AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3.5 ಕೋಟಿ ರೂ. ಬೆಲೆಯ ಕಾರು ಖರೀದಿಸಿದ ಅಜಿತ್; ಹೆಮ್ಮೆಯಿಂದ ಫೋಟೋ ಹಂಚಿಕೊಂಡ ಪತ್ನಿ

ಕಾರುಗಳ ಬಗ್ಗೆ ನಟ ಅಜಿತ್​ ಕುಮಾರ್​ ಅವರಿಗೆ ವಿಶೇಷ ಕ್ರೇಜ್​ ಇದೆ. ಅವರು ಈಗ 3.5 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿ ಮಾಡಿದ್ದಾರೆ. ಈ ಖುಷಿಯ ಕ್ಷಣದ ಫೋಟೋವನ್ನು ಪತ್ನಿ ಶಾಲಿನಿ ಅವರು ಹಂಚಿಕೊಂಡಿದ್ದಾರೆ. ಅಜಿತ್ ಅವರ ಹೊಸ ಕಾರನ್ನು ನೋಡಿ ಅಭಿಮಾನಿಗಳು ಕಣ್ಣರಳಿಸಿದ್ದಾರೆ. ಫ್ಯಾನ್ಸ್​ ಖಾತೆಗಳಲ್ಲಿ ಈ ಫೋಟೋ ವೈರಲ್​ ಆಗಿದೆ.

3.5 ಕೋಟಿ ರೂ. ಬೆಲೆಯ ಕಾರು ಖರೀದಿಸಿದ ಅಜಿತ್; ಹೆಮ್ಮೆಯಿಂದ ಫೋಟೋ ಹಂಚಿಕೊಂಡ ಪತ್ನಿ
ಅಜಿತ್​ ಕುಮಾರ್​ ಹೊಸ ಕಾರು
ಮದನ್​ ಕುಮಾರ್​
|

Updated on: Sep 13, 2024 | 10:07 PM

Share

ಕಾಲಿವುಡ್​ ನಟ ಅಜಿತ್​ ಕುಮಾರ್​ ಅವರಿಗೆ ಕಾರು ಮತ್ತು ಬೈಕ್​ ಬಗ್ಗೆ ಎಲ್ಲಿಲ್ಲದ ಕ್ರೇಜ್​. ಅವರ ಅಭಿಮಾನಿಗಳಿಗೆ ಈ ವಿಚಾರ ಚೆನ್ನಾಗಿ ಗೊತ್ತು. ಅಜಿತ್​ ಬಳಿ ಈಗಾಗಲೇ ಅನೇಕ ಕಾರುಗಳ ಕಲೆಕ್ಷನ್​ ಇದೆ. ಈಗ ಅವರ ಐಷಾರಾಮಿ ಕಾರುಗಳ ಪಟ್ಟಿಗೆ ಹೊಸ ಕಾರು ಸೇರ್ಪಡೆ ಆಗಿದೆ. ಈ ಕಾರಿನ ಬೆಲೆ ಬರೋಬ್ಬರಿ 3.5 ಕೋಟಿ ರೂಪಾಯಿ. ಹೊಸ ಕಾರಿನ ಜೊತೆ ನಿಂತು ಅಜಿತ್​ ಅವರು ಖುಷಿಯಿಂದ ಪೋಸ್ ನೀಡಿದ್ದಾರೆ. ಆ ಕ್ಷಣದ ಫೋಟೋವನ್ನು ಕ್ಲಿಕ್ಕಿಸಿದ ಪತ್ನಿ ಶಾಲಿನಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಅಜಿತ್​ಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಶಾಲಿನಿ ಅವರು ಈ ಫೋಟೋಗಳನ್ನು ಅಪ್​ಲೋಡ್​ ಮಾಡಿದ್ದಾರೆ. ಅಜಿತ್​ ಖರೀದಿಸಿರುವುದು ಹೊಸ ಪೋರ್ಶಾ 911 GT3 RS ಕಾರು. ಇದರ ಬೆಲೆ ಅಂದಾಜು 3.5 ಕೋಟಿ ರೂಪಾಯಿ. ಪಳಪಳ ಹೊಳೆಯುವ ಕಾರಿನ ಫೋಟೋವನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಇವರ ಕಾರ್​ ಕ್ರೇಜ್​ ಎಂದಿಗೂ ಕೊನೆ ಆಗುವುದೇ ಇಲ್ಲ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ. ‘ಇವರು ತಮ್ಮ ಪ್ಯಾಷನ್ ಮತ್ತು ಫ್ಯಾಮಿಲಿ ಮೇಲೆ ಗಮನ ಹರಿಸುತ್ತಿದ್ದಾರೆ. ಇವರ ಬಗ್ಗೆ ಹೆಮ್ಮೆ ಎನಿಸುತ್ತದೆ’ ಎಂಬ ಕಮೆಂಟ್​ ಕೂಡ ಬಂದಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅಜಿತ್​ ಅವರು ತೊಡಗಿಕೊಂಡಿದ್ದಾರೆ. ಆ್ಯಕ್ಷನ್​ ಕಥಾಹಂದರ ಇರುವ ‘ವಿದಾಮುಯರ್ಚಿ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಬಹಳ ದೊಡ್ಡದು. ಈ ಸಿನಿಮಾದಲ್ಲಿ ಕೂಡ ಕಾರಿನ ಆ್ಯಕ್ಷನ್​ ಸೀನ್​ಗಳು ಇರಲಿವೆ. ಅದರ ಶೂಟಿಂಗ್​ ವೇಳೆ ಅಜಿತ್​ ಕಾರು ಪಲ್ಟಿ ಆಗಿತ್ತು. ಅದರ ವಿಡಿಯೋ ಕೂಡ ವೈರಲ್​ ಆಗಿತ್ತು. ಈ ಎಲ್ಲ ಕಾರಣಗಳಿಂದ ‘ವಿದಾಮುಯರ್ಚಿ’ ಹೈಪ್​ ಕ್ರಿಯೇಟ್​ ಮಾಡಿದೆ.

ಇದನ್ನೂ ಓದಿ: ಶೂಟಿಂಗ್​ ವೇಳೆ ನಟ ಅಜಿತ್​ ಕಾರು ಅಪಘಾತ; ಭಯಾನಕ ವಿಡಿಯೋ ವೈರಲ್​

ಒಂದಷ್ಟು ದಿನಗಳ ಹಿಂದೆ ಅಜಿತ್​ ಪತ್ನಿ ಶಾಲಿನಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಗಂಡನ ಜೊತೆ ಇರುವ ಫೋಟೋ ಹಂಚಿಕೊಂಡ ಅವರು ‘ಲವ್​ ಯೂ ಫಾರೆವರ್​’ ಎಂದು ಕ್ಯಾಪ್ಷನ್​ ನೀಡಿದ್ದರು. ಆ ಫೋಟೋ ನೋಡಿ ಅಭಿಮಾನಿಗಳಿಗೆ ಸ್ವಲ್ಪ ಚಿಂತೆ ಆಗಿತ್ತು. ಆದರೆ ಶಾಲಿನಿ ಅವರು ಈಗ ಗುಣಮುಖರಾಗಿದ್ದಾರೆ. ಇತ್ತೀಚೆಗೆ ಶಾಲಿನಿ ಅವರು ಸಂಭ್ರಮದಿಂದ ಗೌರಿ-ಗಣೇಶ ಹಬ್ಬ ಆಚರಿಸಿದರು. ಆ ಫೋಟೋವನ್ನು ಕೂಡ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ