AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ರೇಸ್ ಗೆದ್ದು ಬಂದ ಅಜಿತ್ ಕುಮಾರ್; ಪತ್ನಿಗೆ ಮುತ್ತು  

ಕಾಲಿವುಡ್ ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ದುಬೈ 24 ಗಂಟೆಗಳ ರೇಸ್‌ನಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ನಟನೆಯ ಜೊತೆಗೆ ರೇಸಿಂಗ್‌ನಲ್ಲೂ ಅವರ ಅಪಾರ ಆಸಕ್ತಿ ಹಾಗೂ ಪ್ರತಿಭೆ ಇದನ್ನು ಸಾಬೀತುಪಡಿಸುತ್ತದೆ. ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ದುಬೈನಲ್ಲಿ ರೇಸ್ ಗೆದ್ದು ಬಂದ ಅಜಿತ್ ಕುಮಾರ್; ಪತ್ನಿಗೆ ಮುತ್ತು  
ಅಜಿತ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 13, 2025 | 10:16 AM

Share

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಹಲವು ಸಾಧನೆಗಳನ್ನು ಮಾಡುತ್ತಾರೆ. ಅವರು ನಟನೆಯ ಜೊತೆಗೆ ವಿವಿಧ ರೇಸ್​ನಲ್ಲಿ ಕೂಡ ಭಾಗವಹಿಸುತ್ತಾರೆ. ಅವರು ವಿಮಾನ ಕೂಡ ಓಡಿಸಬಲ್ಲರು. ಅವರಿಗೆ ಕಾರ್ ರೇಸ್ ಬಗ್ಗೆ ಸಾಕಷ್ಟು ಆಸಕ್ತಿ ಇದೆ. ಈಗ ಅವರು ‘ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ.

ಅಜಿತ್ ಕುಮಾರ್ ಅವರಿಗೆ ರೇಸ್ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇದೆ. ಅವರು ವಿವಿಧ ರೇಸ್​ನಲ್ಲಿ ಈ ಮೊದಲು ಭಾಗವಹಿಸಿದ್ದರು. ಈಗ ಅವರು ‘ದುಬೈ 24 ಅವರ್ಸ್ ರೇಸ್​’ ಸ್ಪರ್ಧೆ ವಿನ್ ಆಗಿ ಸಾಧನೆ ಮಾಡಿದ್ದಾರೆ. ಅವರು ಈ ರೇಸ್ ಗೆದ್ದು ಸಾಧನೆ ಮಾಡಿದ್ದಾರೆ. ರೇಸ್ ಗೆದ್ದ ಬಳಿಕ ಅವರು ಪತ್ನಿಗೆ ಮುತ್ತಿಟ್ಟಿದ್ದಾರೆ.

ನಟನೆಗೆ ಕಾಲಿಟ್ಟು ಜನಪ್ರಿಯತೆ ಪಡೆದ ಬಳಿಕ ಹಾಯಾಗಿ ಸಮಯ ಕಳೆಯಬಹುದು. ಆದರೆ, ಅಜಿತ್ ಅವರು ಆ ರೀತಿ ಅಲ್ಲ. ಶೂಟಿಂಗ್, ರೇಸಿಂಗ್ ಎಂದು ಹಲವು ರಂಗದಲ್ಲಿ ತೊಡಗಿಕೊಂಡಿದ್ದಾರೆ. ಅವರು ನಿಜವಾದ ಕ್ರೀಡಾಸ್ಫೂರ್ತಿಯನ್ನು ಮರೆಯುತ್ತಿದ್ದಾರೆ.

ಇತ್ತೀಚೆಗೆ ಅಜಿತ್ ಅವರು ‘ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಇದರ ಅವಧಿ ಪೂರ್ಣಗೊಳ್ಳುತ್ತಿದೆ ಎನ್ನುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದಿತ್ತು. ಆದರೆ, ಅಜಿತ್​ಗೆ ಗಾಯ ಆಗಿಲ್ಲ. ಈ ಬೆನ್ನಲ್ಲೇ ಅಜಿತ್ ಅವರು ಪುಟಿದೆದ್ದಿದ್ದಾರೆ. ರೇಸ್​ನಲ್ಲಿ ಅವರು ಗೆದ್ದಿರೋದಕ್ಕೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ವಿಶೇಷ ಎಂದರೆ ಅಜಿತ್ ಅವರು ದುಬೈನಲ್ಲಿ ತಮ್ಮದೇ ರೇಸಿಂಗ್ ತಂಡವನ್ನು ಹೊಂದಿದ್ದಾರೆ.

ಇದನ್ನೂ ಓದಿ: 180 ಕಿಮೀ ವೇಗದಲ್ಲಿ ಅಜಿತ್ ಕಾರು ಅಪಘಾತ; ವಿಡಿಯೋ ವೈರಲ್: ನಟನ ಪರಿಸ್ಥಿತಿ ಹೇಗಿದೆ?

ಅಜಿತ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರು ನಟನೆಯಲ್ಲಿ ಗಮನ ಸೆಳೆದಿದ್ದಾರೆ. ರೇಸ್ ದೃಶ್ಯಗಳನ್ನು ಮಾಡುವಾಗ ಅವರು ಡ್ಯೂಪ್ ಬಳಸುವುದಿಲ್ಲ. ಈ ಮೊದಲು ‘ತುನಿವು’ ಸಿನಿಮಾ ಶೂಟ್ ಮಾಡುವಾಗ ರಿಯಲ್ ಸ್ಟಂಟ್​ಗಳನ್ನು ಮಾಡಿ ಗಮನ ಸೆಳೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Mon, 13 January 25

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!