AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

180 ಕಿಮೀ ವೇಗದಲ್ಲಿ ಅಜಿತ್ ಕಾರು ಅಪಘಾತ; ವಿಡಿಯೋ ವೈರಲ್: ನಟನ ಪರಿಸ್ಥಿತಿ ಹೇಗಿದೆ?

ಕಾಲಿವುಡ್​ ನಟ ಅಜಿತ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ದುಬೈನಲ್ಲಿ ಈ ಘಟನೆ ನಡೆದಿದೆ. ಅಪಘಾತ ಸಂಭವಿಸುವಾಗ ಕಾರು ಬರೋಬ್ಬರಿ 180 ಕಿಮೀ ವೇಗದಲ್ಲಿ ಸಾಗುತ್ತಿತ್ತು. ಅಜಿತ್ ಅವರ ಕಾರು ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದ ವಿಡಿಯೋ ಕೂಡ ಲಭ್ಯವಾಗಿದೆ. ಅಪಘಾತದ ತೀವ್ರತೆಯನ್ನು ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

180 ಕಿಮೀ ವೇಗದಲ್ಲಿ ಅಜಿತ್ ಕಾರು ಅಪಘಾತ; ವಿಡಿಯೋ ವೈರಲ್: ನಟನ ಪರಿಸ್ಥಿತಿ ಹೇಗಿದೆ?
Ajith Kumar Car Accident
ಮದನ್​ ಕುಮಾರ್​
|

Updated on: Jan 07, 2025 | 8:24 PM

Share

ಖ್ಯಾತ ನಟ ಅಜಿತ್ ಅವರು ದೊಡ್ಡ ಸಾಹಸಿ. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಬೇರೆ ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುತ್ತಾರೆ. ಕಾರುಗಳ ಬಗ್ಗೆ ಅವರಿಗೆ ವಿಶೇಷವಾದ ಕ್ರೇಜ್ ಇದೆ. ಅದರಲ್ಲೂ ಕಾರ್​ ರೇಸ್​ ಮತ್ತು ಬೈಕ್​ ರೇಸ್​ ಎಂದರೆ ಅವರಿಗೆ ಸಖತ್ ಇಷ್ಟ. ಆದರೆ ಅದರಿಂದ ಅಪಾಯ ಕೂಡ ಎದುರಾಗಿದೆ. ದುಬೈನಲ್ಲಿ ಕಾರು ರೇಸ್​ ಅಭ್ಯಾಸ ಮಾಡುವ ಸಂದರ್ಭದಲ್ಲಿ ಅಜಿತ್ ಅವರಿಗೆ ಅಪಘಾತ ಆಗಿದೆ. 180 ಕಿಮೀ ವೇಗದಲ್ಲಿ ಅಜಿತ್ ಅವರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ತಡೆಗೋಡೆಗೆ ಡಿಕ್ಕಿಯಾಗಿದೆ.

ಕಾರು ಅಪಘಾತ ಆದ ಕೂಡಲೇ ಅಜಿತ್ ಅವರನ್ನು ರಕ್ಷಿಸಲಾಗಿದೆ. ಬಳಿಕ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಆಸ್ಪತ್ರೆಗೆ ಕಳಿಸಲಾಗಿದೆ. ಈ ಮೊದಲು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಕೂಡ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಅದಕ್ಕಿಂತಲೂ ಭಯಂಕರವಾದ ರೀತಿಯಲ್ಲಿ ಅವರ ಕಾರು ಅಪಘಾತ ಸಂಭವಿಸಿದೆ.

‘ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಅವರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಈ ಪರೀಕ್ಷೆ ಪೂರ್ಣಗೊಳ್ಳಲು ಇನ್ನೇನು ಕೆಲವೇ ನಿಮಿಷಗಳು ಇರುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಆಯಿತು. ಅಜಿತ್ ಅವರು ದುಬೈನಲ್ಲಿ ತಮ್ಮದೇ ರೇಸಿಂಗ್ ತಂಡವನ್ನು ಹೊಂದಿದ್ದಾರೆ.

ಇದನ್ನೂ ಓದಿ: 3.5 ಕೋಟಿ ರೂ. ಬೆಲೆಯ ಕಾರು ಖರೀದಿಸಿದ ಅಜಿತ್; ಹೆಮ್ಮೆಯಿಂದ ಫೋಟೋ ಹಂಚಿಕೊಂಡ ಪತ್ನಿ

ಸಮಾಧಾನದ ಸಂಗತಿ ಏನೆಂದರೆ, ಅಜಿತ್ ಅವರಿಗೆ ಈ ಅಪಘಾತದಿಂದ ಯಾವುದೇ ತೊಂದರೆ ಆಗಿಲ್ಲ. 180 ಕಿಲೋ ಮೀಟರ್​ ವೇಗದಲ್ಲಿ ಕಾರು ಡಿಕ್ಕಿ ಆಗಿದ್ದರೂ ಕೂಡ ಅವರಿಗೆ ಯಾವುದೇ ಗಾಯಗಳು ಆಗಿಲ್ಲ ಎಂದು ಅವರು ಮ್ಯಾನೇಜರ್​ ತಿಳಿಸಿದ್ದಾರೆ ಎಂದು ವರದಿ ಆಗಿದೆ. ಅಜಿತ್ ಕುಮಾರ್ ಕಾರು ಅಪಘಾತ ಆಗಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಯಾವುದೇ ತೊಂದರೆ ಆಗದೇ ಇರಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ