ಅಜಿತ್ ಹೊಸ ಸಿನಿಮಾದ ಟೈಟಲ್-ಪೋಸ್ಟರ್ ರಿವೀಲ್​; ಮತ್ತೆ ಒಂದಾಯ್ತು ಹಿಟ್ ಕಾಂಬಿನೇಷನ್​

ಅಜಿತ್ ಅವರು ಕುರ್ಚಿ ಮೇಲೆ ಕುಳಿತಿದ್ದಾರೆ. ಕೈಯಲ್ಲಿ ಅವರು ಗನ್ ಹಿಡಿದ್ದಾರೆ. ಫಸ್ಟ್ ಪೋಸ್ಟರ್ ಅಸ್ಪಷ್ಟವಾಗಿದೆ. ಒಟ್ಟಿನಲ್ಲಿ ಅಜಿತ್ ಅವರ ಲುಕ್ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಂತೂ ನಿಜ.

ಅಜಿತ್ ಹೊಸ ಸಿನಿಮಾದ ಟೈಟಲ್-ಪೋಸ್ಟರ್ ರಿವೀಲ್​; ಮತ್ತೆ ಒಂದಾಯ್ತು ಹಿಟ್ ಕಾಂಬಿನೇಷನ್​
ಅಜಿತ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 21, 2022 | 10:05 PM

ತಮಿಳು ನಟ ಅಜಿತ್ ಕುಮಾರ್ (Ajith Kumar)  ಅವರ 61ನೇ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಯಾವ ಟೈಟಲ್ ಫೈನಲ್ ಆಗಲಿದೆ ಎಂಬ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇತ್ತು. ಕೊನೆಗೂ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಚಿತ್ರಕ್ಕೆ ‘ತುನಿವು’ (Thunivu)ಎಂದು ಟೈಟಲ್ ಇಡಲಾಗಿದೆ. ಇದಕ್ಕೆ ಧೈರ್ಯ ಎಂಬರ್ಥ ಇದೆ. ಈ ಸಿನಿಮಾದ ಫಸ್ಟ್ ಪೋಸ್ಟರ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾ ಸಖತ್ ಮಾಸ್ ಆಗಿ ಮೂಡಿ ಬರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಅಜಿತ್ ಅವರು ಕುರ್ಚಿ ಮೇಲೆ ಕುಳಿತಿದ್ದಾರೆ. ಕೈಯಲ್ಲಿ ಅವರು ಗನ್ ಹಿಡಿದ್ದಾರೆ. ಫಸ್ಟ್ ಪೋಸ್ಟರ್ ಅಸ್ಪಷ್ಟವಾಗಿದೆ. ಒಟ್ಟಿನಲ್ಲಿ ಅಜಿತ್ ಅವರ ಲುಕ್ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಂತೂ ನಿಜ. ಈ ಚಿತ್ರಕ್ಕೆ ಮಲಯಾಳಂನ ಮಂಜು ವಾರಿಯರ್ ನಾಯಕಿ. ಅವರ ಪೋಸ್ಟರ್ ರಿಲೀಸ್ ಆಗಲಿ ಎಂದು ಮಂಜು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ
Image
Thala Ajith Kumar Birthday: ಅಜಿತ್​ ಕುಮಾರ್​ ಜನ್ಮದಿನ: ವಿಮಾನದ ಪೈಲಟ್​ ಕೂಡ ಆಗಿರುವ ಸ್ಟಾರ್​ ನಟನಿಗಿದೆ ಹಲವು ಹವ್ಯಾಸ
Image
ಒಟಿಟಿಯಲ್ಲಿ ‘ವಲಿಮೈ’ ದಾಖಲೆ; ಒಂದೇ ನಿಮಿಷಕ್ಕೆ 10 ಕೋಟಿ ಸ್ಟ್ರೀಮಿಂಗ್
Image
​ಕೀಳು ಮಟ್ಟಕ್ಕೆ ಬಂತು ಫ್ಯಾನ್ಸ್​ ವಾರ್​; ದಳಪತಿ ವಿಜಯ್​ ನಿಧನ ಎಂದು ಫೇಕ್​ ನ್ಯೂಸ್​ ಹಬ್ಬಿಸಿದ ಅಜಿತ್​ ಫ್ಯಾನ್ಸ್​
Image
ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ಅಜಿತ್ ಅವರು ಈ ಮೊದಲು ‘ವಿವೇಗಮ್’, ‘ವೀರಮ್’ ಹಾಗೂ ‘ವಲಿಮೈ’ ಚಿತ್ರಗಳಲ್ಲಿ ನಟಿಸಿದ್ದರು. ಈ ಸಿನಿಮಾದ ಟೈಟಲ್ ರೀತಿಯಲ್ಲೇ ‘ತುನಿವು’ ಕೂಡ ಇದೆ. ಈ ಚಿತ್ರದಲ್ಲಿ ಅಜಿತ್ ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಗನ್ ಹಿಡಿದುಕೊಂಡಿರುವುದರಿಂದ ಅಜಿತ್ ಗ್ಯಾಂಗ್​ಸ್ಟರ್ ಪಾತ್ರ ಮಾಡುತ್ತಿದ್ದಾರೆ ಎಂದು ಕೆಲವರು ಊಹಿಸಿದ್ದಾರೆ.

ಈ ಚಿತ್ರಕ್ಕೆ ಎಚ್​. ವಿನೋದ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಜಿತ್ ಹಾಗೂ ವಿನೋದ್ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೂರನೇ ಸಿನಿಮಾ ಇದಾಗಿದೆ. ಈ ಮೊದಲು ‘ವಲಿಮೈ’ ಹಾಗೂ ‘ನೆರ್ಕೊಂಡ ಪಾರವೈ’ ಸಿನಿಮಾಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಮೂರನೇ ಸಿನಿಮಾಗಾಗಿ ಒಂದಾಗುತ್ತಿರುವುದರಿಂದ ಸಹಜವಾಗಿಯೇ ಕುತೂಹಲ ದ್ವಿಗುಣಗೊಂಡಿದೆ.

‘ನರ್ಕೊಂಡ ಪಾರವೈ’ ಇದು ಹಿಂದಿಯ ‘ಪಿಂಕ್’ ಚಿತ್ರದ ರಿಮೇಕ್. ಅಮಿತಾಭ್ ಬಚ್ಚನ್ ನಿರ್ವಹಿಸಿದ್ದ ಪಾತ್ರವನ್ನು ಅಜಿತ್ ಅವರು ತಮಿಳಲ್ಲಿ ಮಾಡಿದ್ದರು. ಈ ಚಿತ್ರ ವಿಮರ್ಶೆಯಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ‘ವಲಿಮೈ’ ಚಿತ್ರಕ್ಕೆ ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗೆದ್ದು ಬೀಗಿತ್ತು.

ಇದನ್ನೂ ಓದಿ: ಬದರಿನಾಥ್ ಟ್ರಿಪ್ ತೆರಳಿದ್ದ ಕನ್ನಡಿಗನಿಗೆ ಸಿಕ್ತು ತಮಿಳು ನಟ ಅಜಿತ್ ಸಹಾಯ; ಇಲ್ಲಿದೆ ಇಂಟರೆಸ್ಟಿಂಗ್ ಕಥೆ

ಅಜಿತ್ ಅವರು ವಿಘ್ನೇಶ್​ ಶಿವನ್ ಜತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಈ ಸಿನಿಮಾದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎಂಬ ವಿಚಾರವೂ ಸದ್ಯದ ಮಟ್ಟಿಗೆ ಗುಟ್ಟಾಗಿಯೇ ಇದೆ. ವಿಘ್ನೇಶ್​ ಶಿವನ್ ಅವರು ಇತ್ತೀಚೆಗೆ ನಟಿ ನಯನತಾರಾ ಜತೆ ಮದುವೆ ಆದರು. ಆ ಬಳಿಕ ಇಬ್ಬರೂ ವಿದೇಶ ಸುತ್ತಿ ಬಂದಿದ್ದಾರೆ. ಈಗ ವಿಘ್ನೇಶ್​ ಶಿವನ್ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ