Aishwarya Rajesh: ‘ರಶ್ಮಿಕಾ ಮಂದಣ್ಣ ಬಗ್ಗೆ ನಾನು ಹಾಗೆಲ್ಲ ಹೇಳಿಲ್ಲ’: ವಿವಾದದ ಬಳಿಕ ಐಶ್ವರ್ಯಾ ರಾಜೇಶ್​ ಸ್ಪಷ್ಟನೆ

Rashmika Mandanna: ಐಶ್ವರ್ಯಾ ರಾಜೇಶ್ ಅವರ ಹೇಳಿಕೆಯನ್ನು ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಟ್ರೋಲ್​ ಮಾಡಿದ್ದರು. ಅದರ ಬೆನ್ನಲ್ಲೇ ನಟಿಯ​ ಕಡೆಯಿಂದ ಸ್ಪಷ್ಟನೆ ಬಂದಿದೆ.

Aishwarya Rajesh: ‘ರಶ್ಮಿಕಾ ಮಂದಣ್ಣ ಬಗ್ಗೆ ನಾನು ಹಾಗೆಲ್ಲ ಹೇಳಿಲ್ಲ’: ವಿವಾದದ ಬಳಿಕ ಐಶ್ವರ್ಯಾ ರಾಜೇಶ್​ ಸ್ಪಷ್ಟನೆ
ಐಶ್ವರ್ಯಾ ರಾಜೇಶ್
Follow us
|

Updated on: May 18, 2023 | 3:50 PM

ನಟಿ ಐಶ್ವರ್ಯಾ ರಾಜೇಶ್​ (Aishwarya Rajesh) ಅವರು ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ (Rashmika Mandanna) ಬಗ್ಗೆ ಅವರು ಆಡಿದ ಮಾತುಗಳು ಚರ್ಚೆಗೆ ಕಾರಣ ಆಗಿದ್ದವು. ಆದರೆ ಈಗ ತಮ್ಮ ಹೇಳಿಕೆ ಬಗ್ಗೆ ಐಶ್ವರ್ಯಾ ರಾಜೇಶ್​ ಅವರು ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದು ಅವರು ಹೇಳಿದ್ದಾರೆ. ‘ಪುಷ್ಪ (Pushpa) ಸಿನಿಮಾದಲ್ಲಿನ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣ ಅವರಿಗಿಂತ ನಾನೇ ಚೆನ್ನಾಗಿ ಮಾಡುತ್ತಿದ್ದೆ’ ಎಂದು ಐಶ್ವರ್ಯಾ ರಾಜೇಶ್​ ಹೇಳಿದ್ದರು ಎಂದು ಸುದ್ದಿ ಆಗಿತ್ತು. ಆ ವಿಚಾರ ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಟ್ರೋಲ್​ ಮಾಡಿದ್ದರು. ಅದರ ಬೆನ್ನಲ್ಲೇ ಐಶ್ವರ್ಯಾ ರಾಜೇಶ್​ ಕಡೆಯಿಂದ ಸ್ಪಷ್ಟನೆ ಬಂದಿದೆ.

ಐಶ್ವರ್ಯಾ ರಾಜೇಶ್​ ಪರವಾಗಿ ಅವರ ಪಿ.ಆರ್​. ತಂಡದವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಕೆಲಸದ ಬಗ್ಗೆ ಮಾತನಾಡುವಾಗ, ತೆಲುಗು ಚಿತ್ರರಂಗದಲ್ಲಿ ನಾನು ಯಾವ ರೀತಿಯ ಪಾತ್ರಗಳನ್ನು ಮಾಡಲು ಬಯಸುತ್ತೇನೆ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನನ್ನನ್ನು ಕೇಳಲಾಯಿತು. ನಾನು ತೆಲುಗು ಚಿತ್ರರಂಗವನ್ನು ತುಂಬಾ ಇಷ್ಟಪಡುತ್ತೇನೆ ಮತ್ತು ನನಗೆ ಇಷ್ಟವಾಗುವ ಪಾತ್ರಗಳು ಸಿಕ್ಕರೆ ನಾನು ಖಂಡಿತವಾಗಿಯೂ ತೆಲುಗು ಚಿತ್ರಗಳನ್ನು ಮಾಡುತ್ತೇನೆ ಎಂದು ಉತ್ತರಿಸಿದೆ. ಒಂದು ಉದಾಹರಣೆಯನ್ನು ಹೇಳುವುದಾದರೆ, ಪುಷ್ಪದಲ್ಲಿನ ಶ್ರೀವಲ್ಲಿ ಪಾತ್ರವು ನನಗೆ ತುಂಬಾ ಇಷ್ಟವಾಯಿತು ಹಾಗೂ ಅಂತಹ ಪಾತ್ರಗಳು ನನಗೆ ಸರಿಹೊಂದುತ್ತವೆ ಅಂತ ನಾನು ತಿಳಿಸಿದೆ’ ಎಂದಿದ್ದಾರೆ ಐಶ್ವರ್ಯಾ ರಾಜೇಶ್​.

‘ಆದರೆ, ದುರದೃಷ್ಟವಶಾತ್, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಅದ್ಭುತ ಕೆಲಸವನ್ನು ನಾನು ಅವಹೇಳನ ಮಾಡುತ್ತಿದ್ದೇನೆ ಎಂಬ ಭಾವನೆಯನ್ನು ಮೂಡಿಸುವ ರೀತಿಯಲ್ಲಿ ವರದಿ ಮಾಡಲಾಗುತ್ತಿದೆ’ ಎಂದು ಐಶ್ವರ್ಯಾ ರಾಜೇಶ್​ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Mrunal Thakur: ‘ನ್ಯಾಷನಲ್​ ಕ್ರಶ್​’ ಬಿರುದು ಪಡೆದುಕೊಂಡ ಮೃಣಾಲ್​ ಠಾಕೂರ್​; ಈಗ ರಶ್ಮಿಕಾ ಮಂದಣ್ಣ ಪಾಡು ಏನು?

‘ಆ ಹೇಳಿಕೆಯಿಂದ ಉಂಟಾದ ಗೊಂದಲವನ್ನು ನಿವಾರಿಸಲು ಈ ಸ್ಪಷ್ಟನೆ ನೀಡುತ್ತಿದ್ದೇನೆ. ‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಅವರ ಕೆಲಸದ ಬಗ್ಗೆ ನನಗೆ ತುಂಬಾ ಅಭಿಮಾನವಿದೆ ಮತ್ತು ನನ್ನ ಎಲ್ಲಾ ಸಹ ನಟ-ನಟಿಯರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಐಶ್ವರ್ಯಾ ರಾಜೇಶ್​ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ