AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಮಂದಿಗೆ ಬಂಗಲೆ ಖರೀದಿಸೋ ಕ್ರೇಜ್​; 60 ಕೋಟಿ ಕೊಟ್ಟು ಅಜಯ್​ ದೇವಗನ್​ ಮನೆ ಖರೀದಿ

ಕಾಜಲ್​ ಹಾಗೂ ಅಜಯ್​ ದೇವಗನ್​ ಕಳೆದ ಒಂದು ವರ್ಷದಿಂದ ಮುಂಬೈನಲ್ಲಿ ಹೊಸ ಮನೆಯ ಹುಡುಕಾಟದಲ್ಲಿ ತೊಡಗಿದ್ದರು. ಕಳೆದ ಒಂದು ವರ್ಷದಿಂದ ಹುಡುಕಿದರೂ ಅವರಿಗೆ ಒಳ್ಳೆಯ ಮನೆ ಸಿಕ್ಕಿರಲಿಲ್ಲ

ಬಾಲಿವುಡ್​ ಮಂದಿಗೆ ಬಂಗಲೆ ಖರೀದಿಸೋ ಕ್ರೇಜ್​; 60 ಕೋಟಿ ಕೊಟ್ಟು ಅಜಯ್​ ದೇವಗನ್​ ಮನೆ ಖರೀದಿ
ಅಜಯ್​ -ಕಾಜೋಲ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 31, 2021 | 3:37 PM

Share

ಕೊವಿಡ್​ ಲಾಕ್​ಡೌನ್​ ಮಧ್ಯೆ ಸಿನಿಮಾ ಶೂಟಿಂಗ್​ ಇಲ್ಲದೇ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಕುಳಿತಿದ್ದಾರೆ. ಕೆಲ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದು, ಹೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಈ ಮಧ್ಯೆ ಅನೇಕ ಸೆಲೆಬ್ರಿಟಿಗಳಿಗೆ ಮನೆ ಖರೀದಿಸುವ ಕ್ರೇಜ್​ ಜೋರಾಗಿದೆ. ಈ ಮೊದಲು ಅಮಿತಾಭ್​ ಬಚ್ಚನ್​ ಹಾಗೂ ಅರ್ಜುನ್​ ಕಪೂರ್​ ದುಬಾರಿ ಬೆಲೆಯ ಮನೆ ಖರೀದಿಸಿದ್ದರು. ಈ ಬಾರಿ ಅಜಯ್​ ದೇವಗನ್​ ಅವರ ಸರದಿ. ಬರೋಬ್ಬರಿ 60 ಕೋಟಿ ರೂಪಾಯಿ ನೀಡಿ ಬಂಗಲೆ ಒಂದನ್ನು ಕೊಂಡುಕೊಂಡಿದ್ದಾರೆ.

ಕಾಜಲ್​ ಹಾಗೂ ಅಜಯ್​ ದೇವಗನ್​ ಕಳೆದ ಒಂದು ವರ್ಷದಿಂದ ಮುಂಬೈನಲ್ಲಿ ಹೊಸ ಮನೆಯ ಹುಡುಕಾಟದಲ್ಲಿ ತೊಡಗಿದ್ದರು. ಕಳೆದ ಒಂದು ವರ್ಷದಿಂದ ಹುಡುಕಿದರೂ ಅವರಿಗೆ ಒಳ್ಳೆಯ ಮನೆ ಸಿಕ್ಕಿರಲಿಲ್ಲ. ಆದರೆ, ಈಗ ಅವರು ಮುಂಬೈನಲ್ಲಿ ಹೊಸ ಬಂಗಲೆ ಖರೀದಿ ಮಾಡಿದ್ದಾರೆ. ಇದು 590 ಚದರ ಅಡಿ ಇದ್ದು, ಐಷಾರಾಮಿಯಾಗೂ ಇದೆಯಂತೆ. ಅಜಯ್​ ಹಾಗೂ ಕಾಜಲ್​ ಇಬ್ಬರಿಗೂ ಈ ಬಂಗಲೆ ಇಷ್ಟವಾಗಿದ್ದು, ಬರೋಬ್ಬರಿ 60 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ.

ಹೊಸ ಬಂಗಲೆ ಖರೀದಿ ಪ್ರಕ್ರಿಯೆ ಕಳೆದ ವರ್ಷವೇ ಆರಂಭವಾಗಿದ್ದು, ಈಗ ಪೂರ್ಣಗೊಂಡಿದೆ. ಸದ್ಯ, ಈ ಬಂಗಲೆಯ ನವೀಕರಣ​ ಕಾರ್ಯಗಳು ನಡೆಯುತ್ತಿವೆ. ಶೀಘ್ರವೇ ದಂಪತಿ ಇಲ್ಲಿಗೆ ಸ್ಥಳಾಂತರಗೊಳ್ಳಲಿದ್ದಾರಂತೆ. ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತೆ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ.

ಸೂರ್ಯವಂಶಿ, ಆರ್​ಆರ್​ಆರ್​ ಹಾಗೂ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗಳಲ್ಲಿ ಅಜಯ್​ ದೇವಗನ್​ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂರು ಚಿತ್ರಗಳಲ್ಲಿ ಅತಿಥಿ ಪಾತ್ರವಾದರೂ ತುಂಬಾನೇ ಪ್ರಾಮುಖ್ಯತೆ ಹೊಂದಿರಲಿದೆಯಂತೆ. ಇನ್ನು, ಮೈದಾನ್​ ಸಿನಿಮಾದಲ್ಲಿ ಅಜಯ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಇದಲ್ಲದೆ ಹಲವು ಸಿನಿಮಾಗಳು ಅಜಯ್​ ಕೈಯಲ್ಲಿವೆ.

ಬಾಂದ್ರಾ ಸಮೀಪ ಅರ್ಜುನ್​ ಕಪೂರ್​ 20 ಕೋಟಿ ರೂಪಾಯಿ ನೀಡಿ ಸ್ಕೈ ವಿಲ್ಲಾ ಖರೀದಿ ಮಾಡಿದ್ದಾರೆ. 4 ಬಿಎಚ್​ಕೆ ಮನೆ ಇದಾಗಿದ್ದು ಅವರ ಪ್ರೇಯಸಿ ಮಲೈಕಾ ಅರೋರಾ ಮನೆಯ ಸಮೀಪದಲ್ಲಿಯೇ ಇದು ಇದೆ ಎನ್ನಲಾಗಿತ್ತು.

ಇದನ್ನೂ ಓದಿ: 20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ