ಆಹ್ವಾನ ನೀಡಿದ್ದಾರೆ.

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಐಶ್ವರ್ಯಾ ರೈ ಸದ್ಯ, ಮಣಿ ರತ್ನ ಅವರ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪುರುಷ ಮಾಡೆಲ್​ ವಿಚಾರಕ್ಕೆ ಕಿತ್ತಾಡಿಕೊಂಡಿದ್ದ ಐಶ್ವರ್ಯಾ ರೈ-ಮನಿಷಾ ಕೊಯಿರಾಲಾ; ಬಚ್ಚನ್​ ಸೊಸೆಯ ಕಣ್ಣೀರ ಕಥೆ

ಪತಿ ಅಭಿಷೇಕ್​ ಎದುರಲ್ಲೇ ಐಶ್ವರ್ಯಾ ರೈಗೆ ಅಪರಿಚಿತ ವ್ಯಕ್ತಿಯ ಮದುವೆ​ ಪ್ರಪೋಸ್​; ವಿಡಿಯೋ ವೈರಲ್​

Published On - 7:36 pm, Wed, 26 May 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!