AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಎದುರು ಬರಲ್ಲ ‘ಸಿಂಗಂ ಅಗೇನ್​’; ರಿಲೀಸ್​ ಮುಂದೂಡಿಕೊಂಡ ರೋಹಿತ್​ ಶೆಟ್ಟಿ​?

ಕೆಲವೇ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಆ ಬಳಿಕ ‘ಸಿಂಗಂ ಅಗೇನ್​’ ಚಿತ್ರತಂಡದ ನಿರ್ಧಾರದಲ್ಲಿ ಬದಲಾವಣೆ ಆದಂತಿದೆ. ವರದಿಗಳ ಪ್ರಕಾರ, ನಿರ್ದೇಶಕ ರೋಹಿತ್​ ಶೆಟ್ಟಿ ಅವರು ‘ಸಿಂಗಂ ಅಗೇನ್​’ ಸಿನಿಮಾದ ರಿಲೀಸ್​ ಡೇಟ್​ ಮುಂದೂಡುವ ನಿರ್ಧಾರಕ್ಕೆ ಬಂದಿದ್ದಾರೆ. ಆ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳುವುದಷ್ಟೇ ಬಾಕಿ.

‘ಪುಷ್ಪ 2’ ಎದುರು ಬರಲ್ಲ ‘ಸಿಂಗಂ ಅಗೇನ್​’; ರಿಲೀಸ್​ ಮುಂದೂಡಿಕೊಂಡ ರೋಹಿತ್​ ಶೆಟ್ಟಿ​?
ಅಜಯ್​ ದೇವಗನ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Apr 12, 2024 | 3:21 PM

Share

ಎರಡು ಹೈ ಬಜೆಟ್​ ಸಿನಿಮಾಗಳು ಒಂದೇ ದಿನ ರಿಲೀಸ್​ ಆದರೆ ಎರಡೂ ಚಿತ್ರತಂಡಕ್ಕೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್​ ಆಗುವುದಿಲ್ಲ. ಹಾಗಾಗಿ ಈ ಕ್ಲ್ಯಾಶ್​ ತಪ್ಪಿಸಲು ಪ್ರಯತ್ನಿಸಲಾಗುತ್ತದೆ. ಈಗ ಪುಷ್ಪ 2’  (Pushpa 2) ಮತ್ತು ‘ಸಿಂಗಂ ಅಗೇನ್​’ ಚಿತ್ರಗಳ ವಿಚಾರದಲ್ಲಿ ಹಾಗೆಯೇ ಆಗಿದೆ. ಆಗಸ್ಟ್​ 15ರಂದು ಈ ಸಿನಿಮಾಗಳು ಬಿಡುಗಡೆ ಆಗಲಿವೆ ಎಂದು ಹೇಳಲಾಗಿತ್ತು. ಆದರೆ ಈಗಿನ ಮಾಹಿತಿ ಪ್ರಕಾರ, ‘ಸಿಂಗಂ ಅಗೇನ್​’ (Singham Again) ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ನಿರ್ಮಾಪಕರಿಂದ ಅಧಿಕೃತ ಘೋಷಣೆ ಆಗುವುದು ಬಾಕಿ ಇದೆ.

ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಉತ್ತರ ಭಾರತದಲ್ಲೂ ನಿರೀಕ್ಷೆ ಹೆಚ್ಚಾಗಿದೆ. ‘ಪುಷ್ಪ 2’ ಎದುರು ಬರಲು ಬೇರೆ ಯಾವುದೇ ಸಿನಿಮಾ ತಂಡ ಕೂಡ ಧೈರ್ಯ ತೋರಿಸುವುದು ಕಷ್ಟ. ‘ಸಿಂಗಂ ಅಗೇನ್​’ ಸಿನಿಮಾ ತಂಡದವರು ರಿಲೀಸ್​ ಡೇಟ್​ ಮುಂದಕ್ಕೆ ಹಾಕಿರುವ ಸಾಧ್ಯತೆ ದಟ್ಟವಾಗಿದೆ.

ಅಜಯ್​ ದೇವಗನ್​ ಅವರು ‘ಸಿಂಗಂ ಅಗೇನ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರೋಹಿತ್​ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಭಾರಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಅನೇಕ ಕಲಾವಿದರು ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಆಗಸ್ಟ್​ 15ರ ಬದಲು ಈ ವರ್ಷ ದೀಪಾವಳಿ ಹಬ್ಬಕ್ಕೆ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಇದನ್ನೂ ಓದಿ: ಒಂದೇ ದೃಶ್ಯಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಿದ ‘ಪುಷ್ಪ 2’ ಸಿನಿಮಾ ತಂಡ

ಒಂದು ಮೂಲದ ಪ್ರಕಾರ ‘ಸಿಂಗಂ ಅಗೇನ್​’ ಸಿನಿಮಾದ ರಿಲೀಸ್ ಡೇಟ್​ ಮುಂದೂಡಿಕೆ ಆಗಲು ‘ಪುಷ್ಪ 2’ ತಂಡದ ಪೈಪೋಟಿ ಕಾರಣ ಅಲ್ಲ. ಅಂದುಕೊಂಡ ವೇಗದಲ್ಲಿ ಈ ಸಿನಿಮಾದ ಕೆಲಸಗಳು ಮುಗಿಯುತ್ತಿಲ್ಲ. ಗುಣಮಟ್ಟದಲ್ಲಿ ರಾಜಿಯಾಗಲು ರೋಹಿತ್​ ಶೆಟ್ಟಿ ಸಿದ್ಧರಿಲ್ಲ. ಹಾಗಾಗಿ ಇನ್ನಷ್ಟು ಸಮಯ ತೆಗೆದುಕೊಂಡು ಉತ್ತಮ ಗುಣಮಟ್ಟದ ಸಿನಿಮಾವನ್ನು ಪ್ರೇಕ್ಷಕರಿಗೆ ನೀಡಬೇಕು ಎಂಬ ಉದ್ದೇಶದಿಂದ ರಿಲೀಸ್​ ಡೇಟ್ ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು