AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ರೇಪ್​-ಕೊಲೆ ಪ್ರಕರಣ: 38​ ಸೆಲೆಬ್ರಿಟಿಗಳ ಬಂಧನಕ್ಕೆ​ ಒತ್ತಾಯ; ಘಟಾನುಘಟಿಗಳ ತಪ್ಪೇನು?

ಐಪಿಸಿ ಸೆಕ್ಷನ್​ 228ಎ ಅಡಿಯಲ್ಲಿ 38 ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇವರೆಲ್ಲ ಜವಾಬ್ದಾರಿಯುತ ಪ್ರಜೆಗಳಲ್ಲ ಎಂದು ತೀಸ್​ ಹಜಾರಿ ಕೋರ್ಟ್​ನಲ್ಲಿ ದೂರು ನೀಡಲಾಗಿದೆ.

ಯುವತಿ ರೇಪ್​-ಕೊಲೆ ಪ್ರಕರಣ: 38​ ಸೆಲೆಬ್ರಿಟಿಗಳ ಬಂಧನಕ್ಕೆ​ ಒತ್ತಾಯ; ಘಟಾನುಘಟಿಗಳ ತಪ್ಪೇನು?
ಯುವತಿ ರೇಪ್​-ಕೊಲೆ ಪ್ರಕರಣ: 38​ ಸೆಲೆಬ್ರಿಟಿಗಳ ಬಂಧನಕ್ಕೆ​ ಒತ್ತಾಯ; ಘಟಾನುಘಟಿಗಳ ತಪ್ಪೇನು?
TV9 Web
| Edited By: |

Updated on: Sep 07, 2021 | 11:50 AM

Share

ರೇಪ್​ ಪ್ರಕರಣಗಳು ಇಡೀ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡುತ್ತವೆ. ಅಂಥ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ರೋಷಾವೇಷದಲ್ಲಿ ಪ್ರತಿಕ್ರಿಯೆ ನೀಡುತ್ತಾರೆ. ಈ ವೇಳೆ ಎಚ್ಚರ ತಪ್ಪಿದರೆ ಕಾನೂನಿನ ಸಂಕಷ್ಟ ಎದುರಾಗುವುದು ಗ್ಯಾರಂಟಿ. ಸದ್ಯ ಬಾಲಿವುಡ್​ ಮತ್ತು ಟಾಲಿವುಡ್​ನ ಹಲವು ಸೆಲೆಬ್ರಿಟಿಗಳಿಗೆ ಅದೇ ರೀತಿ ಸಮಸ್ಯೆ ಉಂಟಾಗಿದೆ. ರೇಪ್​ ಸಂತ್ರಸ್ತೆಯ ಹೆಸರು ಮತ್ತು ಗುರುತು ಬಹಿರಂಗ ಪಡಿಸಿದ್ದಕ್ಕಾಗಿ ಅಕ್ಷಯ್​ ಕುಮಾರ್​, ಸಲ್ಮಾನ್​ ಖಾನ್​, ಅನುಪಮ್​ ಖೇರ್​, ಅಜಯ್​ ದೇವಗನ್​ ಸೇರಿದಂತೆ ಒಟ್ಟು 38 ಸೆಲೆಬ್ರಿಟಿಗಳ ವಿರುದ್ಧ ಕೇಸ್​ ದಾಖಲಾಗಿದೆ.

2019ರ ನವೆಂಬರ್​ ತಿಂಗಳಲ್ಲಿ ಹೈದರಾಬಾದ್​​ನ ಯುವತಿಯೊಬ್ಬರ ಮೇಲೆ ಗ್ಯಾಂಗ್​ ರೇಪ್​ ಆಗಿತ್ತು. ಅತ್ಯಾಚಾರ ನಡೆಸಿದ ಕಾಮುಕರು ಆಕೆಯ ಶವನನ್ನು ಸುಟ್ಟು ಹಾಕಿದ್ದರು. ಆಗ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಅಂಥ ಹೀನ ಘಟನೆಗೆ ಪ್ರತಿಕ್ರಿಯಿಸಿದ್ದ ಅನೇಕ ಸೆಲೆಬ್ರಿಟಿಗಳು ಆ ಯುವತಿಯ ಸಾವಿಗೆ ನ್ಯಾಯ ಸಿಗಬೇಕು ಎಂದು ಸೋಶಿಯಲ್​ ಮೀಡಿಯಾದಲ್ಲಿ ಧ್ವನಿ ಎತ್ತಿದ್ದರು. ಅದು ಒಳ್ಳೆಯ ಕೆಲಸವೇ ಆಗಿದ್ದರೂ ಅವರ ವಿರುದ್ಧ ಈಗ ವಕೀಲರೊಬ್ಬರು ಕೇಸ್​ ಹಾಕಿದ್ದಾರೆ.

ದೆಹಲಿ ಮೂಲದ ವಕೀಲರೊಬ್ಬರು ತಕರಾರು ತೆಗೆದಿದ್ದಾರೆ. ಬಾಲಿವುಡ್​ ಮತ್ತು ಟಾಲಿವುಡ್​ನ ಒಟ್ಟು 38 ಸೆಲೆಬ್ರಿಟಿಗಳ ವಿರುದ್ಧ ಅವರು ದೂರು ನೀಡಿದ್ದಾರೆ. ಕಾನೂನಿನ ಪ್ರಕಾರ ಅತ್ಯಾಚಾರ ಸಂತ್ರಸ್ತೆಯ ಹೆಸರು ಮತ್ತು ಇತರೆ ಗುರುತುಗಳನ್ನು ಬಹಿರಂಗ ಪಡಿಸುವಂತಿಲ್ಲ. ಆದರೆ ಯುವತಿ ಸಾವಿಗೆ ನ್ಯಾಯ ಕೊಡಿಸುವ ಹುಮ್ಮಸ್ಸಿನಲ್ಲಿ ಈ ಕಾನೂನನ್ನು ಎಲ್ಲ ಸೆಲೆಬ್ರಿಟಿಗಳೂ ಉಲ್ಲಂಘಿಸಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ.

ಅನುಪಮ್​ ಖೇರ್​, ಅಜಯ್​ ದೇವಗನ್​, ಫರ್ಹಾನ್​ ಅಖ್ತರ್​, ಅಕ್ಷಯ್​ ಕುಮಾರ್, ಸಲ್ಮಾನ್​ ಖಾನ್​, ರವಿತೇಜ, ರಾಕುಲ್​ ಪ್ರೀತ್​ ಸಿಂಗ್, ಅಲ್ಲು ಸಿರೀಶ್​, ಚಾರ್ಮಿ ಕೌರ್​ ಸೇರಿದಂತೆ ಹಲವು ಸೆಲೆಬ್ರಿಟಿಗಳು ಟ್ವಿಟರ್​, ಫೇಸ್​ಬುಕ್​, ಇನ್​ಸ್ಟಾಗ್ರಾಮ್​ ಮುಂತಾದ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ರೇಪ್​ ಸಂತ್ರಸ್ತೆಯ ವಿವರ ಬಹಿರಂಗಪಡಿಸಿದ್ದರು.

ಸಜ್ಬಿ ಮಂಡಿ ಪೊಲೀಸ್​ ರಾಣೆಯಲ್ಲಿ ಐಪಿಸಿ ಸೆಕ್ಷನ್​ 228ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸೆಲೆಬ್ರಿಟಿಗಳು ಜವಾಬ್ದಾರಿಯುತ ಪ್ರಜೆಗಳಲ್ಲ ಎಂದು ತೀಸ್​ ಹಜಾರಿ ಕೋರ್ಟ್​ನಲ್ಲಿ ದೂರು ನೀಡಲಾಗಿದೆ. ಹಾಗಾಗಿ ಈ ಎಲ್ಲ ಖ್ಯಾತ ಕಲಾವಿದರಿಗೆ ಕಾನೂನಿಕ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ:

‘ಮಹಿಳೆ ಧರಿಸುವ ಉಡುಪುಗಳು ರೇಪ್​ಗೆ ಕಾರಣ ಅಲ್ಲ’: ಗ್ಯಾಂಗ್​ ರೇಪ್​ ಪ್ರಕರಣಕ್ಕೆ ಕವಿತಾ ಲಂಕೇಶ್​ ಪ್ರತಿಕ್ರಿಯೆ

‘ಇಷ್ಟಪಟ್ಟು ಆಗುವ ಮಿಲನ ಬೇರೆ, ಆದರೆ ಇದು ರೇಪ್​; ದಯವಿಟ್ಟು ಖಂಡಿಸಿ’: ಗ್ಯಾಂಗ್​ ರೇಪ್​ ಬಗ್ಗೆ ಹರ್ಷಿಕಾ ಮಾತು

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ