ಆಸ್ಪತ್ರೆಯಲ್ಲಿ ಅಜಿತ್​ ಪತ್ನಿ ಶಾಲಿನಿ; ಫೋಟೋ ಗಮನಿಸಿ ಆತಂಕ ವ್ಯಕ್ತಪಡಿಸಿದ ಫ್ಯಾನ್ಸ್

ಅಜಿತ್​ ಕುಮಾರ್​ ಅವರು ವಿದೇಶದಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಆದರೆ ಪತ್ನಿ ಶಾಲಿನಿಗೆ ಅನಾರೋಗ್ಯ ಎಂದು ತಿಳಿದ ಕೂಡಲೇ ಅವರು ಚೆನ್ನೈಗೆ ವಾಪಸ್​ ಬಂದರು. ಈಗ ಶಾಲಿನಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗುತ್ತಿದೆ. ಶಾಲಿನಿ ಆರೋಗ್ಯದ ಬಗ್ಗೆ ಕುಟುಂಬದವರು ಇನ್ನಷ್ಟೇ ಅಪ್​ಡೇಟ್​ ನೀಡಬೇಕಿದೆ. ಅದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಅಜಿತ್​ ಪತ್ನಿ ಶಾಲಿನಿ; ಫೋಟೋ ಗಮನಿಸಿ ಆತಂಕ ವ್ಯಕ್ತಪಡಿಸಿದ ಫ್ಯಾನ್ಸ್
ಶಾಲಿನಿ ಅಜಿತ್​
Follow us
|

Updated on:Jul 03, 2024 | 6:58 PM

ಖ್ಯಾತ ನಟ ಅಜಿತ್​ ಕುಮಾರ್​ ಅವರ ಪತ್ನಿ ಶಾಲಿನಿ ಅವರು ಆಗಾಗ ಫ್ಯಾಮಿಲಿ ಫೋಟೋ ಹಂಚಿಕೊಳ್ಳುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಫೋಟೋಗಳನ್ನು ನೋಡಿದಾಗಲೆಲ್ಲ ಅಭಿಮಾನಿಗಳಿಗೆ ಖುಷಿ ಆಗುತ್ತಿದೆ. ಆದರೆ ಈಗ ಅವರೊಂದು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದು, ಅದನ್ನು ನೋಡಿದ ಅಭಿಮಾನಿಗಳಿಗೆ ಆತಂಕ ಆಗಿದೆ. ಅದಕ್ಕೆ ಕಾರಣ ಕೂಡ ಇದೆ. ಶಾಲಿನಿ ಅವರು ಈ ಬಾರಿ ಫೋಟೋ ಹಂಚಿಕೊಂಡಿರುವುದು ಆಸ್ಪತ್ರೆಯ ಬೆಡ್​ನಿಂದ! ಹಾಗಾಗಿ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ ಎಂಬುದು ಬಹಿರಂಗ ಆಗಿದೆ. ಆದ್ದರಿಂದ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ.

ಆಸ್ಪತ್ರೆಯ ಬೆಡ್​ ಮೇಲೆ ಕುಳಿತಿರುವ ಶಾಲಿನಿ ಅವರು ರೋಗಿಗಳಿಗೆ ನೀಡುವ ಬಟ್ಟೆ ಧರಿಸಿದ್ದಾರೆ. ಅಲ್ಲದೇ ಅವರ ಕೈಗೆ ಬ್ಯಾಂಡ್​ ಕಟ್ಟಲಾಗಿದೆ. ಯಾವುದೋ ಶಸ್ತ್ರ ಚಿಕಿತ್ಸೆಗೆ ಒಳಗಾಗುವುದಕ್ಕೂ ಮುನ್ನ ತೆಗೆದ ಫೋಟೋ ಇದು ಎಂದು ನೆಟ್ಟಿಗರು ಊಹಿಸಿದ್ದಾರೆ. ಹಾಗಾದರೆ, ಶಾಲಿನಿ ಅವರಿಗೆ ಅಂಥ ಸಮಸ್ಯೆ ಏನಾಗಿದೆ ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡಿದ್ದಾರೆ.

ಸ್ವತಃ ಶಾಲಿನಿ ಅವರೇ ಈ ಫೋಟೋವನ್ನು ಹಂಚಿಕೊಂಡಿರುವುದರಿಂದ ಅವರು ಸದ್ಯಕ್ಕೆ ಗುಣಮುಖರಾಗುತ್ತಿದ್ದಾರೆ ಎಂದು ಊಹಿಸಲಾಗಿದೆ. ಅನಾರೋಗ್ಯದ ಬಗ್ಗೆ ಕುಟುಂಬದವರು ಈವರೆಗೂ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಶೀಘ್ರದಲ್ಲೇ ಅವರು ಈ ಕುರಿತು ಹೇಳಿಕೆ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಅದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಶಾಲಿನಿ ಅವರ ಆಪರೇಷನ್​ ಸಲುವಾಗಿ ಅಜಿತ್​ ಅವರು ‘ವಿದಾಮುಯರ್ಚಿ’ ಸಿನಿಮಾದ ಶೂಟಿಂಗ್​ಗೆ ಬ್ರೇಕ್​ ಹಾಕಿ ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶೂಟಿಂಗ್​ ವೇಳೆ ನಟ ಅಜಿತ್​ ಕಾರು ಅಪಘಾತ; ಭಯಾನಕ ವಿಡಿಯೋ ವೈರಲ್​

ಶಾಲಿನಿ ಅವರಿಗೆ ಈಗ 44 ವರ್ಷ ವಯಸ್ಸು. 80ರ ದಶಕದಲ್ಲಿ ಅವರು ಬಾಲನಟಿಯಾಗಿ ಫೇಮಸ್​ ಆಗಿದ್ದರು. ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅವರು ನಟಿಸಿ ಜನಪ್ರಿಯತೆ ಗಳಿಸಿದ್ದರು. 1997ರ ನಂತರ ಕೆಲವು ಸಿನಿಮಾಗಳಲ್ಲಿ ಹೀರೋಯಿನ್​ ಆಗಿ ನಟಿಸಿದರು. ಅಜಿತ್​ ಜೊತೆ ವಿವಾಹವಾದ ಬಳಿಕ ಅವರು ನಟನೆಯಿಂದ ದೂರು ಉಳಿದುಕೊಂಡರು. ಶಾಲಿನಿ ತಂಗಿ ಶಾಮಿಲಿ (ಬೇಬಿ ಶಾಮಿಲಿ) ಕೂಡ ಬಾಲ ನಟಿಯಾಗಿ 90ರ ದಶಕದಲ್ಲಿ ತುಂಬ ಖ್ಯಾತಿ ಹೊಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 pm, Wed, 3 July 24

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು