AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಹಂತದಲ್ಲಿ ಧನುಷ್-ಐಶ್ವರ್ಯಾ ವಿಚ್ಛೇದನ ಪ್ರಕ್ರಿಯೆ; ಮಕ್ಕಳ ಜವಾಬ್ದಾರಿ ಯಾರಿಗೆ?

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗ ಪತಿ-ಪತ್ನಿಯರ ಮಧ್ಯೆ ಜಗಳ ಆಗುತ್ತದೆ. ಮಕ್ಕಳ ಹಕ್ಕನ್ನು ತಮಗೇ ನೀಡಬೇಕು ಎಂದು ಗಂಡ ಹಾಗೂ ಹೆಂಡತಿ ಇಬ್ಬರೂ ವಾದ ಮಂಡಿಸುತ್ತಾರೆ. ಆದರೆ, ಇಲ್ಲಿ ಹಾಗಿಲ್ಲ. ಇಬ್ಬರೂ ಶಾಂತ ರೀತಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದಾರೆ.

ಕೊನೆಯ ಹಂತದಲ್ಲಿ ಧನುಷ್-ಐಶ್ವರ್ಯಾ ವಿಚ್ಛೇದನ ಪ್ರಕ್ರಿಯೆ; ಮಕ್ಕಳ ಜವಾಬ್ದಾರಿ ಯಾರಿಗೆ?
ಐಶ್ವರ್ಯಾ-ಧನುಷ್
ರಾಜೇಶ್ ದುಗ್ಗುಮನೆ
|

Updated on: Apr 11, 2024 | 6:57 AM

Share

ಧನುಷ್ ಹಾಗೂ ಐಶ್ವರ್ಯಾ ರಜನಿಕಾಂತ್ (Aishwarya Rajinikanth) ಬೇರೆ ಆಗಿ ಎರಡು ವರ್ಷಗಳು ಕಳೆದಿವೆ. ಇತ್ತೀಚೆಗೆ ಈ ದಂಪತಿ ಚೆನ್ನೈನ ಕೌಟುಂಬಿಕ ಕೋರ್ಟ್​ಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಇವರು ಕಾನೂನಾತ್ಮಕವಾಗಿ ಬೇರೆ ಆಗಲು ಇನ್ನು ಹೆಚ್ಚು ಸಮಯ ಉಳಿದುಕೊಂಡಿಲ್ಲ. ಈ ಮಧ್ಯೆ ಮಕ್ಕಳ ಜವಾಬ್ದಾರಿಯನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆ ಮೂಡಿತ್ತು. ಈ ಜವಾಬ್ದಾರಿ ಐಶ್ವರ್ಯಾ ಪಾಲಾಗುವ ಸಾಧ್ಯತೆ ಇದೆ. ಅವರು ಮಕ್ಕಳನ್ನು ಬೆಳೆಸುವ ಜವಾಬ್ದಾರಿಯನ್ನು ತಮಗೇ ನೀಡಬೇಕು ಎಂದು ಕೋರಿದ್ದಾರೆ.

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗ ಪತಿ-ಪತ್ನಿಯರ ಮಧ್ಯೆ ಜಗಳ ಆಗುತ್ತದೆ. ಮಕ್ಕಳ ಹಕ್ಕನ್ನು ತಮಗೇ ನೀಡಬೇಕು ಎಂದು ಗಂಡ ಹಾಗೂ ಹೆಂಡತಿ ಇಬ್ಬರೂ ವಾದ ಮಂಡಿಸುತ್ತಾರೆ. ಆದರೆ, ಇಲ್ಲಿ ಹಾಗಿಲ್ಲ. ಇಬ್ಬರೂ ಶಾಂತ ರೀತಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದಾರೆ. ಐಶ್ವರ್ಯಾ ಮಕ್ಕಳ ಹಕ್ಕನ್ನು ತಮಗೇ ಕೇಳಿದ್ದು, ಇದಕ್ಕೆ ಧನುಷ್ ಯಾವುದೇ ವಿರೋಧ ತೋರಿಸಿಲ್ಲ.

ಐಶ್ವರ್ಯಾ ರಜನಿಕಾಂತ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಐಶ್ವರ್ಯಾ ಅವರ ಮೊದಲ ನಿರ್ದೇಶನದ ಸಿನಿಮಾ ‘3’ಗೆ ಧನುಷ್ ಹೀರೋ ಆಗಿದ್ದರು. ಪತ್ನಿಯ ನಿರ್ದೇಶನದ ಸಿನಿಮಾಗೆ ಧನುಷ್ ಬೆಂಬಲವಾಗಿ ನಿಂತಿದ್ದರು. ಈ ದಂಪತಿಗೆ ಯಾತ್ರ ಹಾಗೂ ಲಿಂಗ ಹೆಸರಿನ ಮಕ್ಕಳಿದ್ದಾರೆ. ಮೊದಲ ಮಗ ಯಾತ್ರನಿಗೆ 18 ವರ್ಷ. ಮತ್ತೋರ್ವ ಮಗ ಲಿಂಗನಿಗೆ 14 ವರ್ಷ.

ಇದನ್ನೂ ಓದಿ: ಬೇರೆ ಆಗಿ ಎರಡು ವರ್ಷಗಳ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಧನುಷ್-ಐಶ್ವರ್ಯಾ ದಂಪತಿ

ಧನುಷ್ ಹಾಗೂ ಐಶ್ವರ್ಯಾ ಪ್ರೀತಿಸಿ ಮದುವೆ ಆದವರು. ಇವರು ಬೇರೆ ಆಗುತ್ತಿದ್ದಾರೆ ಎನ್ನುವ ವಿಚಾರ ಅನೇಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇವರು ಬೇರೆ ಆಗಲು ಕಾರಣ ಏನು ಎಂಬುದು ಕೂಡ ಈವರೆಗೆ ಅಧಿಕೃತವಾಗಿಲ್ಲ. ಐಶ್ವರ್ಯಾ ಅವರು ಸಿನಿಮಾ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ನಟ ಧನುಷ್ ಅವರು ಬೇರೆ ಬೇರೆ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ