AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya Rajesh: ‘ರಶ್ಮಿಕಾ ಮಂದಣ್ಣ ಬಗ್ಗೆ ನಾನು ಹಾಗೆಲ್ಲ ಹೇಳಿಲ್ಲ’: ವಿವಾದದ ಬಳಿಕ ಐಶ್ವರ್ಯಾ ರಾಜೇಶ್​ ಸ್ಪಷ್ಟನೆ

Rashmika Mandanna: ಐಶ್ವರ್ಯಾ ರಾಜೇಶ್ ಅವರ ಹೇಳಿಕೆಯನ್ನು ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಟ್ರೋಲ್​ ಮಾಡಿದ್ದರು. ಅದರ ಬೆನ್ನಲ್ಲೇ ನಟಿಯ​ ಕಡೆಯಿಂದ ಸ್ಪಷ್ಟನೆ ಬಂದಿದೆ.

Aishwarya Rajesh: ‘ರಶ್ಮಿಕಾ ಮಂದಣ್ಣ ಬಗ್ಗೆ ನಾನು ಹಾಗೆಲ್ಲ ಹೇಳಿಲ್ಲ’: ವಿವಾದದ ಬಳಿಕ ಐಶ್ವರ್ಯಾ ರಾಜೇಶ್​ ಸ್ಪಷ್ಟನೆ
ಐಶ್ವರ್ಯಾ ರಾಜೇಶ್
ಮದನ್​ ಕುಮಾರ್​
|

Updated on: May 18, 2023 | 3:50 PM

Share

ನಟಿ ಐಶ್ವರ್ಯಾ ರಾಜೇಶ್​ (Aishwarya Rajesh) ಅವರು ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ (Rashmika Mandanna) ಬಗ್ಗೆ ಅವರು ಆಡಿದ ಮಾತುಗಳು ಚರ್ಚೆಗೆ ಕಾರಣ ಆಗಿದ್ದವು. ಆದರೆ ಈಗ ತಮ್ಮ ಹೇಳಿಕೆ ಬಗ್ಗೆ ಐಶ್ವರ್ಯಾ ರಾಜೇಶ್​ ಅವರು ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದು ಅವರು ಹೇಳಿದ್ದಾರೆ. ‘ಪುಷ್ಪ (Pushpa) ಸಿನಿಮಾದಲ್ಲಿನ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣ ಅವರಿಗಿಂತ ನಾನೇ ಚೆನ್ನಾಗಿ ಮಾಡುತ್ತಿದ್ದೆ’ ಎಂದು ಐಶ್ವರ್ಯಾ ರಾಜೇಶ್​ ಹೇಳಿದ್ದರು ಎಂದು ಸುದ್ದಿ ಆಗಿತ್ತು. ಆ ವಿಚಾರ ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಟ್ರೋಲ್​ ಮಾಡಿದ್ದರು. ಅದರ ಬೆನ್ನಲ್ಲೇ ಐಶ್ವರ್ಯಾ ರಾಜೇಶ್​ ಕಡೆಯಿಂದ ಸ್ಪಷ್ಟನೆ ಬಂದಿದೆ.

ಐಶ್ವರ್ಯಾ ರಾಜೇಶ್​ ಪರವಾಗಿ ಅವರ ಪಿ.ಆರ್​. ತಂಡದವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಕೆಲಸದ ಬಗ್ಗೆ ಮಾತನಾಡುವಾಗ, ತೆಲುಗು ಚಿತ್ರರಂಗದಲ್ಲಿ ನಾನು ಯಾವ ರೀತಿಯ ಪಾತ್ರಗಳನ್ನು ಮಾಡಲು ಬಯಸುತ್ತೇನೆ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನನ್ನನ್ನು ಕೇಳಲಾಯಿತು. ನಾನು ತೆಲುಗು ಚಿತ್ರರಂಗವನ್ನು ತುಂಬಾ ಇಷ್ಟಪಡುತ್ತೇನೆ ಮತ್ತು ನನಗೆ ಇಷ್ಟವಾಗುವ ಪಾತ್ರಗಳು ಸಿಕ್ಕರೆ ನಾನು ಖಂಡಿತವಾಗಿಯೂ ತೆಲುಗು ಚಿತ್ರಗಳನ್ನು ಮಾಡುತ್ತೇನೆ ಎಂದು ಉತ್ತರಿಸಿದೆ. ಒಂದು ಉದಾಹರಣೆಯನ್ನು ಹೇಳುವುದಾದರೆ, ಪುಷ್ಪದಲ್ಲಿನ ಶ್ರೀವಲ್ಲಿ ಪಾತ್ರವು ನನಗೆ ತುಂಬಾ ಇಷ್ಟವಾಯಿತು ಹಾಗೂ ಅಂತಹ ಪಾತ್ರಗಳು ನನಗೆ ಸರಿಹೊಂದುತ್ತವೆ ಅಂತ ನಾನು ತಿಳಿಸಿದೆ’ ಎಂದಿದ್ದಾರೆ ಐಶ್ವರ್ಯಾ ರಾಜೇಶ್​.

‘ಆದರೆ, ದುರದೃಷ್ಟವಶಾತ್, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಅದ್ಭುತ ಕೆಲಸವನ್ನು ನಾನು ಅವಹೇಳನ ಮಾಡುತ್ತಿದ್ದೇನೆ ಎಂಬ ಭಾವನೆಯನ್ನು ಮೂಡಿಸುವ ರೀತಿಯಲ್ಲಿ ವರದಿ ಮಾಡಲಾಗುತ್ತಿದೆ’ ಎಂದು ಐಶ್ವರ್ಯಾ ರಾಜೇಶ್​ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Mrunal Thakur: ‘ನ್ಯಾಷನಲ್​ ಕ್ರಶ್​’ ಬಿರುದು ಪಡೆದುಕೊಂಡ ಮೃಣಾಲ್​ ಠಾಕೂರ್​; ಈಗ ರಶ್ಮಿಕಾ ಮಂದಣ್ಣ ಪಾಡು ಏನು?

‘ಆ ಹೇಳಿಕೆಯಿಂದ ಉಂಟಾದ ಗೊಂದಲವನ್ನು ನಿವಾರಿಸಲು ಈ ಸ್ಪಷ್ಟನೆ ನೀಡುತ್ತಿದ್ದೇನೆ. ‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಅವರ ಕೆಲಸದ ಬಗ್ಗೆ ನನಗೆ ತುಂಬಾ ಅಭಿಮಾನವಿದೆ ಮತ್ತು ನನ್ನ ಎಲ್ಲಾ ಸಹ ನಟ-ನಟಿಯರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಐಶ್ವರ್ಯಾ ರಾಜೇಶ್​ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್