AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಹಂತದಲ್ಲಿ ಧನುಷ್-ಐಶ್ವರ್ಯಾ ವಿಚ್ಛೇದನ ಪ್ರಕ್ರಿಯೆ; ಮಕ್ಕಳ ಜವಾಬ್ದಾರಿ ಯಾರಿಗೆ?

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗ ಪತಿ-ಪತ್ನಿಯರ ಮಧ್ಯೆ ಜಗಳ ಆಗುತ್ತದೆ. ಮಕ್ಕಳ ಹಕ್ಕನ್ನು ತಮಗೇ ನೀಡಬೇಕು ಎಂದು ಗಂಡ ಹಾಗೂ ಹೆಂಡತಿ ಇಬ್ಬರೂ ವಾದ ಮಂಡಿಸುತ್ತಾರೆ. ಆದರೆ, ಇಲ್ಲಿ ಹಾಗಿಲ್ಲ. ಇಬ್ಬರೂ ಶಾಂತ ರೀತಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದಾರೆ.

ಕೊನೆಯ ಹಂತದಲ್ಲಿ ಧನುಷ್-ಐಶ್ವರ್ಯಾ ವಿಚ್ಛೇದನ ಪ್ರಕ್ರಿಯೆ; ಮಕ್ಕಳ ಜವಾಬ್ದಾರಿ ಯಾರಿಗೆ?
ಐಶ್ವರ್ಯಾ-ಧನುಷ್
ರಾಜೇಶ್ ದುಗ್ಗುಮನೆ
|

Updated on: Apr 11, 2024 | 6:57 AM

Share

ಧನುಷ್ ಹಾಗೂ ಐಶ್ವರ್ಯಾ ರಜನಿಕಾಂತ್ (Aishwarya Rajinikanth) ಬೇರೆ ಆಗಿ ಎರಡು ವರ್ಷಗಳು ಕಳೆದಿವೆ. ಇತ್ತೀಚೆಗೆ ಈ ದಂಪತಿ ಚೆನ್ನೈನ ಕೌಟುಂಬಿಕ ಕೋರ್ಟ್​ಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಇವರು ಕಾನೂನಾತ್ಮಕವಾಗಿ ಬೇರೆ ಆಗಲು ಇನ್ನು ಹೆಚ್ಚು ಸಮಯ ಉಳಿದುಕೊಂಡಿಲ್ಲ. ಈ ಮಧ್ಯೆ ಮಕ್ಕಳ ಜವಾಬ್ದಾರಿಯನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆ ಮೂಡಿತ್ತು. ಈ ಜವಾಬ್ದಾರಿ ಐಶ್ವರ್ಯಾ ಪಾಲಾಗುವ ಸಾಧ್ಯತೆ ಇದೆ. ಅವರು ಮಕ್ಕಳನ್ನು ಬೆಳೆಸುವ ಜವಾಬ್ದಾರಿಯನ್ನು ತಮಗೇ ನೀಡಬೇಕು ಎಂದು ಕೋರಿದ್ದಾರೆ.

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗ ಪತಿ-ಪತ್ನಿಯರ ಮಧ್ಯೆ ಜಗಳ ಆಗುತ್ತದೆ. ಮಕ್ಕಳ ಹಕ್ಕನ್ನು ತಮಗೇ ನೀಡಬೇಕು ಎಂದು ಗಂಡ ಹಾಗೂ ಹೆಂಡತಿ ಇಬ್ಬರೂ ವಾದ ಮಂಡಿಸುತ್ತಾರೆ. ಆದರೆ, ಇಲ್ಲಿ ಹಾಗಿಲ್ಲ. ಇಬ್ಬರೂ ಶಾಂತ ರೀತಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದಾರೆ. ಐಶ್ವರ್ಯಾ ಮಕ್ಕಳ ಹಕ್ಕನ್ನು ತಮಗೇ ಕೇಳಿದ್ದು, ಇದಕ್ಕೆ ಧನುಷ್ ಯಾವುದೇ ವಿರೋಧ ತೋರಿಸಿಲ್ಲ.

ಐಶ್ವರ್ಯಾ ರಜನಿಕಾಂತ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಐಶ್ವರ್ಯಾ ಅವರ ಮೊದಲ ನಿರ್ದೇಶನದ ಸಿನಿಮಾ ‘3’ಗೆ ಧನುಷ್ ಹೀರೋ ಆಗಿದ್ದರು. ಪತ್ನಿಯ ನಿರ್ದೇಶನದ ಸಿನಿಮಾಗೆ ಧನುಷ್ ಬೆಂಬಲವಾಗಿ ನಿಂತಿದ್ದರು. ಈ ದಂಪತಿಗೆ ಯಾತ್ರ ಹಾಗೂ ಲಿಂಗ ಹೆಸರಿನ ಮಕ್ಕಳಿದ್ದಾರೆ. ಮೊದಲ ಮಗ ಯಾತ್ರನಿಗೆ 18 ವರ್ಷ. ಮತ್ತೋರ್ವ ಮಗ ಲಿಂಗನಿಗೆ 14 ವರ್ಷ.

ಇದನ್ನೂ ಓದಿ: ಬೇರೆ ಆಗಿ ಎರಡು ವರ್ಷಗಳ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಧನುಷ್-ಐಶ್ವರ್ಯಾ ದಂಪತಿ

ಧನುಷ್ ಹಾಗೂ ಐಶ್ವರ್ಯಾ ಪ್ರೀತಿಸಿ ಮದುವೆ ಆದವರು. ಇವರು ಬೇರೆ ಆಗುತ್ತಿದ್ದಾರೆ ಎನ್ನುವ ವಿಚಾರ ಅನೇಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇವರು ಬೇರೆ ಆಗಲು ಕಾರಣ ಏನು ಎಂಬುದು ಕೂಡ ಈವರೆಗೆ ಅಧಿಕೃತವಾಗಿಲ್ಲ. ಐಶ್ವರ್ಯಾ ಅವರು ಸಿನಿಮಾ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ನಟ ಧನುಷ್ ಅವರು ಬೇರೆ ಬೇರೆ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?