AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thunivu Movie: ‘ತುನಿವು’ ರಿಲೀಸ್ ವೇಳೆ ಅವಘಡ; ಅಜಿತ್ ಕುಮಾರ್ ಅಭಿಮಾನಿ ಸಾವು

ಭರತ್ ಕುಮಾರ್ ಅವರು ಮೃತ ವ್ಯಕ್ತಿ. ಭರತ್ ಮುಂಜಾನೆ 1 ಗಂಟೆಗೆ ಆಯೋಜನೆಗೊಂಡಿದ್ದ ಶೋ ವೀಕ್ಷಿಸಲು ತೆರಳಿದ್ದರು. ಸೆಲೆಬ್ರೇಷನ್​ನಲ್ಲಿ ಭಾಗಿಯಾಗಿದ್ದ ಭರತ್ ಟ್ರಕ್ ಏರಿದ್ದರು. ಟ್ರಕ್ ನಿಧಾನವಾಗಿ ಚಲಿಸುತ್ತಿತ್ತು. ಟ್ರಕ್​ನಿಂದ ಭರತ್ ಜಿಗಿದಿದ್ದಾರೆ.

Thunivu Movie: ‘ತುನಿವು’ ರಿಲೀಸ್ ವೇಳೆ ಅವಘಡ; ಅಜಿತ್ ಕುಮಾರ್ ಅಭಿಮಾನಿ ಸಾವು
ಅಜಿತ್ ಕುಮಾರ್
TV9 Web
| Edited By: |

Updated on: Jan 11, 2023 | 12:02 PM

Share

ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’ ಸಿನಿಮಾ ಇಂದು (ಜನವರಿ 11) ರಿಲೀಸ್ ಆಗಿದೆ. ಈ ಸಿನಿಮಾವನ್ನು ಅಜಿತ್ ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚೆನ್ನೈನಲ್ಲಿ ಈ ಚಿತ್ರಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ. ಬೆಳಗ್ಗೆ ಐದು ಗಂಟೆಗೆ ಅನೇಕ ಕಡೆಗಳಲ್ಲಿ ‘ತುನಿವು’ ಚಿತ್ರದ (Thunivu Movie) ಶೋಗಳು ಪ್ರದರ್ಶನ ಕಂಡವು. ಈ ಚಿತ್ರವನ್ನು ಸ್ವಾಗತಿಸುವ ವೇಳೆ ಅವಘಡ ಒಂದು ಸಂಭವಿಸಿದೆ. ಈ ವೇಳೆ ಅಜಿತ್ ಕುಮಾರ್ ಅಭಿಮಾನಿ ಮೃತಪಟ್ಟಿದ್ದಾನೆ. ಆತನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೋರಲಾಗುತ್ತಿದೆ.

ಅಜಿತ್ ಕುಮಾರ್ ನಟನೆಯ ‘ತುನಿವು’ ಸಿನಿಮಾಗೆ ಎಚ್. ವಿನೋದ್ ಅವರು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಅಜಿತ್ ಅವರು ಮಾಸ್ ಎಂಟರ್​ಟೇನರ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ಈ ಸಂಭ್ರಮದ ವೇಳೆ ಅಜಿತ್ ಅಭಿಮಾನಿ ಮೃತಪಟ್ಟಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಭರತ್ ಕುಮಾರ್ ಅವರು ಮೃತ ವ್ಯಕ್ತಿ. ಭರತ್ ಮುಂಜಾನೆ 1 ಗಂಟೆಗೆ ಆಯೋಜನೆಗೊಂಡಿದ್ದ ಶೋ ವೀಕ್ಷಿಸಲು ತೆರಳಿದ್ದರು. ಸೆಲೆಬ್ರೇಷನ್​ನಲ್ಲಿ ಭಾಗಿಯಾಗಿದ್ದ ಭರತ್ ಟ್ರಕ್ ಏರಿದ್ದರು. ಟ್ರಕ್ ನಿಧಾನವಾಗಿ ಚಲಿಸುತ್ತಿತ್ತು. ಟ್ರಕ್​ನಿಂದ ಭರತ್ ಜಿಗಿದಿದ್ದಾರೆ. ಈ ವೇಳೆ ಅವರು ಮೃತಪಟ್ಟಿದ್ದಾರೆ.

‘ಭರತ್ ಕುಮಾರ್ ತುನಿವು ನೋಡಲು ಬಂದಿದ್ದರು. ಅವರು ಸಾಕಷ್ಟು ಎಗ್ಸೈಟ್​ಮೆಂಟ್​ನಲ್ಲಿದ್ದರು. ನಿಧಾನವಾಗಿ ಸಾಗುತ್ತಿದ್ದ ಟ್ರಕ್​ನಿಂದ ಭರತ್ ಜಿಗಿದಿದ್ದಾರೆ. ಆಗ ಅವರಿಗೆ ಗಾಯಗಳಾಗಿತ್ತು. ಇದರಿಂದ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಮಾಸ್ ಎಂಟರ್​ಟೇನರ್​’; ಅಜಿತ್ ನಟನೆಯ ‘ತುನಿವು’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್

‘ತುನಿವು’ ಟ್ರೇಲರ್​ ನೋಡಿದವರಿಗೆ ಇದು ಒಂದು ದರೋಡೆ ಸಿನಿಮಾ ರೀತಿಯಲ್ಲಿ ಕಂಡಿತ್ತು. ಇದರ ಜತೆಗೆ ಮಾಸ್ ಎಂಟರ್​ಟೇನಿಂಗ್ ಆಗಿ ಸಿನಿಮಾವನ್ನು ಕಟ್ಟಿಕೊಡಲಾಗಿದೆ ಎಂದು ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಚಿತ್ರದಲ್ಲಿ ಒಂದೊಳ್ಳೆಯ ಸಂದೇಶ ಕೂಡ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?