AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುದ್ರನಾಗಿ ಡಿಜಿಟಲ್ ಲೋಕಕ್ಕೆ ಕಾಲಿಟ್ಟ ಅಜಯ್ ದೇವಗನ್; ಇದು ಯಾವುದರ ರಿಮೇಕ್?

ಅಜಯ್​ ದೇವಗನ್​ ಜೊತೆಯಲ್ಲಿ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮುಂಬೈನಲ್ಲಿ ಇದರ ಶೂಟಿಂಗ್​ ನಡೆಯಲಿದೆ.

ರುದ್ರನಾಗಿ ಡಿಜಿಟಲ್ ಲೋಕಕ್ಕೆ ಕಾಲಿಟ್ಟ ಅಜಯ್ ದೇವಗನ್; ಇದು ಯಾವುದರ ರಿಮೇಕ್?
ರುದ್ರ ವೆಬ್​ ಸರಣಿಯಲ್ಲಿ ಅಜಯ್​ ದೇವಗನ್​
ಮದನ್​ ಕುಮಾರ್​
|

Updated on: Apr 20, 2021 | 4:51 PM

Share

ವೆಬ್​ ಸಿರೀಸ್​ ಲೋಕ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಹಲವಾರು ಬಗೆಯ ವೆಬ್​ ಸರಣಿಗಳು ಮೂಡಿಬರುತ್ತಿವೆ. ಅನೇಕ ಸ್ಟಾರ್​ ಕಲಾವಿದರು ಇವುಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇಷ್ಟು ದಿನ ಬರೀ ಸಿನಿಮಾಗಳನ್ನೇ ನಂಬಿಕೊಂಡಿದ್ದ ದೊಡ್ಡ ದೊಡ್ಡ ನಟ-ನಟಿಯರಿಗೆ ಈಗ ವೆಬ್​ ಸಿರೀಸ್​ ಲೋಕ ಕೈ ಬೀಸಿ ಕರೆಯುತ್ತಿದೆ. ಬಾಲಿವುಡ್​ನ ಸ್ಟಾರ್​ ನಟ ಅಜಯ್​ ದೇವಗನ್​ ಅವರು ಇದೇ ಮೊದಲ ಬಾರಿಗೆ ಡಿಜಿಟಲ್​ ದುನಿಯಾಗೆ ಎಂಟ್ರಿ ನೀಡುತ್ತಿದ್ದಾರೆ.

ಮುಂಚೂಣಿ ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಒಂದಾಗಿರುವ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​​ನಲ್ಲಿ ಹೊಸದೊಂದು ವೆಬ್​ ಸಿರೀಸ್​ ಘೋಷಣೆ ಮಾಡಲಾಗಿದೆ. ಅದಕ್ಕೆ ‘ರುದ್ರ’ ಎಂದು ಹೆಸರಿಡಲಾಗಿದೆ. ದಿ ಎಡ್ಜ್​ ಆಫ್​ ಡಾರ್ಕ್​ನೆಸ್​ ಎಂಬುದು ಇದರ ಟ್ಯಾಗ್​​ ಲೈನ್​. ಈ ವೆಬ್​ ಸಿರೀಸ್​ನಲ್ಲಿ ಅಜಯ್​ ದೇವಗನ್​ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಟೈಟಲ್​ ಜೊತೆಗೆ ಅಜಯ್​ ದೇವಗನ್​ ಅವರ ಫಸ್ಟ್​ಲುಕ್​ ಪೋಸ್ಟರ್​ ಕೂಡ ಬಿಡುಗಡೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ವೆಬ್​ ಸಿರೀಸ್​ನಲ್ಲಿ ನಟಿಸುತ್ತಿರುವುದಕ್ಕೆ ಅಜಯ್​ ದೇವಗನ್​ ಸಿಕ್ಕಾಪಟ್ಟೆ ಉತ್ಸುಕರಾಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ‘ಯಾವಾಗಲೂ ವಿಶೇಷವಾದ ಕಥೆಗಳನ್ನು ಹೇಳಬೇಕು ಮತ್ತು ಪ್ರತಿಭಾವಂತರ ಜೊತೆ ಕೆಲಸ ಮಾಡಬೇಕು ಎಂಬುದೇ ನನ್ನ ಪ್ರಯತ್ನ ಆಗಿರುತ್ತದೆ. ಈ ವೆಬ್​ ಸಿರೀಸ್​ ಮೂಲಕ ಭಾರತದಲ್ಲಿ ಮನರಂಜನೆಯನ್ನು ಇನ್ನೊಂದು ಮಟ್ಟಕ್ಕೆ ಕೊಂಡೊಯ್ಯುವ ಆಲೋಚನೆ ಇದೆ’ ಎಂದು ಅಜಯ್​ ದೇವಗನ್​ ಹೇಳಿದ್ದಾರೆ.

ಅಂದಹಾಗೆ, ಇದು ಬ್ರಿಟಿಷ್​ ವೆಬ್​ ಸಿರೀಸ್​ ‘ಲೂಥರ್​’ನ ಹಿಂದಿ ರಿಮೇಕ್​ ಆಗಿರಲಿದೆ. ಇದರಲ್ಲಿ ಅಜಯ್​ ದೇವಗನ್​ ಪೊಲೀಸ್ ಅಧಿಕಾರಿ​ ಪಾತ್ರ ಮಾಡಲಿದ್ದಾರೆ. ರಾಜೇಶ್​ ಮಪುಸ್ಕರ್​ ನಿರ್ದೇಶನ ಮಾಡಲಿದ್ದಾರೆ. ಅಪ್ಲಾಸ್​ ಎಂಟರ್​ಟೇನ್​ಮೆಂಟ್​ ಮತ್ತು ಬಿಬಿಸಿ ಸ್ಟುಡಿಯೂ ಇಂಡಿಯಾ ಜೊತೆಯಾಗಿ ಇದನ್ನು ನಿರ್ಮಾಣ ಮಾಡಲಿವೆ. ಅಜಯ್​ ದೇವಗನ್​ ಜೊತೆಯಲ್ಲಿ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮುಂಬೈನಲ್ಲಿ ಇದರ ಶೂಟಿಂಗ್​ ನಡೆಯಲಿದೆ.

‘ಬೇಗ ಶೂಟಿಂಗ್​ ಶುರುವಾಗಲಿ ಎಂದು ನಾನು ಕಾಯುತ್ತಿದ್ದೇನೆ. ಪೊಲೀಸ್​ ಪಾತ್ರ ಮಾಡುವುದು ನನಗೆ ಹೊಸದೇನೂ ಅಲ್ಲ. ಆದರೆ ಈ ಬಾರಿ ನಾನು ಮಾಡುತ್ತಿರುವ ಪಾತ್ರ ಹೆಚ್ಚು ತೀಕ್ಷ್ಣ, ಕಠಿಣ ಮತ್ತು ಗಾಢವಾಗಿದೆ’ ಎಂದು ತಮ್ಮ ಪಾತ್ರದ ಬಗ್ಗೆ ಅಜಯ್​ ದೇವಗನ್​ ಬರೆದುಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಅಜಯ್​ ದೇವಗನ್​ ನಿರ್ಮಾಪಕನಾಗಿ ಓಟಿಟಿಗೆ ಕಾಲಿಟ್ಟಿದ್ದರು. ಅವರು ನಿರ್ಮಾಣ ಮಾಡಿದ ‘ದಿ ಬಿಗ್​ ಬುಲ್​’ ಸಿನಿಮಾ ಕೂಡ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ಬಿಡುಗಡೆ ಆಗಿತ್ತು.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಜಗಳ ಮಾಡಿ ಹೊಡೆತ ತಿಂದ್ರಾ ಅಜಯ್​ ದೇವಗನ್​? ವಿಡಿಯೋ ವೈರಲ್​!

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು