ಕುಡಿದ ಮತ್ತಿನಲ್ಲಿ ಜಗಳ ಮಾಡಿ ಹೊಡೆತ ತಿಂದ್ರಾ ಅಜಯ್​ ದೇವಗನ್​? ವಿಡಿಯೋ ವೈರಲ್​!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಅದನ್ನು ಕಂಡವರು ಅಜಯ್​ ದೇವಗನ್​ ಮೇಲೆ ಅನುಮಾನದ ನೋಟ ಬೀರುತ್ತಿದ್ದಾರೆ. ನಿಜಕ್ಕೂ ನಡೆದಿದ್ದು ಏನು ಎಂಬ ಪ್ರಶ್ನೆ ಮೂಡಿದೆ.

ಕುಡಿದ ಮತ್ತಿನಲ್ಲಿ ಜಗಳ ಮಾಡಿ ಹೊಡೆತ ತಿಂದ್ರಾ ಅಜಯ್​ ದೇವಗನ್​? ವಿಡಿಯೋ ವೈರಲ್​!
ಅಜಯ್​ ದೇವಗನ್​
Edited By:

Updated on: Mar 29, 2021 | 2:16 PM

ಬಾಲಿವುಡ್​ ನಟ ಅಜಯ್​ ದೇವಗನ್​ ಅವರಿಗೆ ಸ್ವಲ್ಪ ಕೋಪ ಜಾಸ್ತಿ ಎಂಬುದು ಗೊತ್ತಿರುವ ವಿಚಾರ. ಹಾಗಂತ ಅವರು ಸಾರ್ವಜನಿಕವಾಗಿ ಜಗಳ ಮಾಡಿಕೊಳ್ಳುವ ಮಟ್ಟಕ್ಕೆ ಇಳಿಯುತ್ತಾರಾ? ಸದ್ಯಕ್ಕಂತೂ ಅಂಥ ಘಟನೆ ನಡೆದಿಲ್ಲ. ಆದರೆ ಈಗ ಸೋಶಿಯಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಸಖತ್​ ವೈರಲ್​ ಆಗಿದೆ. ಅದರಲ್ಲಿ ಒಬ್ಬ ವ್ಯಕ್ತಿಯನ್ನು ಒಂದಷ್ಟು ಜನರು ಮನಬಂದಂತೆ ಥಳಿಸುತ್ತಿದ್ದಾರೆ. ಹೊಡೆತ ತಿನ್ನುತ್ತಿರುವ ವ್ಯಕ್ತಿ ಅಜಯ್​ ದೇವಗನ್​ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡುತ್ತಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅಜಯ್​ ದೇವಗನ್​ ಕಡೆಯಿಂದ ಪ್ರತಿಕ್ರಿಯೆ ಬರುವುದಕ್ಕೂ ಮುನ್ನವೇ ಜಗಳದ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮಾಲ್​ವೊಂದರ ಎದುರಿನಲ್ಲಿ ಪಾನಮತ್ತರಾದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪಾರ್ಟಿ ಮಾಡಿದ ಬಳಿಕ ಐಷಾರಾಮಿ ಕಾರುಗಳ ಪಕ್ಕದಲ್ಲಿ ಒಂದಷ್ಟು ಜನರು ಕೈಕೈ ಮಿಲಾಯಿಸಿಕೊಂಡಿದ್ದಾರೆ. ಆ ಗುಂಪಿನಲ್ಲಿ ಅಜಯ್​ ದೇವಗನ್​ ಕೂಡ ಇದ್ದಾರೆ ಎಂಬ ಸುದ್ದಿ ಹಬ್ಬಿದೆ.

ಆದರೆ ಈ ವಿಡಿಯೋಗೆ ಸಂಬಂಧಿಸಿದಂತೆ ಅಜಯ್​ ದೇವಗನ್​ ತಂಡದವರು ಸ್ಪಷ್ಟನೆ ನೀಡಿದ್ದಾರೆ. ವೈರಲ್​ ವಿಡಿಯೋದಲ್ಲಿ ಇರುವುದು ಅಜಯ್​ ದೇವಗನ್​ ಅಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಳೆದ 14 ತಿಂಗಳಿನಿಂದ ಅಜಯ್​ ದೇವಗನ್​ ಅವರು ದೆಹಲಿಗೆ ತೆರಳಿಲ್ಲ. ‘ತಾನಾಜಿ: ದಿ ಅನ್​ಸಂಗ್​ ವಾರಿಯರ್​’ ಸಿನಿಮಾದ ಪ್ರಮೋಷನ್​ಗಾಗಿ ಅವರು ಕೊನೇ ಬಾರಿ ದೆಹಲಿಗೆ ತೆರಳಿದ್ದು 2020ರ ಜನವರಿಯಲ್ಲಿ’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ. ಒಟ್ಟಿನಲ್ಲಿ ಈ ವಿಡಿಯೋದಲ್ಲಿ ಇರುವ ವ್ಯಕ್ತಿ ಅಜಯ್​ ದೇವಗನ್​ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಸಾಕಷ್ಟು ಸಿನಿಮಾಗಳಲ್ಲಿ ಅಜಯ್​ ಬ್ಯುಸಿ ಆಗಿದ್ದಾರೆ. ಅಭಿಷೇಕ್​ ಬಚ್ಚನ್​ ನಟನೆಯ ‘ದಿ ಬಿಗ್​ ಬುಲ್​’ ಚಿತ್ರಕ್ಕೆ ಅವರು ಹಣ ಹೂಡಿದ್ದು, ಅದರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರದಲ್ಲಿ ಅವರಿಗೆ ಒಂದು ವಿಶೇಷ ಪಾತ್ರವಿದೆ. ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲೂ ಅತಿಥಿ ಪಾತ್ರ ಮಾಡಿದ್ದಾರೆ. ಇದಲ್ಲದೆ, ‘ಭುಜ್​’, ‘ಮೈದಾನ್​‘ ಮುಂತಾದ ಸಿನಿಮಾಗಳು ಅಜಯ್​ ದೇವಗನ್​ ಕೈಯಲ್ಲಿವೆ.

ಇದನ್ನೂ ಓದಿ: ಹೆಸರು ಬದಲಾಯಿಸಿಕೊಂಡ ಅಜಯ್​ ದೇವಗನ್​; ಇನ್ಮುಂದೆ ಇವರು ಸುದರ್ಶನ್​! ಇಂಥ ನಿರ್ಧಾರ ಯಾಕೆ?

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us