AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನಕ್ಕೆ 50 ಕೋಟಿ ರೂ. ಸಮೀಪಿಸಿದ ‘ವಿದಾಮುಯರ್ಚಿ’ ಬಾಕ್ಸ್ ಆಫೀಸ್​ ಕಲೆಕ್ಷನ್

‘ವಿದಾಮುಯರ್ಚಿ’ ಸಿನಿಮಾ ಭಾರಿ ಕಲೆಕ್ಷನ್ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಆಗುತ್ತಿಲ್ಲ. 50 ಕೋಟಿ ಗಡಿ ತಲುಪಲು ಕೂಡ ಈ ಸಿನಿಮಾ ಪ್ರಯಾಸಪಡುತ್ತಿದೆ. ಅಜಿತ್ ಕುಮಾರ್ ಅವರ ಅಭಿಮಾನಿಗಳು ಕೂಡ ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

3 ದಿನಕ್ಕೆ 50 ಕೋಟಿ ರೂ. ಸಮೀಪಿಸಿದ ‘ವಿದಾಮುಯರ್ಚಿ’ ಬಾಕ್ಸ್ ಆಫೀಸ್​ ಕಲೆಕ್ಷನ್
Ajith Kumar
ಮದನ್​ ಕುಮಾರ್​
|

Updated on: Feb 09, 2025 | 10:35 AM

Share

ಅಜಿತ್ ಕುಮಾರ್ ಅವರ ‘ವಿದಾಮುಯರ್ಚಿ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಸಿನಿಮಾಗೆ ಸಾಧ್ಯವಾಗಿಲ್ಲ. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಹಾಗಾಗಿ ಎರಡನೇ ದಿನವೇ ಸಿನಿಮಾದ ಗಳಿಕೆ ಕುಸಿಯಿತು. ಮೂರು ದಿನ ಕಳೆದರೂ ‘ವಿದಾಮುಯರ್ಚಿ’ ಚಿತ್ರದ ಬಾಕ್ಸ್ ಆಫೀಸ್​ ಗಳಿಕೆ 50 ಕೋಟಿ ರೂಪಾಯಿ ದಾಟಿಲ್ಲ. ಈ ಬಗ್ಗೆ ಇಲ್ಲಿದೆ ಮಾಹಿತಿ..

‘ವಿದಾಮುಯರ್ಚಿ’ ಸಿನಿಮಾದಲ್ಲಿ ಅಜಿತ್ ಕುಮಾರ್ ಜೊತೆ ತ್ರಿಶಾ ಕೃಷ್ಣನ್, ರೆಜಿನಾ ಕ್ಯಾಸಂಡ್ರ, ಆರವ್, ಅರ್ಜುನ್ ಸರ್ಜಾ ಮುಂತಾದವರು ನಟಿಸಿದ್ದಾರೆ. ಇದು 1997ರಲ್ಲಿ ಬಿಡುಗಡೆ ಆದ ಅಮೆರಿಕದ ‘ಬ್ರೇಕ್​ಡೌನ್’ ಸಿನಿಮಾದಿಂದ ಸ್ಫೂರ್ತಿ ಪಡೆದು ಮಾಡಲಾದ ಸಿನಿಮಾ. ನಿರೀಕ್ಷೆ ಹೆಚ್ಚಿದ್ದರಿಂದ ಮೊದಲ ದಿನ ಅದ್ದೂರಿ ಓಪನಿಂಗ್ ಪಡೆದುಕೊಂಡಿತು. ಬಿಡುಗಡೆ ಆದ ದಿನ (ಫೆಬ್ರವರಿ 6) ‘ವಿದಾಮುಯರ್ಚಿ’ ಸಿನಿಮಾ 26 ಕೋಟಿ ರೂಪಾಯಿ ಗಳಿಕೆ ಮಾಡಿತು.

ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ‘ವಿದಾಮುಯರ್ಚಿ’ ಚಿತ್ರಕ್ಕೆ 2ನೇ ದಿನ ಕೇವಲ 10.25 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಮೂರನೇ ದಿನ ಅಂದಾಜು 10.52 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವೀಕೆಂಡ್​ ಇದ್ದರೂ ಕೂಡ ಈ ಸಿನಿಮಾದ ಗಳಿಕೆಯಲ್ಲಿ ಏರಿಕೆ ಆಗಿಲ್ಲ. ಮೂರು ದಿನಕ್ಕೆ ಒಟ್ಟು ಕಲೆಕ್ಷನ್ 46.77 ಕೋಟಿ ರೂಪಾಯಿ ಆಗಿದೆ. 50 ಕೋಟಿ ರೂಪಾಯಿ ಗಡಿ ಮುಟ್ಟಲು ಈ ಸಿನಿಮಾ ಕಷ್ಟಪಡುತ್ತಿದೆ.

ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿದ ಅಜಿತ್ ಕುಮಾರ್ ಫ್ಯಾನ್ಸ್; ಪೊಲೀಸರ ಜೊತೆ ಕಿರಿಕ್

ಮೊದಲ ದಿನ ‘ವಿದಾಮುಯರ್ಚಿ’ ಸಿನಿಮಾವನ್ನು ನೋಡಲು ಅಜಿತ್ ಫ್ಯಾನ್ಸ್ ಮುಗಿ ಬಿದ್ದಿದ್ದರು. ಭಾರಿ ಉತ್ಸಾಹದಲ್ಲಿ ಚಿತ್ರಮಂದಿರದ ಒಳಗೆ ಸಂಭ್ರಮಿಸಿದರು. ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿ ಖುಷಿಪಡಲಾಗಿತ್ತು. ಅಗ್ನಿ ಅವಘಡ ಸಂಭವಿಸುವ ಸಾಧ್ಯತೆ ಇದ್ದರೂ ಕೂಡ ಅಭಿಮಾನಿಗಳು ಮಿತಿ ಮೀರಿ ನಡೆದುಕೊಂಡಿದ್ದರು. ಪೊಲೀಸರ ಜೊತೆಗೆ ವಾಗ್ವಾದ ಕೂಡ ಮಾಡಲಾಗಿತ್ತು. ಎರಡನೇ ದಿನಕ್ಕೆ ಫ್ಯಾನ್ಸ್ ಉತ್ಸಾಹ ಕುಸಿಯುತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ