AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಸಂಭಾವನೆ ಪಡೆದರೂ ಅಜಯ್​ ದೇವಗನ್​ ಹೆಸರಲ್ಲಿದೆ ದೊಡ್ಡ ಮೊತ್ತದ ಸಾಲ

ಕಾಜಲ್​ ಹಾಗೂ ಅಜಯ್​ ದೇವಗನ್​ ಕಳೆದ ಒಂದು ವರ್ಷದಿಂದ ಮುಂಬೈನಲ್ಲಿ ಹೊಸ ಮನೆಯ ಹುಡುಕಾಟದಲ್ಲಿ ತೊಡಗಿದ್ದರು. ಇತ್ತೀಚೆಗೆ ಅವರು ಮುಂಬೈನ ಜುಹುನಲ್ಲಿ ಹೊಸ ಬಂಗಲೆ ಖರೀದಿ ಮಾಡಿದ್ದಾರೆ.

ಕೋಟಿ ಕೋಟಿ ಸಂಭಾವನೆ ಪಡೆದರೂ ಅಜಯ್​ ದೇವಗನ್​ ಹೆಸರಲ್ಲಿದೆ ದೊಡ್ಡ ಮೊತ್ತದ ಸಾಲ
ಅಜಯ್​ -ಕಾಜೋಲ್​
TV9 Web
| Edited By: |

Updated on:Jun 20, 2021 | 5:18 PM

Share

ಅಜಯ್​ ದೇವಗನ್​ ಬಾಲಿವುಡ್​ನ ಬಹುಬೇಡಿಕೆಯ ನಟ. ‘ರುದ್ರ’ ವೆಬ್​ ಸೀರಿಸ್​ಗಾಗಿ ಇವರು 125 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಆದಾಗ್ಯೂ ಅಜಯ್​ ದೇವಗನ್​ ಇತ್ತೀಚೆಗೆ ಮನೆ ಖರೀದಿ ಮಾಡುವುದಕ್ಕೆ ದೊಡ್ಡ ಮೊತ್ತದ ಸಾಲ ತೆಗೆದಿದ್ದಾರೆ. ಈ ವಿಚಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈಲರ್​ ಆಗುತ್ತಿದೆ.

ಕಾಜಲ್​ ಹಾಗೂ ಅಜಯ್​ ದೇವಗನ್​ ಕಳೆದ ಒಂದು ವರ್ಷದಿಂದ ಮುಂಬೈನಲ್ಲಿ ಹೊಸ ಮನೆಯ ಹುಡುಕಾಟದಲ್ಲಿ ತೊಡಗಿದ್ದರು. ಕಳೆದ ಒಂದು ವರ್ಷದಿಂದ ಹುಡುಕಿದರೂ ಅವರಿಗೆ ಒಳ್ಳೆಯ ಮನೆ ಸಿಕ್ಕಿರಲಿಲ್ಲ. ಇತ್ತೀಚೆಗೆ ಅವರು ಮುಂಬೈನ ಜುಹುನಲ್ಲಿ ಹೊಸ ಬಂಗಲೆ ಖರೀದಿ ಮಾಡಿದ್ದಾರೆ. ಇದು 474.4 ಚದರ ಮೀಟರ್​ ಇದ್ದು, ಐಷಾರಾಮಿಯಾಗೂ ಇದೆಯಂತೆ. ಅಜಯ್​ ಹಾಗೂ ಕಾಜಲ್​ ಈ ಬಂಗಲೆಗೆ 47.5 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಈ ಇದರ ಖರೀದಿಗೆ ಅವರು 18.75 ಕೋಟಿ ಬ್ಯಾಂಕ್​ನಿಂದ ಸಾಲ ಪಡೆದಿದ್ದಾರೆ. ಈ ವಿಚಾರ ಕೇಳಿದ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

ಹೊಸ ಬಂಗಲೆ ಖರೀದಿ ಪ್ರಕ್ರಿಯೆ ಕಳೆದ ವರ್ಷವೇ ಆರಂಭವಾಗಿದ್ದು, ಈಗ ಪೂರ್ಣಗೊಂಡಿದೆ. ಸದ್ಯ, ಈ ಬಂಗಲೆಯ ನವೀಕರಣ​ ಕಾರ್ಯಗಳು ನಡೆಯುತ್ತಿವೆ. ಶೀಘ್ರವೇ ದಂಪತಿ ಇಲ್ಲಿಗೆ ಸ್ಥಳಾಂತರಗೊಳ್ಳಲಿದ್ದಾರಂತೆ. ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತೆ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ.

ಸೂರ್ಯವಂಶಿ, ಆರ್​ಆರ್​ಆರ್​ ಹಾಗೂ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗಳಲ್ಲಿ ಅಜಯ್​ ದೇವಗನ್​ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂರು ಚಿತ್ರಗಳಲ್ಲಿ ಅತಿಥಿ ಪಾತ್ರವಾದರೂ ತುಂಬಾನೇ ಪ್ರಾಮುಖ್ಯತೆ ಹೊಂದಿರಲಿದೆಯಂತೆ. ಇನ್ನು, ಮೈದಾನ್​ ಸಿನಿಮಾದಲ್ಲಿ ಅಜಯ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಇದಲ್ಲದೆ ಹಲವು ಸಿನಿಮಾಗಳು ಅಜಯ್​ ಕೈಯಲ್ಲಿವೆ.

ಇದನ್ನೂ ಓದಿ: World No Tobacco Day: ಅಜಯ್​ ದೇವಗನ್​, ಹೃತಿಕ್​, ಸಲ್ಮಾನ್, ಸೈಫ್​​ ಸಿಗರೇಟ್ ಚಟ​ ಬಿಡಲು ಕಾರಣ ಆಗಿದ್ದು ಏನು?

100 ಕೋಟಿ ಪಡೆಯುವ ಶಾರುಖ್​ ಖಾನ್​ರನ್ನೂ ಮೀರಿಸಿದ ಅಜಯ್​ ದೇವಗನ್​; ಹಾಗಾದ್ರೆ ಅವರ ಸಂಭಾವನೆ ಎಷ್ಟು?

Published On - 5:04 pm, Sun, 20 June 21

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!