ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ!

ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ
ಅಜಿತ್​ ಕುಮಾರ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Dec 01, 2021 | 9:00 PM

ಸ್ಟಾರ್​ ನಟರನ್ನು ಅಭಿಮಾನಿಗಳು ಪ್ರೀತಿಯಿಂದ ಬೇರೆಬೇರೆ ಹೆಸರುಗಳಲ್ಲಿ ಕರೆಯುತ್ತಾರೆ. ಅವರಿಗೆ ಹಿಟ್​ ಕೊಟ್ಟ ಸಿನಿಮಾಗಳ ಹೆಸರಿನಿಂದಲೇ ನಟರನ್ನು ಕರೆಯುವುದುಂಟು. ಕೆಲವರನ್ನು ವಿಶೇಷ ಬಿರುದಿನಿಂದ ಕರೆಯಲಾಗುತ್ತದೆ. ‘ಕಿಚ್ಚ ಸುದೀಪ್​’, ‘ದುನಿಯಾ’ ವಿಜಯ್​, ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಕೆಲ ಸ್ಟಾರ್​ಗಳಿಗೆ ಇದು ಇಷ್ಟವಾಗುವುದಿಲ್ಲ. ಈ ವಿಚಾರವನ್ನು ಅವರು ನೇರವಾಗಿಯೇ ಹೇಳಿದ ಉದಾಹರಣೆಯೂ ಇದೆ. ಈಗ ಕಾಲಿವುಡ್​ ಸ್ಟಾರ್​ ನಟ ಅಜಿತ್​ ಕೂಡ ಹೀಗೊಂದು ಪ್ರಕಟಣೆ ಹೊರಡಿಸಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ! ಹೀಗೊಂದು ಪ್ರಕಟಣೆಯನ್ನು ಅವರೇ ಹೊರಡಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಹೀಗಾಗಿ, ಇನ್ನುಮುಂದೆ ಅವರ ಹೆಸರ ಹಿಂದೆ ಯಾವ ಬಿರುದನ್ನೂ ಸೇರಿಸುವಂತಿಲ್ಲ.

‘ಮಾಧ್ಯಮ, ಸಾರ್ವಜನಿಕರು ಹಾಗೂ ನನ್ನ ಅಭಿಮಾನಿಗಳಲ್ಲಿ ಒಂದು ವಿನಂತಿ. ನನ್ನನ್ನು ಅಜಿತ್​, ಅಜಿತ್​ ಕುಮಾರ್​ ಅಥವಾ ಎಕೆ ಎಂದು ಮಾತ್ರ ಕರೆಯಬೇಕು. ನನ್ನನ್ನು ತಾಲಾ ಎಂದು ಯಾರೂ ಕರೆಯಬಾರದು. ನನ್ನ ಹೆಸರ ಹಿಂದೆ ಈ ಶಬ್ದವನ್ನು ಬಳಸುವಂತಿಲ್ಲ. ಎಲ್ಲರಿಗೂ ಆರೋಗ್ಯ, ಸಂತೋಷ, ಯಶಸ್ಸು, ಮನಃಶಾಂತಿ ಸಿಗಲಿ’ ಎಂದು ಅಜಿತ್ ಬರೆದುಕೊಂಡಿದ್ದಾರೆ.  ಸಾಮಾನ್ಯವಾಗಿ ಈ ರೀತಿಯ ಮನವಿಗಳನ್ನು ಮಾಡಿಕೊಳ್ಳುವಾಗ ನಟರು ಅದಕ್ಕೆ ಕಾರಣವನ್ನು ತಿಳಿಸುತ್ತಾರೆ. ಆದರೆ, ಅಜಿತ್​ ಈ ರೀತಿಯ ಯಾವುದೇ ಕಾರಣವನ್ನು ವಿವರಿಸಿಲ್ಲ.

2019ರ ಆಗಸ್ಟ್​ನಲ್ಲಿ ಬಿಡುಗಡೆಯಾದ ‘ನೇರ್ಕೊಂಡ ಪಾರ್ವೈ’ ಬಳಿಕ ಅಜಿತ್​ ಅವರ ಬೇರೆ ಯಾವುದೇ ಸಿನಿಮಾ ತೆರೆಕಂಡಿಲ್ಲ. ಹಾಗಾಗಿ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅವರ ನಟನೆಯ ‘ವಲಿಮೈ’ ಚಿತ್ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ‘ನೇರ್ಕೊಂಡ ಪಾರ್ವೈ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದ ಎಚ್​. ವಿನೋದ್​ ಅವರೇ ‘ವಲಿಮೈ’ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ಬೋನಿ ಕಪೂರ್​ ಬಂಡವಾಳ ಹೂಡಿದ್ದಾರೆ. ಹಾಗಾಗಿ ಈ ಕಾಂಬಿನೇಷನ್​ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ನಾಯಕಿಯಾಗಿ ಹುಮಾ ಖುರೇಶಿ ನಟಿಸಿದ್ದಾರೆ.

ಇದನ್ನೂ ಓದಿ: Valimai: ಬೈಕ್​ ಸ್ಟಂಟ್​ ಮಾಡುತ್ತ ಫ್ಯಾನ್ಸ್​ ಎದೆಬಡಿತ ಹೆಚ್ಚಿಸಿದ ಅಜಿತ್​; ಹೇಗಿದೆ ಗೊತ್ತಾ ‘ವಲಿಮೈ’ ಝಲಕ್​​?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ