AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​

‘ಎಲ್ಲ ಮುಂಜಾಗ್ರತೆಗಳನ್ನು ತೆಗೆದುಕೊಂಡಿದ್ದರೂ ಕೂಡ ಕೊರೊನಾ ಪಾಸಿಟಿವ್​ ಆಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಐಶ್ವರ್ಯಾ ರಜನಿಕಾಂತ್​ ಅವರು ಮಾಹಿತಿ ನೀಡಿದ್ದಾರೆ.

ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​
ಐಶ್ವರ್ಯಾ ರಜನಿಕಾಂತ್
TV9 Web
| Edited By: |

Updated on: Feb 02, 2022 | 11:02 AM

Share

ಕೊರೊನಾ ವೈರಸ್​ (Coronavirus Positive) ಮೂರನೇ ಅಲೆಯಿಂದಾಗಿ ಅನೇಕರಿಗೆ ತೊಂದರೆ ಆಗಿದೆ. ಹಲವು ಸೆಲೆಬ್ರಿಟಿಗಳಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಸದಾ ಕಾಲ ಸಿನಿಮಾ ಚಟುವಟಿಕೆಗಳ ಸಲುವಾಗಿ ಹೊರಗಡೆ ಸುತ್ತಾಡುವ ಸೆಲೆಬ್ರಿಟಿಗಳಿಗೆ ಕೊರೊನಾ ಸೋಂಕು ತಗುಲುತ್ತಿದೆ. ರಜನಿಕಾಂತ್​ ಪುತ್ರಿ ಐಶ್ವರ್ಯಾ ರಜನಿಕಾಂತ್​ (Aishwarya Rajinikanth) ಅವರಿಗೆ ಈಗ ಕೊವಿಡ್​ ಪಾಸಿಟವ್​ ಆಗಿದೆ. ಕೆಲವೇ ದಿನಗಳ ಹಿಂದೆ ನಟ ಧನುಷ್​ (Dhanush) ಜೊತೆಗಿನ ದಾಂಪತ್ಯ ಜೀವನಕ್ಕೆ ಐಶ್ವರ್ಯಾ ಅವರು ಅಂತ್ಯ ಹಾಡಿದರು. ಡಿವೋರ್ಸ್​ ಪಡೆದಿರುವ ಅವರಿಗೆ ಈಗ ಅನಾರೋಗ್ಯದ ಸಮಸ್ಯೆ ಶುರುವಾಗಿದೆ. ತಮಗೆ ಕೊರೊನಾ ವೈರಸ್​ ತಗುಲಿರುವ ಬಗ್ಗೆ ಐಶ್ವರ್ಯಾ ರಜನಿಕಾಂತ್ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳವಾರ (ಫೆ.2) ರಾತ್ರಿ ಅವರು ಈ ಕುರಿತು ಪೋಸ್ಟ್​ ಮಾಡಿದ್ದಾರೆ. ತಾವು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ಐಶ್ವರ್ಯಾ ಅವರು ಬೇಗ ಗುಣಮುಖರಾಗಲಿ ಎಂದು ಅವರ ಫ್ಯಾನ್ಸ್​ ಪ್ರಾರ್ಥಿಸಿದ್ದಾರೆ.

‘ಎಲ್ಲ ಮುಂಜಾಗ್ರತೆಗಳನ್ನು ತೆಗೆದುಕೊಂಡಿದ್ದರೂ ಕೂಡ ಕೊರೊನಾ ಪಾಸಿಟಿವ್​ ಆಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯವಿಟ್ಟು ಎಲ್ಲರೂ ಮಾಸ್ಕ್​ ಧರಿಸಿ. ವ್ಯಾಕ್ಸಿನ್​ ಪಡೆದು ಹುಷಾರಾಗಿರಿ’ ಎಂದು ಐಶ್ವರ್ಯಾ ಅವರು ಪೋಸ್ಟ್ ಮಾಡಿದ್ದಾರೆ. ಬೇಸರದ ಮುಖ ಹೊತ್ತುಕೊಂಡು ಅವರು ಫೋಟೋ ಹಂಚಿಕೊಂಡಿದ್ದಾರೆ.

ಧನುಷ್​ ಅವರಿಂದ ದೂರಾಗಿದ್ದರೂ ಕೂಡ ಐಶ್ವರ್ಯಾ ಅವರು ಇನ್ನೂ ಸೋಶಿಯಲ್​ ಮೀಡಿಯಾದಲ್ಲಿ ಹೆಸರು ಬದಲಾಯಿಸಿಕೊಂಡಿಲ್ಲ. ಕೆಲವೇ ದಿನಗಳ ಹಿಂದೆ ಧನುಷ್​ ಅವರ ತಂದೆ ಕಸ್ತೂರಿ ರಾಜ ಪ್ರತಿಕ್ರಿಯೆ ನೀಡಿದ್ದರು. ಅವರ ಮಾತು ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಮಗ-ಸೊಸೆಯ ಡಿವೋರ್ಸ್​ ಸುದ್ದಿಯನ್ನು ಕಸ್ತೂರಿ ರಾಜ ತಳ್ಳಿ ಹಾಕಿದ್ದರು.

‘ಪರಸ್ಪರ ವೈಮನಸ್ಸಿನ ಕಾರಣಕ್ಕೆ ಹೀಗೆ ಆಗಿದೆ. ಇದು ಒಂದು ಕುಟುಂಬದ ಜಗಳ ಅಷ್ಟೇ. ಗಂಡ-ಹೆಂಡತಿ ನಡುವೆ ಇದೆಲ್ಲ ಸಹಜ. ಇದು ಡಿವೋರ್ಸ್​ ಅಲ್ಲ. ಅವರಿಬ್ಬರು ಈಗ ಚೆನ್ನೈನಲ್ಲಿ ಇಲ್ಲ. ಹೈದರಾಬಾದ್​​ನಲ್ಲಿ ಇದ್ದಾರೆ. ಅವರಿಗೆ ನಾನು ಒಂದಷ್ಟು ಸಲಹೆ ನೀಡಿದ್ದೇನೆ’ ಎಂದು ಕಸ್ತೂರಿ ರಾಜ ಹೇಳಿದ್ದರು.

ಇದನ್ನೂ ಓದಿ:

ಧನುಷ್​​ರಿಂದ ಬೇರ್ಪಟ್ಟ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಐಶ್ವರ್ಯಾ; ಇಲ್ಲಿದೆ ಫೋಟೋ

ವಿಚ್ಛೇದನದ ಬಳಿಕವೂ ಒಂದೇ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದಾರೆ ಧನುಷ್​-ಐಶ್ವರ್ಯಾ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್