Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಗೆಲುವಿನ ಬೆನ್ನಲ್ಲೇ ‘ಲಾಲ್ ಸಲಾಮ್’ ಚಿತ್ರದ ಬಗ್ಗೆ ಹೆಚ್ಚಿದ ನಿರೀಕ್ಷೆ; ಐಶ್ವರ್ಯಾ ಮೇಲೆ ಬೀಳುತ್ತಿದೆ ಒತ್ತಡ?

‘ಜೈಲರ್’ ಚಿತ್ರದಲ್ಲಿ ಶಿವರಾಜ್​ಕುಮಾರ್, ಮೋಹನ್​ಲಾಲ್ ಹಾಗೂ ಜಾಕಿ ಶ್ರಾಫ್ ಅವರದ್ದು ಅತಿಥಿ ಪಾತ್ರ. ಆದರೂ ಈ ಪಾತ್ರಗಳು ಸಾಕಷ್ಟು ಪ್ರಭಾವ ಬೀರಿವೆ. ಚಿತ್ರಕ್ಕೆ ಮೈಲೇಜ್ ನೀಡಿವೆ. ‘ಲಾಲ್ ಸಲಾಮ್’ ಚಿತ್ರದಲ್ಲಿ ರಜನಿ ಪಾತ್ರದ ಮೇಲೆ ಇಷ್ಟೇ ನಿರೀಕ್ಷೆ ಇದೆ. ಅವರು ಮೊಹಿದ್ದೀನ್ ಭಾಯ್ ಆಗಿ ಮಿಂಚಲೇಬೇಕಾದ ಅನಿವಾರ್ಯತೆ ಇದೆ.

‘ಜೈಲರ್’ ಗೆಲುವಿನ ಬೆನ್ನಲ್ಲೇ ‘ಲಾಲ್ ಸಲಾಮ್’ ಚಿತ್ರದ ಬಗ್ಗೆ ಹೆಚ್ಚಿದ ನಿರೀಕ್ಷೆ; ಐಶ್ವರ್ಯಾ ಮೇಲೆ ಬೀಳುತ್ತಿದೆ ಒತ್ತಡ?
ರಜನಿ-ಐಶ್ವರ್ಯಾ ರಜನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 24, 2023 | 6:30 AM

ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಸಿನಿಮಾ ರಜನಿಕಾಂತ್ ವೃತ್ತಿಜೀನದಲ್ಲಿ ಬಹಳ ಪ್ರಮುಖ ಸಿನಿಮಾ ಎನಿಸಿಕೊಂಡಿದೆ. ಈಗ ರಜನಿಕಾಂತ್ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ರಜನಿಕಾಂತ್ ಮಗಳು ಐಶ್ವರ್ಯಾ ಮೇಲೆ ಒತ್ತಡ ಹೆಚ್ಚುತ್ತಿದೆಯಂತೆ! ಅದಕ್ಕೆ ಕಾರಣ, ಅವರು ನಿರ್ದೇಶನ ಮಾಡುತ್ತಿರುವ ‘ಲಾಲ್ ಸಲಾಮ್’ ಸಿನಿಮಾ. ಈ ಚಿತ್ರದಲ್ಲಿ ರಜನಿಕಾಂತ್ ನಟಿಸುತ್ತಿದ್ದಾರೆ. ‘ಜೈಲರ್’ ಯಶಸ್ಸಿನ ಬಳಿಕ ಈ ಚಿತ್ರದ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಲಾಲ್ ಸಲಾಮ್’ ಚಿತ್ರದಲ್ಲಿ ರಜನಿಕಾಂತ್ ಅವರು ಮೊಹಿದ್ದೀನ್ ಭಾಯ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಸಿನಿಮಾದ ಪೋಸ್ಟರ್​ನಲ್ಲಿ ಅವರ ಲುಕ್ ಗಮನ ಸೆಳೆದಿತ್ತು. ತಲೆಗೆ ಟೋಪಿ ಧರಿಸಿ ಗಮನ ಸೆಳೆದಿದ್ದರು. ಅವರ ಹಿಂಭಾಗದಲ್ಲಿ ಜನರು ಧಂಗೆ ಎದ್ದಿರುವ ರೀತಿ ಕಾಣಿಸಿದೆ. ಈ ಪೋಸ್ಟರ್ ರಿಲೀಸ್ ಆಗಿ ಗಮನ ಸೆಳೆದಿತ್ತು. ಅವರದ್ದು ಅತಿಥಿ ಪಾತ್ರವಾದರೂ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರಿಂದ ಸಹಜವಾಗಿಯೇ ರಜನಿ ಮಗಳು ಐಶ್ವರ್ಯಾ ಮೇಲೆ ಒತ್ತಡ ಬೀಳುತ್ತಿದೆ ಎನ್ನಲಾಗಿದೆ.

‘ಜೈಲರ್’ ಚಿತ್ರದಲ್ಲಿ ಶಿವರಾಜ್​ಕುಮಾರ್, ಮೋಹನ್​ಲಾಲ್ ಹಾಗೂ ಜಾಕಿ ಶ್ರಾಫ್ ಅವರದ್ದು ಅತಿಥಿ ಪಾತ್ರ. ಆದರೂ ಈ ಪಾತ್ರಗಳು ಸಾಕಷ್ಟು ಪ್ರಭಾವ ಬೀರಿವೆ. ಚಿತ್ರಕ್ಕೆ ಮೈಲೇಜ್ ನೀಡಿವೆ. ‘ಲಾಲ್ ಸಲಾಮ್’ ಚಿತ್ರದಲ್ಲಿ ರಜನಿ ಪಾತ್ರದ ಮೇಲೆ ಇಷ್ಟೇ ನಿರೀಕ್ಷೆ ಇದೆ. ಅವರು ಮೊಹಿದ್ದೀನ್ ಭಾಯ್ ಆಗಿ ಮಿಂಚಲೇಬೇಕಾದ ಅನಿವಾರ್ಯತೆ ಇದೆ. ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ಐಶ್ವರ್ಯಾ ರಜನಿಕಾಂತ್​ ಮನೆಯಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಇಬ್ಬರ ಬಂಧನ ರಜನಿಕಾಂತ್ ಹೀರೋ ಆಗಿ ನಟಿಸಲಿರುವ ಮುಂದಿನ ಚಿತ್ರಕ್ಕೆ ಯಾರು ನಿರ್ದೇಶನ ಮಾಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ಅಥವಾ ಅಟ್ಲಿ ಅವರು ನಿರ್ದೇಶನ ಮಾಡಿದರೆ ಉತ್ತಮ ಎನ್ನುವ ಅಭಿಪ್ರಾಯವನ್ನು ಅಭಿಮಾನಿಗಳು ಹೊರಹಾಕಿದ್ದಾರೆ. ಆದರೆ, ಯಾವುದೂ ಇನ್ನೂ ಫೈನಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್