AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ!

ಅಜಿತ್​ ಕುಮಾರ್​ ಅವರನ್ನು ಇನ್ಮುಂದೆ ಈ ರೀತಿ ಕರೆಯುವಂತಿಲ್ಲ; ನಟನ ಕಟ್ಟಾಜ್ಞೆ
ಅಜಿತ್​ ಕುಮಾರ್​
TV9 Web
| Edited By: |

Updated on: Dec 01, 2021 | 9:00 PM

Share

ಸ್ಟಾರ್​ ನಟರನ್ನು ಅಭಿಮಾನಿಗಳು ಪ್ರೀತಿಯಿಂದ ಬೇರೆಬೇರೆ ಹೆಸರುಗಳಲ್ಲಿ ಕರೆಯುತ್ತಾರೆ. ಅವರಿಗೆ ಹಿಟ್​ ಕೊಟ್ಟ ಸಿನಿಮಾಗಳ ಹೆಸರಿನಿಂದಲೇ ನಟರನ್ನು ಕರೆಯುವುದುಂಟು. ಕೆಲವರನ್ನು ವಿಶೇಷ ಬಿರುದಿನಿಂದ ಕರೆಯಲಾಗುತ್ತದೆ. ‘ಕಿಚ್ಚ ಸುದೀಪ್​’, ‘ದುನಿಯಾ’ ವಿಜಯ್​, ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಕೆಲ ಸ್ಟಾರ್​ಗಳಿಗೆ ಇದು ಇಷ್ಟವಾಗುವುದಿಲ್ಲ. ಈ ವಿಚಾರವನ್ನು ಅವರು ನೇರವಾಗಿಯೇ ಹೇಳಿದ ಉದಾಹರಣೆಯೂ ಇದೆ. ಈಗ ಕಾಲಿವುಡ್​ ಸ್ಟಾರ್​ ನಟ ಅಜಿತ್​ ಕೂಡ ಹೀಗೊಂದು ಪ್ರಕಟಣೆ ಹೊರಡಿಸಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಅಜಿತ್​ ದೊಡ್ಡ ಹೆಸರು ಹೊಂದಿದ್ದಾರೆ. ಅವರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ತಾಲಾ’ ಅಜಿತ್​ ಎಂದು ಕರೆಯುತ್ತಾರೆ. ಆದರೆ, ಇನ್ನುಮುಂದೆ ಈ ರೀತಿ ಕರೆಯುವಂತಿಲ್ಲ! ಹೀಗೊಂದು ಪ್ರಕಟಣೆಯನ್ನು ಅವರೇ ಹೊರಡಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಹೀಗಾಗಿ, ಇನ್ನುಮುಂದೆ ಅವರ ಹೆಸರ ಹಿಂದೆ ಯಾವ ಬಿರುದನ್ನೂ ಸೇರಿಸುವಂತಿಲ್ಲ.

‘ಮಾಧ್ಯಮ, ಸಾರ್ವಜನಿಕರು ಹಾಗೂ ನನ್ನ ಅಭಿಮಾನಿಗಳಲ್ಲಿ ಒಂದು ವಿನಂತಿ. ನನ್ನನ್ನು ಅಜಿತ್​, ಅಜಿತ್​ ಕುಮಾರ್​ ಅಥವಾ ಎಕೆ ಎಂದು ಮಾತ್ರ ಕರೆಯಬೇಕು. ನನ್ನನ್ನು ತಾಲಾ ಎಂದು ಯಾರೂ ಕರೆಯಬಾರದು. ನನ್ನ ಹೆಸರ ಹಿಂದೆ ಈ ಶಬ್ದವನ್ನು ಬಳಸುವಂತಿಲ್ಲ. ಎಲ್ಲರಿಗೂ ಆರೋಗ್ಯ, ಸಂತೋಷ, ಯಶಸ್ಸು, ಮನಃಶಾಂತಿ ಸಿಗಲಿ’ ಎಂದು ಅಜಿತ್ ಬರೆದುಕೊಂಡಿದ್ದಾರೆ.  ಸಾಮಾನ್ಯವಾಗಿ ಈ ರೀತಿಯ ಮನವಿಗಳನ್ನು ಮಾಡಿಕೊಳ್ಳುವಾಗ ನಟರು ಅದಕ್ಕೆ ಕಾರಣವನ್ನು ತಿಳಿಸುತ್ತಾರೆ. ಆದರೆ, ಅಜಿತ್​ ಈ ರೀತಿಯ ಯಾವುದೇ ಕಾರಣವನ್ನು ವಿವರಿಸಿಲ್ಲ.

2019ರ ಆಗಸ್ಟ್​ನಲ್ಲಿ ಬಿಡುಗಡೆಯಾದ ‘ನೇರ್ಕೊಂಡ ಪಾರ್ವೈ’ ಬಳಿಕ ಅಜಿತ್​ ಅವರ ಬೇರೆ ಯಾವುದೇ ಸಿನಿಮಾ ತೆರೆಕಂಡಿಲ್ಲ. ಹಾಗಾಗಿ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅವರ ನಟನೆಯ ‘ವಲಿಮೈ’ ಚಿತ್ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ‘ನೇರ್ಕೊಂಡ ಪಾರ್ವೈ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದ ಎಚ್​. ವಿನೋದ್​ ಅವರೇ ‘ವಲಿಮೈ’ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ಬೋನಿ ಕಪೂರ್​ ಬಂಡವಾಳ ಹೂಡಿದ್ದಾರೆ. ಹಾಗಾಗಿ ಈ ಕಾಂಬಿನೇಷನ್​ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ನಾಯಕಿಯಾಗಿ ಹುಮಾ ಖುರೇಶಿ ನಟಿಸಿದ್ದಾರೆ.

ಇದನ್ನೂ ಓದಿ: Valimai: ಬೈಕ್​ ಸ್ಟಂಟ್​ ಮಾಡುತ್ತ ಫ್ಯಾನ್ಸ್​ ಎದೆಬಡಿತ ಹೆಚ್ಚಿಸಿದ ಅಜಿತ್​; ಹೇಗಿದೆ ಗೊತ್ತಾ ‘ವಲಿಮೈ’ ಝಲಕ್​​?

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!