AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ!

ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ
ಅಜಿತ್​ ಕುಮಾರ್​
TV9 Web
| Edited By: |

Updated on: Dec 01, 2021 | 9:00 PM

Share

ಸ್ಟಾರ್​ ನಟರನ್ನು ಅಭಿಮಾನಿಗಳು ಪ್ರೀತಿಯಿಂದ ಬೇರೆಬೇರೆ ಹೆಸರುಗಳಲ್ಲಿ ಕರೆಯುತ್ತಾರೆ. ಅವರಿಗೆ ಹಿಟ್​ ಕೊಟ್ಟ ಸಿನಿಮಾಗಳ ಹೆಸರಿನಿಂದಲೇ ನಟರನ್ನು ಕರೆಯುವುದುಂಟು. ಕೆಲವರನ್ನು ವಿಶೇಷ ಬಿರುದಿನಿಂದ ಕರೆಯಲಾಗುತ್ತದೆ. ‘ಕಿಚ್ಚ ಸುದೀಪ್​’, ‘ದುನಿಯಾ’ ವಿಜಯ್​, ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಕೆಲ ಸ್ಟಾರ್​ಗಳಿಗೆ ಇದು ಇಷ್ಟವಾಗುವುದಿಲ್ಲ. ಈ ವಿಚಾರವನ್ನು ಅವರು ನೇರವಾಗಿಯೇ ಹೇಳಿದ ಉದಾಹರಣೆಯೂ ಇದೆ. ಈಗ ಕಾಲಿವುಡ್​ ಸ್ಟಾರ್​ ನಟ ಅಜಿತ್​ ಕೂಡ ಹೀಗೊಂದು ಪ್ರಕಟಣೆ ಹೊರಡಿಸಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ! ಹೀಗೊಂದು ಪ್ರಕಟಣೆಯನ್ನು ಅವರೇ ಹೊರಡಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಹೀಗಾಗಿ, ಇನ್ನುಮುಂದೆ ಅವರ ಹೆಸರ ಹಿಂದೆ ಯಾವ ಬಿರುದನ್ನೂ ಸೇರಿಸುವಂತಿಲ್ಲ.

‘ಮಾಧ್ಯಮ, ಸಾರ್ವಜನಿಕರು ಹಾಗೂ ನನ್ನ ಅಭಿಮಾನಿಗಳಲ್ಲಿ ಒಂದು ವಿನಂತಿ. ನನ್ನನ್ನು ಅಜಿತ್​, ಅಜಿತ್​ ಕುಮಾರ್​ ಅಥವಾ ಎಕೆ ಎಂದು ಮಾತ್ರ ಕರೆಯಬೇಕು. ನನ್ನನ್ನು ತಾಲಾ ಎಂದು ಯಾರೂ ಕರೆಯಬಾರದು. ನನ್ನ ಹೆಸರ ಹಿಂದೆ ಈ ಶಬ್ದವನ್ನು ಬಳಸುವಂತಿಲ್ಲ. ಎಲ್ಲರಿಗೂ ಆರೋಗ್ಯ, ಸಂತೋಷ, ಯಶಸ್ಸು, ಮನಃಶಾಂತಿ ಸಿಗಲಿ’ ಎಂದು ಅಜಿತ್ ಬರೆದುಕೊಂಡಿದ್ದಾರೆ.  ಸಾಮಾನ್ಯವಾಗಿ ಈ ರೀತಿಯ ಮನವಿಗಳನ್ನು ಮಾಡಿಕೊಳ್ಳುವಾಗ ನಟರು ಅದಕ್ಕೆ ಕಾರಣವನ್ನು ತಿಳಿಸುತ್ತಾರೆ. ಆದರೆ, ಅಜಿತ್​ ಈ ರೀತಿಯ ಯಾವುದೇ ಕಾರಣವನ್ನು ವಿವರಿಸಿಲ್ಲ.

2019ರ ಆಗಸ್ಟ್​ನಲ್ಲಿ ಬಿಡುಗಡೆಯಾದ ‘ನೇರ್ಕೊಂಡ ಪಾರ್ವೈ’ ಬಳಿಕ ಅಜಿತ್​ ಅವರ ಬೇರೆ ಯಾವುದೇ ಸಿನಿಮಾ ತೆರೆಕಂಡಿಲ್ಲ. ಹಾಗಾಗಿ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅವರ ನಟನೆಯ ‘ವಲಿಮೈ’ ಚಿತ್ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ‘ನೇರ್ಕೊಂಡ ಪಾರ್ವೈ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದ ಎಚ್​. ವಿನೋದ್​ ಅವರೇ ‘ವಲಿಮೈ’ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ಬೋನಿ ಕಪೂರ್​ ಬಂಡವಾಳ ಹೂಡಿದ್ದಾರೆ. ಹಾಗಾಗಿ ಈ ಕಾಂಬಿನೇಷನ್​ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ನಾಯಕಿಯಾಗಿ ಹುಮಾ ಖುರೇಶಿ ನಟಿಸಿದ್ದಾರೆ.

ಇದನ್ನೂ ಓದಿ: Valimai: ಬೈಕ್​ ಸ್ಟಂಟ್​ ಮಾಡುತ್ತ ಫ್ಯಾನ್ಸ್​ ಎದೆಬಡಿತ ಹೆಚ್ಚಿಸಿದ ಅಜಿತ್​; ಹೇಗಿದೆ ಗೊತ್ತಾ ‘ವಲಿಮೈ’ ಝಲಕ್​​?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು