AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ರೇಸ್ ಗೆದ್ದು ಬಂದ ಅಜಿತ್ ಕುಮಾರ್; ಪತ್ನಿಗೆ ಮುತ್ತು  

ಕಾಲಿವುಡ್ ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ದುಬೈ 24 ಗಂಟೆಗಳ ರೇಸ್‌ನಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ನಟನೆಯ ಜೊತೆಗೆ ರೇಸಿಂಗ್‌ನಲ್ಲೂ ಅವರ ಅಪಾರ ಆಸಕ್ತಿ ಹಾಗೂ ಪ್ರತಿಭೆ ಇದನ್ನು ಸಾಬೀತುಪಡಿಸುತ್ತದೆ. ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ದುಬೈನಲ್ಲಿ ರೇಸ್ ಗೆದ್ದು ಬಂದ ಅಜಿತ್ ಕುಮಾರ್; ಪತ್ನಿಗೆ ಮುತ್ತು  
ಅಜಿತ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Jan 13, 2025 | 10:16 AM

Share

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಹಲವು ಸಾಧನೆಗಳನ್ನು ಮಾಡುತ್ತಾರೆ. ಅವರು ನಟನೆಯ ಜೊತೆಗೆ ವಿವಿಧ ರೇಸ್​ನಲ್ಲಿ ಕೂಡ ಭಾಗವಹಿಸುತ್ತಾರೆ. ಅವರು ವಿಮಾನ ಕೂಡ ಓಡಿಸಬಲ್ಲರು. ಅವರಿಗೆ ಕಾರ್ ರೇಸ್ ಬಗ್ಗೆ ಸಾಕಷ್ಟು ಆಸಕ್ತಿ ಇದೆ. ಈಗ ಅವರು ‘ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ.

ಅಜಿತ್ ಕುಮಾರ್ ಅವರಿಗೆ ರೇಸ್ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇದೆ. ಅವರು ವಿವಿಧ ರೇಸ್​ನಲ್ಲಿ ಈ ಮೊದಲು ಭಾಗವಹಿಸಿದ್ದರು. ಈಗ ಅವರು ‘ದುಬೈ 24 ಅವರ್ಸ್ ರೇಸ್​’ ಸ್ಪರ್ಧೆ ವಿನ್ ಆಗಿ ಸಾಧನೆ ಮಾಡಿದ್ದಾರೆ. ಅವರು ಈ ರೇಸ್ ಗೆದ್ದು ಸಾಧನೆ ಮಾಡಿದ್ದಾರೆ. ರೇಸ್ ಗೆದ್ದ ಬಳಿಕ ಅವರು ಪತ್ನಿಗೆ ಮುತ್ತಿಟ್ಟಿದ್ದಾರೆ.

ನಟನೆಗೆ ಕಾಲಿಟ್ಟು ಜನಪ್ರಿಯತೆ ಪಡೆದ ಬಳಿಕ ಹಾಯಾಗಿ ಸಮಯ ಕಳೆಯಬಹುದು. ಆದರೆ, ಅಜಿತ್ ಅವರು ಆ ರೀತಿ ಅಲ್ಲ. ಶೂಟಿಂಗ್, ರೇಸಿಂಗ್ ಎಂದು ಹಲವು ರಂಗದಲ್ಲಿ ತೊಡಗಿಕೊಂಡಿದ್ದಾರೆ. ಅವರು ನಿಜವಾದ ಕ್ರೀಡಾಸ್ಫೂರ್ತಿಯನ್ನು ಮರೆಯುತ್ತಿದ್ದಾರೆ.

ಇತ್ತೀಚೆಗೆ ಅಜಿತ್ ಅವರು ‘ದುಬೈ 24 ಅವರ್ಸ್ ರೇಸ್​’ (24 ಹೆಚ್​ ದುಬೈ 2025) ಸ್ಪರ್ಧೆಯಲ್ಲಿ ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಪಾಲ್ಗೊಂಡಿದ್ದರು. ಇದರ ಅವಧಿ ಪೂರ್ಣಗೊಳ್ಳುತ್ತಿದೆ ಎನ್ನುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದಿತ್ತು. ಆದರೆ, ಅಜಿತ್​ಗೆ ಗಾಯ ಆಗಿಲ್ಲ. ಈ ಬೆನ್ನಲ್ಲೇ ಅಜಿತ್ ಅವರು ಪುಟಿದೆದ್ದಿದ್ದಾರೆ. ರೇಸ್​ನಲ್ಲಿ ಅವರು ಗೆದ್ದಿರೋದಕ್ಕೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ವಿಶೇಷ ಎಂದರೆ ಅಜಿತ್ ಅವರು ದುಬೈನಲ್ಲಿ ತಮ್ಮದೇ ರೇಸಿಂಗ್ ತಂಡವನ್ನು ಹೊಂದಿದ್ದಾರೆ.

ಇದನ್ನೂ ಓದಿ: 180 ಕಿಮೀ ವೇಗದಲ್ಲಿ ಅಜಿತ್ ಕಾರು ಅಪಘಾತ; ವಿಡಿಯೋ ವೈರಲ್: ನಟನ ಪರಿಸ್ಥಿತಿ ಹೇಗಿದೆ?

ಅಜಿತ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರು ನಟನೆಯಲ್ಲಿ ಗಮನ ಸೆಳೆದಿದ್ದಾರೆ. ರೇಸ್ ದೃಶ್ಯಗಳನ್ನು ಮಾಡುವಾಗ ಅವರು ಡ್ಯೂಪ್ ಬಳಸುವುದಿಲ್ಲ. ಈ ಮೊದಲು ‘ತುನಿವು’ ಸಿನಿಮಾ ಶೂಟ್ ಮಾಡುವಾಗ ರಿಯಲ್ ಸ್ಟಂಟ್​ಗಳನ್ನು ಮಾಡಿ ಗಮನ ಸೆಳೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Mon, 13 January 25

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ