AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನಕ್ಕೆ 50 ಕೋಟಿ ರೂ. ಸಮೀಪಿಸಿದ ‘ವಿದಾಮುಯರ್ಚಿ’ ಬಾಕ್ಸ್ ಆಫೀಸ್​ ಕಲೆಕ್ಷನ್

‘ವಿದಾಮುಯರ್ಚಿ’ ಸಿನಿಮಾ ಭಾರಿ ಕಲೆಕ್ಷನ್ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಆಗುತ್ತಿಲ್ಲ. 50 ಕೋಟಿ ಗಡಿ ತಲುಪಲು ಕೂಡ ಈ ಸಿನಿಮಾ ಪ್ರಯಾಸಪಡುತ್ತಿದೆ. ಅಜಿತ್ ಕುಮಾರ್ ಅವರ ಅಭಿಮಾನಿಗಳು ಕೂಡ ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

3 ದಿನಕ್ಕೆ 50 ಕೋಟಿ ರೂ. ಸಮೀಪಿಸಿದ ‘ವಿದಾಮುಯರ್ಚಿ’ ಬಾಕ್ಸ್ ಆಫೀಸ್​ ಕಲೆಕ್ಷನ್
Ajith Kumar
ಮದನ್​ ಕುಮಾರ್​
|

Updated on: Feb 09, 2025 | 10:35 AM

Share

ಅಜಿತ್ ಕುಮಾರ್ ಅವರ ‘ವಿದಾಮುಯರ್ಚಿ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಸಿನಿಮಾಗೆ ಸಾಧ್ಯವಾಗಿಲ್ಲ. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಹಾಗಾಗಿ ಎರಡನೇ ದಿನವೇ ಸಿನಿಮಾದ ಗಳಿಕೆ ಕುಸಿಯಿತು. ಮೂರು ದಿನ ಕಳೆದರೂ ‘ವಿದಾಮುಯರ್ಚಿ’ ಚಿತ್ರದ ಬಾಕ್ಸ್ ಆಫೀಸ್​ ಗಳಿಕೆ 50 ಕೋಟಿ ರೂಪಾಯಿ ದಾಟಿಲ್ಲ. ಈ ಬಗ್ಗೆ ಇಲ್ಲಿದೆ ಮಾಹಿತಿ..

‘ವಿದಾಮುಯರ್ಚಿ’ ಸಿನಿಮಾದಲ್ಲಿ ಅಜಿತ್ ಕುಮಾರ್ ಜೊತೆ ತ್ರಿಶಾ ಕೃಷ್ಣನ್, ರೆಜಿನಾ ಕ್ಯಾಸಂಡ್ರ, ಆರವ್, ಅರ್ಜುನ್ ಸರ್ಜಾ ಮುಂತಾದವರು ನಟಿಸಿದ್ದಾರೆ. ಇದು 1997ರಲ್ಲಿ ಬಿಡುಗಡೆ ಆದ ಅಮೆರಿಕದ ‘ಬ್ರೇಕ್​ಡೌನ್’ ಸಿನಿಮಾದಿಂದ ಸ್ಫೂರ್ತಿ ಪಡೆದು ಮಾಡಲಾದ ಸಿನಿಮಾ. ನಿರೀಕ್ಷೆ ಹೆಚ್ಚಿದ್ದರಿಂದ ಮೊದಲ ದಿನ ಅದ್ದೂರಿ ಓಪನಿಂಗ್ ಪಡೆದುಕೊಂಡಿತು. ಬಿಡುಗಡೆ ಆದ ದಿನ (ಫೆಬ್ರವರಿ 6) ‘ವಿದಾಮುಯರ್ಚಿ’ ಸಿನಿಮಾ 26 ಕೋಟಿ ರೂಪಾಯಿ ಗಳಿಕೆ ಮಾಡಿತು.

ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ‘ವಿದಾಮುಯರ್ಚಿ’ ಚಿತ್ರಕ್ಕೆ 2ನೇ ದಿನ ಕೇವಲ 10.25 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಮೂರನೇ ದಿನ ಅಂದಾಜು 10.52 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವೀಕೆಂಡ್​ ಇದ್ದರೂ ಕೂಡ ಈ ಸಿನಿಮಾದ ಗಳಿಕೆಯಲ್ಲಿ ಏರಿಕೆ ಆಗಿಲ್ಲ. ಮೂರು ದಿನಕ್ಕೆ ಒಟ್ಟು ಕಲೆಕ್ಷನ್ 46.77 ಕೋಟಿ ರೂಪಾಯಿ ಆಗಿದೆ. 50 ಕೋಟಿ ರೂಪಾಯಿ ಗಡಿ ಮುಟ್ಟಲು ಈ ಸಿನಿಮಾ ಕಷ್ಟಪಡುತ್ತಿದೆ.

ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿದ ಅಜಿತ್ ಕುಮಾರ್ ಫ್ಯಾನ್ಸ್; ಪೊಲೀಸರ ಜೊತೆ ಕಿರಿಕ್

ಮೊದಲ ದಿನ ‘ವಿದಾಮುಯರ್ಚಿ’ ಸಿನಿಮಾವನ್ನು ನೋಡಲು ಅಜಿತ್ ಫ್ಯಾನ್ಸ್ ಮುಗಿ ಬಿದ್ದಿದ್ದರು. ಭಾರಿ ಉತ್ಸಾಹದಲ್ಲಿ ಚಿತ್ರಮಂದಿರದ ಒಳಗೆ ಸಂಭ್ರಮಿಸಿದರು. ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿ ಖುಷಿಪಡಲಾಗಿತ್ತು. ಅಗ್ನಿ ಅವಘಡ ಸಂಭವಿಸುವ ಸಾಧ್ಯತೆ ಇದ್ದರೂ ಕೂಡ ಅಭಿಮಾನಿಗಳು ಮಿತಿ ಮೀರಿ ನಡೆದುಕೊಂಡಿದ್ದರು. ಪೊಲೀಸರ ಜೊತೆಗೆ ವಾಗ್ವಾದ ಕೂಡ ಮಾಡಲಾಗಿತ್ತು. ಎರಡನೇ ದಿನಕ್ಕೆ ಫ್ಯಾನ್ಸ್ ಉತ್ಸಾಹ ಕುಸಿಯುತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು