AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಜಗಳ ಮಾಡಿ ಹೊಡೆತ ತಿಂದ್ರಾ ಅಜಯ್​ ದೇವಗನ್​? ವಿಡಿಯೋ ವೈರಲ್​!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಅದನ್ನು ಕಂಡವರು ಅಜಯ್​ ದೇವಗನ್​ ಮೇಲೆ ಅನುಮಾನದ ನೋಟ ಬೀರುತ್ತಿದ್ದಾರೆ. ನಿಜಕ್ಕೂ ನಡೆದಿದ್ದು ಏನು ಎಂಬ ಪ್ರಶ್ನೆ ಮೂಡಿದೆ.

ಕುಡಿದ ಮತ್ತಿನಲ್ಲಿ ಜಗಳ ಮಾಡಿ ಹೊಡೆತ ತಿಂದ್ರಾ ಅಜಯ್​ ದೇವಗನ್​? ವಿಡಿಯೋ ವೈರಲ್​!
ಅಜಯ್​ ದೇವಗನ್​
ಮದನ್​ ಕುಮಾರ್​
| Edited By: |

Updated on: Mar 29, 2021 | 2:16 PM

Share

ಬಾಲಿವುಡ್​ ನಟ ಅಜಯ್​ ದೇವಗನ್​ ಅವರಿಗೆ ಸ್ವಲ್ಪ ಕೋಪ ಜಾಸ್ತಿ ಎಂಬುದು ಗೊತ್ತಿರುವ ವಿಚಾರ. ಹಾಗಂತ ಅವರು ಸಾರ್ವಜನಿಕವಾಗಿ ಜಗಳ ಮಾಡಿಕೊಳ್ಳುವ ಮಟ್ಟಕ್ಕೆ ಇಳಿಯುತ್ತಾರಾ? ಸದ್ಯಕ್ಕಂತೂ ಅಂಥ ಘಟನೆ ನಡೆದಿಲ್ಲ. ಆದರೆ ಈಗ ಸೋಶಿಯಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಸಖತ್​ ವೈರಲ್​ ಆಗಿದೆ. ಅದರಲ್ಲಿ ಒಬ್ಬ ವ್ಯಕ್ತಿಯನ್ನು ಒಂದಷ್ಟು ಜನರು ಮನಬಂದಂತೆ ಥಳಿಸುತ್ತಿದ್ದಾರೆ. ಹೊಡೆತ ತಿನ್ನುತ್ತಿರುವ ವ್ಯಕ್ತಿ ಅಜಯ್​ ದೇವಗನ್​ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡುತ್ತಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅಜಯ್​ ದೇವಗನ್​ ಕಡೆಯಿಂದ ಪ್ರತಿಕ್ರಿಯೆ ಬರುವುದಕ್ಕೂ ಮುನ್ನವೇ ಜಗಳದ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮಾಲ್​ವೊಂದರ ಎದುರಿನಲ್ಲಿ ಪಾನಮತ್ತರಾದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪಾರ್ಟಿ ಮಾಡಿದ ಬಳಿಕ ಐಷಾರಾಮಿ ಕಾರುಗಳ ಪಕ್ಕದಲ್ಲಿ ಒಂದಷ್ಟು ಜನರು ಕೈಕೈ ಮಿಲಾಯಿಸಿಕೊಂಡಿದ್ದಾರೆ. ಆ ಗುಂಪಿನಲ್ಲಿ ಅಜಯ್​ ದೇವಗನ್​ ಕೂಡ ಇದ್ದಾರೆ ಎಂಬ ಸುದ್ದಿ ಹಬ್ಬಿದೆ.

ಆದರೆ ಈ ವಿಡಿಯೋಗೆ ಸಂಬಂಧಿಸಿದಂತೆ ಅಜಯ್​ ದೇವಗನ್​ ತಂಡದವರು ಸ್ಪಷ್ಟನೆ ನೀಡಿದ್ದಾರೆ. ವೈರಲ್​ ವಿಡಿಯೋದಲ್ಲಿ ಇರುವುದು ಅಜಯ್​ ದೇವಗನ್​ ಅಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಳೆದ 14 ತಿಂಗಳಿನಿಂದ ಅಜಯ್​ ದೇವಗನ್​ ಅವರು ದೆಹಲಿಗೆ ತೆರಳಿಲ್ಲ. ‘ತಾನಾಜಿ: ದಿ ಅನ್​ಸಂಗ್​ ವಾರಿಯರ್​’ ಸಿನಿಮಾದ ಪ್ರಮೋಷನ್​ಗಾಗಿ ಅವರು ಕೊನೇ ಬಾರಿ ದೆಹಲಿಗೆ ತೆರಳಿದ್ದು 2020ರ ಜನವರಿಯಲ್ಲಿ’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ. ಒಟ್ಟಿನಲ್ಲಿ ಈ ವಿಡಿಯೋದಲ್ಲಿ ಇರುವ ವ್ಯಕ್ತಿ ಅಜಯ್​ ದೇವಗನ್​ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಸಾಕಷ್ಟು ಸಿನಿಮಾಗಳಲ್ಲಿ ಅಜಯ್​ ಬ್ಯುಸಿ ಆಗಿದ್ದಾರೆ. ಅಭಿಷೇಕ್​ ಬಚ್ಚನ್​ ನಟನೆಯ ‘ದಿ ಬಿಗ್​ ಬುಲ್​’ ಚಿತ್ರಕ್ಕೆ ಅವರು ಹಣ ಹೂಡಿದ್ದು, ಅದರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರದಲ್ಲಿ ಅವರಿಗೆ ಒಂದು ವಿಶೇಷ ಪಾತ್ರವಿದೆ. ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲೂ ಅತಿಥಿ ಪಾತ್ರ ಮಾಡಿದ್ದಾರೆ. ಇದಲ್ಲದೆ, ‘ಭುಜ್​’, ‘ಮೈದಾನ್​‘ ಮುಂತಾದ ಸಿನಿಮಾಗಳು ಅಜಯ್​ ದೇವಗನ್​ ಕೈಯಲ್ಲಿವೆ.

ಇದನ್ನೂ ಓದಿ: ಹೆಸರು ಬದಲಾಯಿಸಿಕೊಂಡ ಅಜಯ್​ ದೇವಗನ್​; ಇನ್ಮುಂದೆ ಇವರು ಸುದರ್ಶನ್​! ಇಂಥ ನಿರ್ಧಾರ ಯಾಕೆ?

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?