AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಖಂಡ 2’ಗೆ ಸಿಕ್ಕಿತು ತೆಲಂಗಾಣ ಸರ್ಕಾರದ ಅನುಮತಿ ಆದರೆ…

Nandamuri Balakrishna: ‘ಅಖಂಡ 2’ ಸಿನಿಮಾದ ವಿಶೇಷ ಶೋಗೆ ತೆಲಂಗಾಣ ಸರ್ಕಾರ ಅನುಮತಿ ನೀಡಲಾಗಿದೆಯಾದರೂ ರಾತ್ರಿ ಶೋಗಳ ಬದಲಿಗೆ ಬೆಳಿಗಿನ ಶೋಗೆ ಅನುಮತಿ ನೀಡಲಾಗಿದ್ದು, ಟಿಕೆಟ್ ದರ ಜಿಎಸ್​​ಟಿ ಸೇರಿದಂತೆ 600 ರೂಪಾಯಿ ದಾಟಬಾರದೆಂದು ನಿಬಂಧನೆ ವಿಧಿಸಲಾಗಿದೆ. ಆದರೆ, ಬುಕ್​ ಮೈ ಶೋ ನಲ್ಲಿ ಡಿಸೆಂಬರ್ 04ರ ಸಂಜೆ 7 ಗಂಟೆಯಲ್ಲಿಯೂ ‘ಅಖಂಡ 2’ ಸಿನಿಮಾದ ಟಿಕೆಟ್ ಬುಕಿಂಗ್ ಓಪನ್ ಆಗಿಲ್ಲ. ಇದು ಸಿನಿಮಾದ ಕಲೆಕ್ಷನ್ ಮೇಲೆ ಭಾರಿ ಪರಿಣಾಮ ಬೀರಲಿದೆ.

‘ಅಖಂಡ 2’ಗೆ ಸಿಕ್ಕಿತು ತೆಲಂಗಾಣ ಸರ್ಕಾರದ ಅನುಮತಿ ಆದರೆ...
Akhanda 2
ಮಂಜುನಾಥ ಸಿ.
|

Updated on: Dec 04, 2025 | 6:57 PM

Share

ನಂದಮೂರಿ ಬಾಲಕೃಷ್ಣ (Nandamuri Balakrishna) ನಟನೆಯ ‘ಅಖಂಡ 2’ ಸಿನಿಮಾ ನಾಳೆ (ಡಿಸೆಂಬರ್ 05) ಬಿಡುಗಡೆ ಆಗುತ್ತಿದೆ. ಕರ್ನಾಟಕ, ಆಂಧ್ರಗಳಲ್ಲಿ ಇಂದೇ ಸಿನಿಮಾದ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗಿದ್ದು, ಆಂಧ್ರ ಪ್ರದೇಶದಲ್ಲಿ ಪ್ರೀಮಿಯರ್ ಶೋ ಟಿಕೆಟ್ ದರಗಳನ್ನು 600ಕ್ಕೆ ನಿಗದಿ ಪಡಿಸಲಾಗಿದೆ. ಆದರೆ ಕರ್ನಾಟಕದಲ್ಲಿ 1950 ಗರಿಷ್ಠ ದರದಿಂದ ಆರಂಭಿಸಿ, 1000, 900, 700, 600 ಹೀಗೆ ಮನಸೋ ಇಚ್ಛೆ ದರಗಳನ್ನು ನಿಗದಿ ಪಡಿಸಲಾಗಿದೆ. ಆದರೆ ತೆಲಂಗಾಣ ಸರ್ಕಾರ ಡಿಸೆಂಬರ್ 4ರ ಮಧ್ಯಾಹ್ನದ ವರೆಗೂ ‘ಅಖಂಡ 2’ ಸಿನಿಮಾದ ಟಿಕೆಟ್ ದರಗಳ ಕುರಿತು ಅಧಿಕೃತ ಆದೇಶ ಹೊರಡಿಸಿರಲಿಲ್ಲ. ಆದರೆ ಕೊನೆಗೂ ಸಂಜೆ ವೇಳೆಗೆ ಅಧಿಕೃತ ಆದೇಶ ಹೊರಬಿದ್ದಿದ್ದು, ಟಿಕೆಟ್ ದರ ಹೆಚ್ಚಳಕ್ಕೆ ಹಾಗೂ ವಿಶೇಷ ಶೋಗೆ ಅನುಮತಿ ನೀಡಲಾಗಿದೆ. ಆದರೆ ಒಂದು ಷರತ್ತು ಸಹ ವಿಧಿಸಲಾಗಿದೆ.

‘ಪುಷ್ಪ 2’ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಅವಘಡದ ಬಳಿಕ ಸಿನಿಮಾಗಳ ಪ್ರೀಮಿಯರ್ ಶೋಗಳ ಬಗ್ಗೆ ಕೆಲ ಕಠಿಣ ನಿಯಮಗಳನ್ನು ತೆಲಂಗಾಣ ಸರ್ಕಾರ ವಿಧಿಸಿದೆ. ಅದರಂತೆ ಇದೀಗ ‘ಅಖಂಡ 2’ ಸಿನಿಮಾಕ್ಕೆ ವಿಶೇಷ ಶೋಗೆ ಅನುಮತಿ ನೀಡಲಾಗಿದೆಯಾದರೂ ರಾತ್ರಿ ಶೋಗಳ ಬದಲಿಗೆ ಬೆಳಿಗಿನ ಶೋಗೆ ಅನುಮತಿ ನೀಡಲಾಗಿದ್ದು, ಟಿಕೆಟ್ ದರ ಜಿಎಸ್​​ಟಿ ಸೇರಿದಂತೆ 600 ರೂಪಾಯಿ ದಾಟಬಾರದೆಂದು ನಿಬಂಧನೆ ವಿಧಿಸಲಾಗಿದೆ. ಆದರೆ, ಬುಕ್​ ಮೈ ಶೋ ನಲ್ಲಿ ಡಿಸೆಂಬರ್ 04ರ ಸಂಜೆ 7 ಗಂಟೆಯಲ್ಲಿಯೂ ‘ಅಖಂಡ 2’ ಸಿನಿಮಾದ ಟಿಕೆಟ್ ಬುಕಿಂಗ್ ಓಪನ್ ಆಗಿಲ್ಲ. ಇದು ಸಿನಿಮಾದ ಕಲೆಕ್ಷನ್ ಮೇಲೆ ಭಾರಿ ಪರಿಣಾಮ ಬೀರಲಿದೆ.

ಇದನ್ನೂ ಓದಿ:‘ಅಖಂಡ 2’ ಟಿಕೆಟ್ ದರ ಹೆಚ್ಚಳ: ಕರ್ನಾಟಕದಲ್ಲೆಷ್ಟು? ಆಂಧ್ರದಲ್ಲೆಷ್ಟು?

ಸ್ಪೆಷಲ್ ಶೋಗೆ 600 ರೂಪಾಯಿ ಟಿಕೆಟ್ ದರ ನಿಗದಿ ಮಾಡಿದ್ದರೂ ಸಹ, ಡಿಸೆಂಬರ್ 5ರಿಂದ ಮುಂದಿನ ಮೂರು ದಿನಗಳ ಕಾಲ ಮಲ್ಟಿಪ್ಲೆಕ್ಸ್​​ನಲ್ಲಿ 100 ರೂಪಾಯಿ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ 50 ರೂಪಾಯಿ ಟಿಕೆಟ್ ದರ ಹೆಚ್ಚಳ ಮಾಡಿಕೊಳ್ಳಲು ಸಹ ಅನುಮತಿಯನ್ನು ನೀಡಲಾಗಿದೆ. ಈ ಟಿಕೆಟ್ ದರ ಹೆಚ್ಚಳ ಸಿನಿಮಾ ಬಿಡುಗಡೆ ಆದ ಮೂರು ದಿನಗಳ ವರೆಗೆ ಮಾತ್ರವೇ ಇರಲಿದೆ.

ಇನ್ನು ಇದರ ಜೊತೆಗೆ ಮತ್ತೊಂದು ಪ್ರಮುಖ ನಿಬಂಧನೆಯನ್ನು ತೆಲಂಗಾಣ ಸರ್ಕಾರ ಇರಿಸಿದೆ. ಸಿನಿಮಾದ ಪ್ರೀಮಿಯರ್ ಶೋ ಅಥವಾ ವಿಶೇಷ ಶೋನಲ್ಲಿ ಗಳಿಕೆಯಾದ ಒಟ್ಟು ಕಲೆಕ್ಷನ್​​ನಲ್ಲಿ 20% ಹಣವನ್ನು ಚಿತ್ರಕಾರ್ಮಿಕರ ಕಲ್ಯಾಣ ನಿಧಿಗೆ ನೀಡಬೇಕು ಎಂದು ಸಹ ಸೂಚಿಸಲಾಗಿದೆ. ಕೆಲ ವಾರಗಳ ಸಿನಿಮಾ ಕಾರ್ಮಿಕರ ಸಂಘ ಆಯೋಜಿಸಿದ್ದ ಸಭೆಯಲ್ಲಿ ಕಾರ್ಮಿಕರ ಕಲ್ಯಾಣ ನಿಧಿಯ ಬಗ್ಗೆ ಸಿಎಂ ರೇವಂತ್ ರೆಡ್ಡಿ ಪ್ರಸ್ತಾಪಿಸಿದ್ದರು. ಅದರಂತೆ ಈಗ ‘ಅಖಂಡ 2’ ಸಿನಿಮಾದ ಕಲೆಕ್ಷನ್​​ನ (ವಿಶೇಷ ಶೋ ಕಲೆಕ್ಷನ್) 20% ಕಾರ್ಮಿಕರ ಕಲ್ಯಾಣಕ್ಕೆ ನೀಡುವಂತೆ ಆದೇಶದಲ್ಲಿಯೇ ಸೂಚಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ