ಅಜಿತ್​ ಕುಮಾರ್​ ನಟನೆಯ ಹೊಸ ಸಿನಿಮಾದ ಶೂಟಿಂಗ್​ ವೇಳೆ ಕಲಾ ನಿರ್ದೇಶಕ ಹೃದಯಾಘಾತದಿಂದ ನಿಧನ

ಹಿಂದಿನ ದಿನ ಶೂಟಿಂಗ್​ ಮುಗಿಸಿ ಹೋಟೆಲ್​ಗೆ ಬಂದಾಗ ಮಿಲನ್​ ಫರ್ನಾಂಡಿಸ್​ ಅವರು ನಾರ್ಮಲ್​ ಆಗಿದ್ದರು. ಭಾನುವಾರ ಬೆಳಗ್ಗೆ ಅವರ ದೇಹ ವಿಪರೀತ ಬೆವರಲು ಆರಂಭಿಸಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡುಹೋಗಲಾಯಿತು. ಆದರೆ ಆಸ್ಪತ್ರೆ ತಲುಪುವುದಕ್ಕೂ ಮುನ್ನ ಅವರು ನಿಧನರಾದರು ಎಂದು ವರದಿ ಆಗಿದೆ.

ಅಜಿತ್​ ಕುಮಾರ್​ ನಟನೆಯ ಹೊಸ ಸಿನಿಮಾದ ಶೂಟಿಂಗ್​ ವೇಳೆ ಕಲಾ ನಿರ್ದೇಶಕ ಹೃದಯಾಘಾತದಿಂದ ನಿಧನ
ಮಿಲನ್​ ಫರ್ನಾಂಡಿಸ್​, ಅಜಿತ್​ ಕುಮಾರ್​
Follow us
|

Updated on: Oct 16, 2023 | 7:12 AM

ತಮಿಳು ಚಿತ್ರರಂಗದಿಂದ ಕಹಿ ಸುದ್ದಿ ಕೇಳಿಬಂದಿದೆ. ಅಜಿತ್​ ಕುಮಾರ್​ (Ajith Kumar) ಅವರು ನಟಿಸುತ್ತಿದ್ದ ಹೊಸ ಸಿನಿಮಾದ ಶೂಟಿಂಗ್​ ವೇಳೆ ಈ ದುರಂತ ನಡೆದಿದೆ. ‘ವಿದಾಮುಯರ್ಚಿ’ ಸಿನಿಮಾಗೆ ಕಲಾ ನಿರ್ದೇಶನ ಮಾಡುತ್ತಿದ್ದ ಮಿಲನ್​ ಫರ್ನಾಂಡಿಸ್​ ಅವರು ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಭಾನುವಾರ (ಅಕ್ಟೋಬರ್​ 15) ಅವರು ಕೊನೆಯುಸಿರು ಎಳೆದಿದ್ದಾರೆ ಎಂಬುದು ತಿಳಿದುಬಂದಿದೆ. ಈ ಸಿನಿಮಾವನ್ನು ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್ಸ್​’ ನಿರ್ಮಿಸುತ್ತಿದೆ. ಮಿಲನ್​ ಫರ್ನಾಂಡಿಸ್​ (Milan Fernandez) ಅವರ ನಿಧನದ ಸುದ್ದಿಯನ್ನು ಈ ಸಂಸ್ಥೆ ಖಚಿತಪಡಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರತಂಡದವರು ಪ್ರಾರ್ಥಿಸಿದ್ದಾರೆ.

‘ವಿದಾಮುಯರ್ಚಿ’ ಚಿತ್ರಕ್ಕೆ ಅಕ್ಟೋಬರ್​ ಆರಂಭದಲ್ಲೇ ಶೂಟಿಂಗ್ ಶುರುವಾಗಿತ್ತು. ಖ್ಯಾತ ನಟ ಅಜಿತ್​ ಕುಮಾರ್​ ಅಭಿನಯಿಸುತ್ತಿರುವ ಈ ಸಿನಿಮಾಗೆ ಸದ್ಯ ಅಜರ್ಬೈಜಾನ್​ನಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಕಲಾ ನಿರ್ದೇಶನದ ಜವಾಬ್ದಾರಿಯನ್ನು ಮಿಲನ್​ ಫರ್ನಾಂಡಿಸ್​ ಅವರು ವಹಿಸಿಕೊಂಡಿದ್ದರು. ಆದರೆ ಕೆಲಸದಲ್ಲಿ ನಿರತವಾಗಿರುವಾಗಲೇ ಅವರಿಗೆ ಹೃದಯಾಘಾತ ಆಗಿದೆ. ಈ ಹಿಂದೆ ಕೂಡ ಅಜಿತ್​ ಕುಮಾರ್​ ನಟನೆಯ ಅನೇಕ ಸಿನಿಮಾಗಳಿಗೆ ಮಿಲನ್​ ಫರ್ನಾಂಡಿಸ್​ ಅವರು ಕಲಾ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: ಈ ಬ್ಲಡ್ ಗ್ರೂಪ್ ಹೊಂದಿರುವ ಜನರಲ್ಲಿ ಹೃದಯಾಘಾತದ ಅಪಾಯ ಹೆಚ್ಚು!

ಹಿಂದಿನ ದಿನ ಶೂಟಿಂಗ್​ ಮುಗಿಸಿ ಹೋಟೆಲ್​ಗೆ ಬಂದಾಗ ಮಿಲನ್​ ಫರ್ನಾಂಡಿಸ್​ ಅವರು ನಾರ್ಮಲ್​ ಆಗಿಯೇ ಇದ್ದರು. ಭಾನುವಾರ ಬೆಳಗ್ಗೆ ಅವರು ಕೆಲಸಕ್ಕಾಗಿ ಎಲ್ಲರನ್ನೂ ಒಂದೆಡೆ ಸೇರಿಸಿದರು. ನಂತರ ಅವರಿಗೆ ಆರೋಗ್ಯದಲ್ಲಿ ಏರುಪೇರು ಆಗಿದ್ದು ಕಂಡುಬಂತು. ಅವರ ದೇಹ ವಿಪರೀತವಾಗಿ ಬೆವರಲು ಆರಂಭಿಸಿತು. ಕೂಡಲೇ ಪ್ರೊಡಕ್ಷನ್​ ಟೀಮ್​ನವರು ಕಾರಿನಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡಹೋದರು. ಆದರೆ ಆಸ್ಪತ್ರೆ ತಲುಪುವುದಕ್ಕೂ ಮುನ್ನ ಮಿಲನ್​ ಫರ್ನಾಂಡಿಸ್​ ನಿಧನರಾದರು ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಬಾಗಲಕೋಟೆ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ

‘ನಮ್ಮ ಕಲಾ ನಿರ್ದೇಶಕ ಮಿಲನ್​ ಫರ್ಮಾಂಡಿಸ್​ ಅವರ ನಿಧನಕ್ಕೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಮತ್ತು ಆಪ್ತರಿಗಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ’ ಎಂದು ಲೈಕಾ ಪ್ರೊಡಕ್ಷನ್ಸ್​ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಮಾಡಲಾಗಿದೆ.

‘ಬಿಲ್ಲ’, ‘ವೀರಂ’, ‘ತುನಿವು’, ‘ವೇದಳಾಂ’, ‘ಅಣ್ಣಾತೆ’, ‘ಪತ್ತು ತಲ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕಲಾ ನಿರ್ದೇಶಕರಾಗಿ ಮಿಲನ್​ ಫರ್ನಾಂಡಿಸ್​ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು