AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್​ ಕುಮಾರ್​ ನಟನೆಯ ಹೊಸ ಸಿನಿಮಾದ ಶೂಟಿಂಗ್​ ವೇಳೆ ಕಲಾ ನಿರ್ದೇಶಕ ಹೃದಯಾಘಾತದಿಂದ ನಿಧನ

ಹಿಂದಿನ ದಿನ ಶೂಟಿಂಗ್​ ಮುಗಿಸಿ ಹೋಟೆಲ್​ಗೆ ಬಂದಾಗ ಮಿಲನ್​ ಫರ್ನಾಂಡಿಸ್​ ಅವರು ನಾರ್ಮಲ್​ ಆಗಿದ್ದರು. ಭಾನುವಾರ ಬೆಳಗ್ಗೆ ಅವರ ದೇಹ ವಿಪರೀತ ಬೆವರಲು ಆರಂಭಿಸಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡುಹೋಗಲಾಯಿತು. ಆದರೆ ಆಸ್ಪತ್ರೆ ತಲುಪುವುದಕ್ಕೂ ಮುನ್ನ ಅವರು ನಿಧನರಾದರು ಎಂದು ವರದಿ ಆಗಿದೆ.

ಅಜಿತ್​ ಕುಮಾರ್​ ನಟನೆಯ ಹೊಸ ಸಿನಿಮಾದ ಶೂಟಿಂಗ್​ ವೇಳೆ ಕಲಾ ನಿರ್ದೇಶಕ ಹೃದಯಾಘಾತದಿಂದ ನಿಧನ
ಮಿಲನ್​ ಫರ್ನಾಂಡಿಸ್​, ಅಜಿತ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Oct 16, 2023 | 7:12 AM

ತಮಿಳು ಚಿತ್ರರಂಗದಿಂದ ಕಹಿ ಸುದ್ದಿ ಕೇಳಿಬಂದಿದೆ. ಅಜಿತ್​ ಕುಮಾರ್​ (Ajith Kumar) ಅವರು ನಟಿಸುತ್ತಿದ್ದ ಹೊಸ ಸಿನಿಮಾದ ಶೂಟಿಂಗ್​ ವೇಳೆ ಈ ದುರಂತ ನಡೆದಿದೆ. ‘ವಿದಾಮುಯರ್ಚಿ’ ಸಿನಿಮಾಗೆ ಕಲಾ ನಿರ್ದೇಶನ ಮಾಡುತ್ತಿದ್ದ ಮಿಲನ್​ ಫರ್ನಾಂಡಿಸ್​ ಅವರು ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಭಾನುವಾರ (ಅಕ್ಟೋಬರ್​ 15) ಅವರು ಕೊನೆಯುಸಿರು ಎಳೆದಿದ್ದಾರೆ ಎಂಬುದು ತಿಳಿದುಬಂದಿದೆ. ಈ ಸಿನಿಮಾವನ್ನು ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್ಸ್​’ ನಿರ್ಮಿಸುತ್ತಿದೆ. ಮಿಲನ್​ ಫರ್ನಾಂಡಿಸ್​ (Milan Fernandez) ಅವರ ನಿಧನದ ಸುದ್ದಿಯನ್ನು ಈ ಸಂಸ್ಥೆ ಖಚಿತಪಡಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರತಂಡದವರು ಪ್ರಾರ್ಥಿಸಿದ್ದಾರೆ.

‘ವಿದಾಮುಯರ್ಚಿ’ ಚಿತ್ರಕ್ಕೆ ಅಕ್ಟೋಬರ್​ ಆರಂಭದಲ್ಲೇ ಶೂಟಿಂಗ್ ಶುರುವಾಗಿತ್ತು. ಖ್ಯಾತ ನಟ ಅಜಿತ್​ ಕುಮಾರ್​ ಅಭಿನಯಿಸುತ್ತಿರುವ ಈ ಸಿನಿಮಾಗೆ ಸದ್ಯ ಅಜರ್ಬೈಜಾನ್​ನಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಕಲಾ ನಿರ್ದೇಶನದ ಜವಾಬ್ದಾರಿಯನ್ನು ಮಿಲನ್​ ಫರ್ನಾಂಡಿಸ್​ ಅವರು ವಹಿಸಿಕೊಂಡಿದ್ದರು. ಆದರೆ ಕೆಲಸದಲ್ಲಿ ನಿರತವಾಗಿರುವಾಗಲೇ ಅವರಿಗೆ ಹೃದಯಾಘಾತ ಆಗಿದೆ. ಈ ಹಿಂದೆ ಕೂಡ ಅಜಿತ್​ ಕುಮಾರ್​ ನಟನೆಯ ಅನೇಕ ಸಿನಿಮಾಗಳಿಗೆ ಮಿಲನ್​ ಫರ್ನಾಂಡಿಸ್​ ಅವರು ಕಲಾ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: ಈ ಬ್ಲಡ್ ಗ್ರೂಪ್ ಹೊಂದಿರುವ ಜನರಲ್ಲಿ ಹೃದಯಾಘಾತದ ಅಪಾಯ ಹೆಚ್ಚು!

ಹಿಂದಿನ ದಿನ ಶೂಟಿಂಗ್​ ಮುಗಿಸಿ ಹೋಟೆಲ್​ಗೆ ಬಂದಾಗ ಮಿಲನ್​ ಫರ್ನಾಂಡಿಸ್​ ಅವರು ನಾರ್ಮಲ್​ ಆಗಿಯೇ ಇದ್ದರು. ಭಾನುವಾರ ಬೆಳಗ್ಗೆ ಅವರು ಕೆಲಸಕ್ಕಾಗಿ ಎಲ್ಲರನ್ನೂ ಒಂದೆಡೆ ಸೇರಿಸಿದರು. ನಂತರ ಅವರಿಗೆ ಆರೋಗ್ಯದಲ್ಲಿ ಏರುಪೇರು ಆಗಿದ್ದು ಕಂಡುಬಂತು. ಅವರ ದೇಹ ವಿಪರೀತವಾಗಿ ಬೆವರಲು ಆರಂಭಿಸಿತು. ಕೂಡಲೇ ಪ್ರೊಡಕ್ಷನ್​ ಟೀಮ್​ನವರು ಕಾರಿನಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡಹೋದರು. ಆದರೆ ಆಸ್ಪತ್ರೆ ತಲುಪುವುದಕ್ಕೂ ಮುನ್ನ ಮಿಲನ್​ ಫರ್ನಾಂಡಿಸ್​ ನಿಧನರಾದರು ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಬಾಗಲಕೋಟೆ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ

‘ನಮ್ಮ ಕಲಾ ನಿರ್ದೇಶಕ ಮಿಲನ್​ ಫರ್ಮಾಂಡಿಸ್​ ಅವರ ನಿಧನಕ್ಕೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಮತ್ತು ಆಪ್ತರಿಗಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ’ ಎಂದು ಲೈಕಾ ಪ್ರೊಡಕ್ಷನ್ಸ್​ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಮಾಡಲಾಗಿದೆ.

‘ಬಿಲ್ಲ’, ‘ವೀರಂ’, ‘ತುನಿವು’, ‘ವೇದಳಾಂ’, ‘ಅಣ್ಣಾತೆ’, ‘ಪತ್ತು ತಲ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕಲಾ ನಿರ್ದೇಶಕರಾಗಿ ಮಿಲನ್​ ಫರ್ನಾಂಡಿಸ್​ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್