Ajith Kumar: ‘ಅಜಿತ್​ ಒಳ್ಳೆಯ ಮನುಷ್ಯ ಅಲ್ಲ, ನನ್ನ ದುಡ್ಡು ವಾಪಸ್​ ಕೊಟ್ಟಿಲ್ಲ’: ನಿರ್ಮಾಪಕನ ಗಂಭೀರ ಆರೋಪ

Manickam Narayanan: ‘ತನ್ನನ್ನು ತಾನು ಒಳ್ಳೆಯವನು ಅಂತ ಅಜಿತ್​ ಕುಮಾರ್​ ಹೇಳಿಕೊಳ್ಳುತ್ತಾರೆ. ಆದರೆ ಅವರು ಒಳ್ಳೆಯ ಮನುಷ್ಯ ಅಲ್ಲ’ ಎಂದು ನಿರ್ಮಾಪಕ ಮಾಣಿಕಂ ನಾರಾಯಣನ್​ ಶಾಕಿಂಗ್​ ಹೇಳಿಕೆ ನೀಡಿದ್ದಾರೆ.

Ajith Kumar: ‘ಅಜಿತ್​ ಒಳ್ಳೆಯ ಮನುಷ್ಯ ಅಲ್ಲ, ನನ್ನ ದುಡ್ಡು ವಾಪಸ್​ ಕೊಟ್ಟಿಲ್ಲ’: ನಿರ್ಮಾಪಕನ ಗಂಭೀರ ಆರೋಪ
ಅಜಿತ್​ ಕುಮಾರ್​
Follow us
|

Updated on: Jul 11, 2023 | 7:00 PM

ಸ್ಯಾಂಡಲ್​ವುಡ್​ ನಟ ಸುದೀಪ್​ ಅವರ ಮೇಲೆ ನಿರ್ಮಾಪಕ ಎಂ.ಎನ್​. ಕುಮಾರ್​ ಅವರು ಆರೋಪ ಮಾಡಿದ್ದು ಇತ್ತೀಚೆಗೆ ದೊಡ್ಡ ಸುದ್ದಿ ಆಯಿತು. ಸುದೀಪ್​ ಅವರು ಅಡ್ವಾನ್ಸ್​ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂದು ಕುಮಾರ್​ ಅವರು ಆರೋಪಿಸಿದರು. ಈಗ ಕಾಲಿವುಡ್​ನಲ್ಲೂ (Kollywood) ಅದೇ ರೀತಿಯು ವಿವಾದ ಭುಗಿಲೆದ್ದಿದೆ. ತಮಿಳು ಚಿತ್ರರಂಗದ ಸ್ಟಾರ್​ ನಟ ಅಜಿತ್​ ಕುಮಾರ್​ (Ajith Kumar) ಅವರು ತಮಗೆ ಮೋಸ ಮಾಡಿದ್ದಾರೆ ಎಂದು ಮಾಣಿಕಂ ನಾರಾಯಣನ್​ (Manickam Narayanan) ಆರೋಪ ಹೊರಿಸಿದ್ದಾರೆ. ತಮ್ಮಿಂದ ಹಣ ಪಡೆದು, ಸಿನಿಮಾ ಮಾಡದೇ ಸತಾಯಿಸಿದ್ದಾರೆ ಎಂದು ನಾರಾಯಣನ್​ ಹೇಳಿರುವುದು ಸಂಚಲನ ಸೃಷ್ಟಿ ಮಾಡಿದೆ.

ಕಮಲ್​ ಹಾಸನ್​ ಅವರಂತಹ ಸ್ಟಾರ್​ ನಟರ ಅನೇಕ ಸಿನಿಮಾಗಳಿಗೆ ಮಾಣಿಕಂ ನಾರಾಯಣನ್​ ಅವರು ಬಂಡವಾಳ ಹೂಡಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಅಜಿತ್​ ಕುಮಾರ್​ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಅಜಿತ್​ ಅವರು ಬಹಳ ವರ್ಷಗಳ ಹಿಂದೆ ತಂದೆ-ತಾಯಿಯನ್ನು ಮಲೇಷಿಯಾಗೆ ಕಳಿಸಲು ನನ್ನಿಂದ ಹಣ ಪಡೆದಿದ್ದರು. ಮುಂದಿನ ದಿನಗಳಲ್ಲಿ ಒಟ್ಟಿಗೆ ಸಿನಿಮಾ ಮಾಡೋಣ, ಈ ಹಣವನ್ನು ಸಂಭಾವನೆಗೆ ಸರಿ ಮಾಡಿಕೊಳ್ಳೋಣ ಅಂತ ಅವರು ಹೇಳಿದ್ದರು. ಇಂದಿನ ತನಕ ಅವರ ನನ್ನ ಜೊತೆ ಸಿನಿಮಾವನ್ನೂ ಮಾಡಿಲ್ಲ, ಹಣವನ್ನೂ ಹಿಂದಿರುಗಿಸಿಲ್ಲ’ ಎಂದು ಮಾಣಿಕಂ ನಾರಾಯಣನ್​ ಅವರು ಹೇಳಿದ್ದಾರೆ.

Sudeep: ನಿರ್ಮಾಪಕರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ ಮಾಡಿದ ಕಿಚ್ಚ ಸುದೀಪ್​ ಅಭಿಮಾನಿಗಳು

‘ಈ ಬಗ್ಗೆ ಅಜಿತ್​ ಅವರು ಇಷ್ಟು ವರ್ಷಗಳ ತನಕ ಮಾತನಾಡಿಲ್ಲ. ತನ್ನನ್ನು ತಾನು ಒಳ್ಳೆಯವನು ಅಂತ ಅವರು ಹೇಳಿಕೊಳ್ಳುತ್ತಾರೆ. ಆದರೆ ಅವರು ಒಳ್ಳೆಯ ಮನುಷ್ಯ ಅಲ್ಲ. ಅವರದ್ದು ಒಳ್ಳೆಯ ಕುಟುಂಬ. ವರ್ಷಕ್ಕೆ ಅವರು 50 ಕೋಟಿ ರೂಪಾಯಿ ಸಂಪಾದನೆ ಮಾಡುತ್ತಾರೆ. ಹೀಗಿರುವಾಗ ಅವರು ಜನರಿಗೆ ಯಾಕೆ ಮೋಸ ಮಾಡಬೇಕು? ಅವರ ಜೊತೆ ಸಿನಿಮಾ ಮಾಡಿದ ನಿರ್ಮಾಪಕರಿಗೆ ನಷ್ಟ ಆಗಿದೆ. ಹಾಗಿದ್ದರೂ ಕೂಡ ಅವರು ನಿರ್ಮಾಪಕರಿಗೆ ಸಹಾಯ ಮಾಡಿಲ್ಲ’ ಎಂದು ಮಾಣಿಕಂ ನಾರಾಯಣನ್​ ಹೇಳಿದ್ದಾರೆ.

​ಕೀಳು ಮಟ್ಟಕ್ಕೆ ಬಂತು ಫ್ಯಾನ್ಸ್​ ವಾರ್​; ದಳಪತಿ ವಿಜಯ್​ ನಿಧನ ಎಂದು ಫೇಕ್​ ನ್ಯೂಸ್​ ಹಬ್ಬಿಸಿದ ಅಜಿತ್​ ಫ್ಯಾನ್ಸ್​

ಅಜಿತ್​ ಅವರು ಸಿನಿಮಾಗಳ ಜೊತೆಗೆ ಪ್ರವಾಸಕ್ಕೆ ಹೆಚ್ಚು ಸಮಯ ನೀಡುತ್ತಾರೆ. ವಿಶ್ವದ ಹಲವು ದೇಶಗಳಲ್ಲಿ ಅವರು ಬೈಕ್​ ರೈಡ್​ ಮಾಡಿದ್ದಾರೆ. ಪ್ರಸ್ತುತ ಅವರು ಸ್ವಿಡ್ಜರ್​ಲ್ಯಾಂಡ್​ನಲ್ಲಿದ್ದಾರೆ. ಮಾಣಿಕಂ ನಾರಾಯಣನ್​ ಹೊರಿಸಿದ ಆರೋಪಗಳಿಗೆ ಅಜಿತ್​ ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಮಾಣಿಕಂ ನಾರಾಯಣನ್​ ಅವರ ಸಂದರ್ಶನದ ವಿಡಿಯೋ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ