AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿದಾಮುಯಾರ್ಚಿ’ ಟ್ರೇಲರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಗಮನ ಸೆಳೆದ ಅಜಿತ್

ಅಜಿತ್ ಕುಮಾರ್ ನಟನೆಯ ‘ವಿದಾಮುಯರ್ಚಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಭರ್ಜರಿ ಆ್ಯಕ್ಷನ್ ದೃಶ್ಯಗಳು ಮತ್ತು ಅಜಿತ್ ಅವರ ಎರಡು ವಿಭಿನ್ನ ಲುಕ್‌ಗಳು ಟ್ರೇಲರ್‌ನ ಹೈಲೈಟ್ ಆಗಿದೆ. ಫೆಬ್ರವರಿ 6 ರಂದು ಬಿಡುಗಡೆಯಾಗಲಿರುವ ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

‘ವಿದಾಮುಯಾರ್ಚಿ’ ಟ್ರೇಲರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಗಮನ ಸೆಳೆದ ಅಜಿತ್
ಅಜಿತ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jan 17, 2025 | 9:12 AM

Share

ನಟ ಅಜಿತ್ ಅವರ ನಟನೆಯ ‘ವಿದಾಮುಯರ್ಚಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟ್ರೇಲರ್ ಈಗ ರಿಲೀಸ್ ಆಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಈ ಟ್ರೇಲರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಈ ಸಿನಿಮಾ ಫೆಬ್ರವರಿ 6ರಂದು ರಿಲೀಸ್ ಆಗಲಿದೆ ಎಂದು ಟ್ರೇಲರ್​ನಲ್ಲಿ ಮಾಹಿತಿ ನೀಡಲಾಗಿದೆ.

ಅಜಿತ್ ಕುಮಾರ್ ಅವರು ‘ವಿದಾಮುಯರ್ಚಿ’ ಸಿನಿಮಾದಲ್ಲಿ ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಯಂಗ್​ ಲುಕ್​ನಲ್ಲಿ ಕಾಣಿಸುವ ಅವರು ನಂತರ ಗಡ್ಡ ಮೀಸೆ ಬಿಟ್ಟು ಬೇರೆಯದೇ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಅವರ ಮ್ಯಾನರಿಸಂ ಇಷ್ಟ ಆಗಿದೆ. ಕಥಾ ನಾಯಕ ಅಪಘಾತದಲ್ಲಿ ಎಲ್ಲವನ್ನೂ ಮರೆಯುತ್ತಾನೆ. ಆ ಬಳಿಕ ಏನಾಗುತ್ತದೆ ಎಂಬುದು ಚಿತ್ರದ ಕಥೆ ಏಂದು ಟ್ರೇಲರ್ ನೋಡಿದವರು ಅಭಿಪ್ರಾಯಪಟ್ಟಿದ್ದಾರೆ.

ಅರ್ಜುನ್ ಸರ್ಜಾ ಕೂಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಅವರದ್ದು ವಿಲನ್ ಪಾತ್ರವೋ ಅಥವಾ ಒಳ್ಳೆಯ ವ್ಯಕ್ತಿಯ ಪಾತ್ರವೋ ಎಂದು ಗೊಂದಲ ಮೂಡಿಸುವ ರೀತಿಯಲ್ಲಿ ಟ್ರೇಲರ್ ಮೂಡಿ ಬಂದಿದೆ. ಈ ಚಿತ್ರಕ್ಕೆ ಸಿನಿಮಾದಲ್ಲೇ ಉತ್ತರ ಸಿಗಬೇಕಿದೆ.

‘ವಿದಾಮುಯರ್ಚಿ’ ಚಿತ್ರವನ್ನು ಬೇರೆ ಬೇರೆ ದೇಶಗಳಲ್ಲಿ ಶೂಟ್ ಮಾಡಲಾಗಿದೆ. ಅವರ ಸಿನಿಮಾಗಳಲ್ಲಿ ಆ್ಯಕ್ಷನ್ ದೃಶ್ಯಗಳು ಭರ್ಜರಿ ಇರುತ್ತವೆ. ಅದು ‘ವಿದಾಮುಯರ್ಚಿ’ ಚಿತ್ರದಲ್ಲೂ ಮುಂದುವರಿದಿದೆ. ಈ ಟ್ರೇಲರ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಿನಿಮಾ ಅಜಿತ್​ಗೆ ದೊಡ್ಡ ಯಶಸ್ಸು ತಂದುಕೊಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರಕ್ಕೆ ತ್ರಿಷಾ ನಾಯಕಿ.

ಇದನ್ನೂ ಓದಿ: ನಟನಾಗುವುದಕ್ಕೂ ಮೊದಲು ಗ್ಯಾರೆಜ್​ನಲ್ಲಿ ಕೆಲಸ ಮಾಡಿದ್ದ ಅಜಿತ್

‘ವಿದಾಮುಯರ್ಚಿ’ ಚಿತ್ರವನ್ನು ಮಕಿಳ್ ತಿರುಮೇನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ತಾಡಮ್’ ರೀತಿಯ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಅವರು ನಟನಾಗಿ, ಚಿತ್ರಕಥೆ ಬರಹಗಾರನಾಗಿಯೂ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 am, Fri, 17 January 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ