AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ!

ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ
ಅಜಿತ್​ ಕುಮಾರ್​
TV9 Web
| Edited By: |

Updated on: Dec 01, 2021 | 9:00 PM

Share

ಸ್ಟಾರ್​ ನಟರನ್ನು ಅಭಿಮಾನಿಗಳು ಪ್ರೀತಿಯಿಂದ ಬೇರೆಬೇರೆ ಹೆಸರುಗಳಲ್ಲಿ ಕರೆಯುತ್ತಾರೆ. ಅವರಿಗೆ ಹಿಟ್​ ಕೊಟ್ಟ ಸಿನಿಮಾಗಳ ಹೆಸರಿನಿಂದಲೇ ನಟರನ್ನು ಕರೆಯುವುದುಂಟು. ಕೆಲವರನ್ನು ವಿಶೇಷ ಬಿರುದಿನಿಂದ ಕರೆಯಲಾಗುತ್ತದೆ. ‘ಕಿಚ್ಚ ಸುದೀಪ್​’, ‘ದುನಿಯಾ’ ವಿಜಯ್​, ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಕೆಲ ಸ್ಟಾರ್​ಗಳಿಗೆ ಇದು ಇಷ್ಟವಾಗುವುದಿಲ್ಲ. ಈ ವಿಚಾರವನ್ನು ಅವರು ನೇರವಾಗಿಯೇ ಹೇಳಿದ ಉದಾಹರಣೆಯೂ ಇದೆ. ಈಗ ಕಾಲಿವುಡ್​ ಸ್ಟಾರ್​ ನಟ ಅಜಿತ್​ ಕೂಡ ಹೀಗೊಂದು ಪ್ರಕಟಣೆ ಹೊರಡಿಸಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ! ಹೀಗೊಂದು ಪ್ರಕಟಣೆಯನ್ನು ಅವರೇ ಹೊರಡಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಹೀಗಾಗಿ, ಇನ್ನುಮುಂದೆ ಅವರ ಹೆಸರ ಹಿಂದೆ ಯಾವ ಬಿರುದನ್ನೂ ಸೇರಿಸುವಂತಿಲ್ಲ.

‘ಮಾಧ್ಯಮ, ಸಾರ್ವಜನಿಕರು ಹಾಗೂ ನನ್ನ ಅಭಿಮಾನಿಗಳಲ್ಲಿ ಒಂದು ವಿನಂತಿ. ನನ್ನನ್ನು ಅಜಿತ್​, ಅಜಿತ್​ ಕುಮಾರ್​ ಅಥವಾ ಎಕೆ ಎಂದು ಮಾತ್ರ ಕರೆಯಬೇಕು. ನನ್ನನ್ನು ತಾಲಾ ಎಂದು ಯಾರೂ ಕರೆಯಬಾರದು. ನನ್ನ ಹೆಸರ ಹಿಂದೆ ಈ ಶಬ್ದವನ್ನು ಬಳಸುವಂತಿಲ್ಲ. ಎಲ್ಲರಿಗೂ ಆರೋಗ್ಯ, ಸಂತೋಷ, ಯಶಸ್ಸು, ಮನಃಶಾಂತಿ ಸಿಗಲಿ’ ಎಂದು ಅಜಿತ್ ಬರೆದುಕೊಂಡಿದ್ದಾರೆ.  ಸಾಮಾನ್ಯವಾಗಿ ಈ ರೀತಿಯ ಮನವಿಗಳನ್ನು ಮಾಡಿಕೊಳ್ಳುವಾಗ ನಟರು ಅದಕ್ಕೆ ಕಾರಣವನ್ನು ತಿಳಿಸುತ್ತಾರೆ. ಆದರೆ, ಅಜಿತ್​ ಈ ರೀತಿಯ ಯಾವುದೇ ಕಾರಣವನ್ನು ವಿವರಿಸಿಲ್ಲ.

2019ರ ಆಗಸ್ಟ್​ನಲ್ಲಿ ಬಿಡುಗಡೆಯಾದ ‘ನೇರ್ಕೊಂಡ ಪಾರ್ವೈ’ ಬಳಿಕ ಅಜಿತ್​ ಅವರ ಬೇರೆ ಯಾವುದೇ ಸಿನಿಮಾ ತೆರೆಕಂಡಿಲ್ಲ. ಹಾಗಾಗಿ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅವರ ನಟನೆಯ ‘ವಲಿಮೈ’ ಚಿತ್ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ‘ನೇರ್ಕೊಂಡ ಪಾರ್ವೈ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದ ಎಚ್​. ವಿನೋದ್​ ಅವರೇ ‘ವಲಿಮೈ’ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ಬೋನಿ ಕಪೂರ್​ ಬಂಡವಾಳ ಹೂಡಿದ್ದಾರೆ. ಹಾಗಾಗಿ ಈ ಕಾಂಬಿನೇಷನ್​ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ನಾಯಕಿಯಾಗಿ ಹುಮಾ ಖುರೇಶಿ ನಟಿಸಿದ್ದಾರೆ.

ಇದನ್ನೂ ಓದಿ: Valimai: ಬೈಕ್​ ಸ್ಟಂಟ್​ ಮಾಡುತ್ತ ಫ್ಯಾನ್ಸ್​ ಎದೆಬಡಿತ ಹೆಚ್ಚಿಸಿದ ಅಜಿತ್​; ಹೇಗಿದೆ ಗೊತ್ತಾ ‘ವಲಿಮೈ’ ಝಲಕ್​​?

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ