Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಮತ್ತೆ ಅಪಘಾತಕ್ಕೆ ಒಳಗಾದ ಅಜಿತ್ ಕುಮಾರ್; ಹೇಗಿದೆ ಪರಿಸ್ಥಿತಿ?

ಪೋರ್ಚುಗಲ್‌ನಲ್ಲಿ ಮೋಟಾರ್‌ಸ್ಪೋರ್ಟ್ಸ್ ರೇಸಿಂಗ್ ತರಬೇತಿಯಲ್ಲಿ ತೊಡಗಿದ್ದ ನಟ ಅಜಿತ್ ಕುಮಾರ್ ಅವರಿಗೆ ಸಣ್ಣ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ‘ವಿದಾಮುಯರ್ಚಿ’ ಚಿತ್ರದ ಯಶಸ್ಸಿನ ನಂತರ, ಅವರು ತಮ್ಮ ರೇಸಿಂಗ್ ಹವ್ಯಾಸಕ್ಕೆ ಮರಳಿದ್ದರು. ಅವರ ತಂಡಕ್ಕೆ ಬೆಂಬಲ ನೀಡಿದವರಿಗೆ ಅಜಿತ್ ಕೃತಜ್ಞತೆ ಸಲ್ಲಿಸಿದ್ದಾರೆ. ಇದು ಅವರಿಗೆ ಎರಡನೇ ರೇಸಿಂಗ್ ಅಪಘಾತ.

ವಿದೇಶದಲ್ಲಿ ಮತ್ತೆ ಅಪಘಾತಕ್ಕೆ ಒಳಗಾದ ಅಜಿತ್ ಕುಮಾರ್; ಹೇಗಿದೆ ಪರಿಸ್ಥಿತಿ?
ಅಜಿತ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 10, 2025 | 11:03 AM

ನಟ ಅಜಿತ್ ಕುಮಾರ್ ಅವರು ಸಿನಿಮಾ ಹಾಗೂ ಪ್ಯಾಷನ್​ನ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ. ಮೋಟರ್​ಸ್ಪೋರ್ಟ್ಸ್ ರೇಸಿಂಗ್ ಎಂದರೆ ಎಲ್ಲರಿಗೂ ಇಷ್ಟ. ಅವರ ನಟನೆಯ ‘ವಿದಾಮುಯರ್ಚಿ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಹೀಗಿರುವಾಗಲೇ ಅಜಿತ್ ಅವರು ಪೋರ್ಚುಗಲ್​ಗೆ ತೆರಳಿದ್ದು ರೇಸಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲಿ ಮೋಟರ್​ಸ್ಪೋರ್ಟ್ಸ್ ರೇಸಿಂಗ್ ತರಬೇತಿಯಲ್ಲಿ ಬ್ಯುಸಿ ಇದ್ದಾರೆ. ಈ ವೇಳೆ ಅಲ್ಲಿ ಅವರಿಗೆ ಅಪಘಾತ ಆಗಿದೆ.

ಪೋರ್ಚುಗಲ್​ನ ಎಸ್ಟೊರಿಲ್​ನಲ್ಲಿ ಟ್ರ್ಯಾಕ್​​ ಒಂದರಲ್ಲಿ ಅಜಿತ್ ಕುಮಾರ್ ಟ್ರೇನಿಂಗ್ ಸೆಷನ್ ನಡೆಸುತ್ತಿದ್ದರು. ಈ ವೇಳೆ ಅಪಘಾತ ಆಗಿದ್ದು, ಕಾರು ಡ್ಯಾಮೇಜ್ ಆಗಿದೆ. ಆದರೆ, ಅಜಿತ್ ಕುಮಾರ್ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎನ್ನುವ ವಿಚಾರ ರಿವೀಲ್ ಆಗಿದೆ. ‘ಇದೊಂದು ಸಣ್ಣ ಅಪಘಾತ. ನನಗೆ ಯಾವುದೇ ತೊಂದರೆ ಆಗಿಲ್ಲ’ ಎಂದು ಅಜಿತ್ ಕುಮಾರ್ ಹೇಳಿರೋದಾಗಿ ವರದಿ ಆಗಿದೆ.

‘ನಾವು ಸಣ್ಣ ಅಪಘಾತಕ್ಕೆ ಒಳಗಾದೆವು. ಅದೃಷ್ಟವಶಾತ್ ಯಾರಿಗೂ ಏನೂ ಆಗಿಲ್ಲ. ಸಮಯ ನನ್ನ ಪರವಾಗಿತ್ತು. ಕಾರ್ ರೇಸ್​ನಲ್ಲಿ ಮತ್ತೊಮ್ಮೆ ಗೆದ್ದು ನಮ್ಮ ಹೆಮ್ಮೆಯನ್ನು ಸ್ಥಾಪಿಸುತ್ತೇವೆ. ಅಪಘಾತದ ಸಮಯದಲ್ಲಿ ನಮಗೆ ಬೆಂಬಲ ನೀಡಿದ ಸ್ನೇಹಿತರಿಗೆ ನಾವು ಧನ್ಯವಾದ ಹೇಳಲು ಬಯಸುತ್ತೇವೆ’ ಎಂದು ಅಜಿತ್ ಕುಮಾರ್ ಹೇಳಿಕೊಂಡಿದ್ದಾರೆ. ಅಜಿತ್ ಕುಮಾರ್ ಅವರು ತಮ್ಮದೇ ಆದ ಕಾರ್ ರೇಸ್ ತಂಡ ಹೊಂದಿದ್ದಾರೆ.

ಅಜಿತ್ ಕುಮಾರ್ ಅವರು ಈ ರೀತಿಯಲ್ಲಿ ಅಪಘಾತಕ್ಕೆ ಒಳಗಾಗುತ್ತಿರುವುದು ಇದು ಎರಡನೇ ಬಾರಿ. ‘ದುಬೈ 24H ರೇಸಿಂಗ್​’ ಈವೆಂಟ್​ನಲ್ಲಿ ಅವರು ಟ್ರೇನಿಂಗ್ ಮಾಡುವಾಗ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಕಾರು ವೇಗವಾಗಿ ಸಾಗುತ್ತಿತ್ತು. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ದುಬೈನಲ್ಲಿ ರೇಸ್ ಗೆದ್ದು ಬಂದ ಅಜಿತ್ ಕುಮಾರ್; ಪತ್ನಿಗೆ ಮುತ್ತು  

ಅಜಿತ್ ನಟನೆಯ ‘ವಿದಾಮುಯಾರ್ಚಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಬಿಗ್ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಕೇವಲ 62 ಕೋಟಿ ರೂಪಾಯಿ ಗಳಿಕೆ ಮಾಡಿದೆ. ನಾಲ್ಕು ದಿನಗಳಲ್ಲಿ ಚಿತ್ರ ಇಷ್ಟು ದೊಡ್ಡ ಮಟ್ಟದ ಕಲೆಕ್ಷನ್ ಮಾಡಿದೆ. ಆದರೆ, ಚಿತ್ರದ ಬಜೆಟ್ ಹೆಚ್ಚಿದೆ. ಅಜಿತ್ ಅವರು ಸದ್ಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರವನ್ನು ಅಧಿಕ್ ರವಿಚಂದ್ರನ್ ನಿರ್ದೇಶನ ಮಾಡುತ್ತಿದ್ದಾರೆ. ಏಪ್ರಿಲ್ 10ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್