AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿದಾಮುಯಾರ್ಚಿ’ ಟ್ರೇಲರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಗಮನ ಸೆಳೆದ ಅಜಿತ್

ಅಜಿತ್ ಕುಮಾರ್ ನಟನೆಯ ‘ವಿದಾಮುಯರ್ಚಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಭರ್ಜರಿ ಆ್ಯಕ್ಷನ್ ದೃಶ್ಯಗಳು ಮತ್ತು ಅಜಿತ್ ಅವರ ಎರಡು ವಿಭಿನ್ನ ಲುಕ್‌ಗಳು ಟ್ರೇಲರ್‌ನ ಹೈಲೈಟ್ ಆಗಿದೆ. ಫೆಬ್ರವರಿ 6 ರಂದು ಬಿಡುಗಡೆಯಾಗಲಿರುವ ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

‘ವಿದಾಮುಯಾರ್ಚಿ’ ಟ್ರೇಲರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಗಮನ ಸೆಳೆದ ಅಜಿತ್
ಅಜಿತ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jan 17, 2025 | 9:12 AM

Share

ನಟ ಅಜಿತ್ ಅವರ ನಟನೆಯ ‘ವಿದಾಮುಯರ್ಚಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟ್ರೇಲರ್ ಈಗ ರಿಲೀಸ್ ಆಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಈ ಟ್ರೇಲರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಈ ಸಿನಿಮಾ ಫೆಬ್ರವರಿ 6ರಂದು ರಿಲೀಸ್ ಆಗಲಿದೆ ಎಂದು ಟ್ರೇಲರ್​ನಲ್ಲಿ ಮಾಹಿತಿ ನೀಡಲಾಗಿದೆ.

ಅಜಿತ್ ಕುಮಾರ್ ಅವರು ‘ವಿದಾಮುಯರ್ಚಿ’ ಸಿನಿಮಾದಲ್ಲಿ ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಯಂಗ್​ ಲುಕ್​ನಲ್ಲಿ ಕಾಣಿಸುವ ಅವರು ನಂತರ ಗಡ್ಡ ಮೀಸೆ ಬಿಟ್ಟು ಬೇರೆಯದೇ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಅವರ ಮ್ಯಾನರಿಸಂ ಇಷ್ಟ ಆಗಿದೆ. ಕಥಾ ನಾಯಕ ಅಪಘಾತದಲ್ಲಿ ಎಲ್ಲವನ್ನೂ ಮರೆಯುತ್ತಾನೆ. ಆ ಬಳಿಕ ಏನಾಗುತ್ತದೆ ಎಂಬುದು ಚಿತ್ರದ ಕಥೆ ಏಂದು ಟ್ರೇಲರ್ ನೋಡಿದವರು ಅಭಿಪ್ರಾಯಪಟ್ಟಿದ್ದಾರೆ.

ಅರ್ಜುನ್ ಸರ್ಜಾ ಕೂಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಅವರದ್ದು ವಿಲನ್ ಪಾತ್ರವೋ ಅಥವಾ ಒಳ್ಳೆಯ ವ್ಯಕ್ತಿಯ ಪಾತ್ರವೋ ಎಂದು ಗೊಂದಲ ಮೂಡಿಸುವ ರೀತಿಯಲ್ಲಿ ಟ್ರೇಲರ್ ಮೂಡಿ ಬಂದಿದೆ. ಈ ಚಿತ್ರಕ್ಕೆ ಸಿನಿಮಾದಲ್ಲೇ ಉತ್ತರ ಸಿಗಬೇಕಿದೆ.

‘ವಿದಾಮುಯರ್ಚಿ’ ಚಿತ್ರವನ್ನು ಬೇರೆ ಬೇರೆ ದೇಶಗಳಲ್ಲಿ ಶೂಟ್ ಮಾಡಲಾಗಿದೆ. ಅವರ ಸಿನಿಮಾಗಳಲ್ಲಿ ಆ್ಯಕ್ಷನ್ ದೃಶ್ಯಗಳು ಭರ್ಜರಿ ಇರುತ್ತವೆ. ಅದು ‘ವಿದಾಮುಯರ್ಚಿ’ ಚಿತ್ರದಲ್ಲೂ ಮುಂದುವರಿದಿದೆ. ಈ ಟ್ರೇಲರ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಿನಿಮಾ ಅಜಿತ್​ಗೆ ದೊಡ್ಡ ಯಶಸ್ಸು ತಂದುಕೊಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರಕ್ಕೆ ತ್ರಿಷಾ ನಾಯಕಿ.

ಇದನ್ನೂ ಓದಿ: ನಟನಾಗುವುದಕ್ಕೂ ಮೊದಲು ಗ್ಯಾರೆಜ್​ನಲ್ಲಿ ಕೆಲಸ ಮಾಡಿದ್ದ ಅಜಿತ್

‘ವಿದಾಮುಯರ್ಚಿ’ ಚಿತ್ರವನ್ನು ಮಕಿಳ್ ತಿರುಮೇನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ತಾಡಮ್’ ರೀತಿಯ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಅವರು ನಟನಾಗಿ, ಚಿತ್ರಕಥೆ ಬರಹಗಾರನಾಗಿಯೂ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 am, Fri, 17 January 25

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ