AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Custody Movie: ಇಮೇಜ್​ ಬದಿಗಿಟ್ಟು ಕಾನ್ಸ್​ಟೇಬಲ್​ ಪಾತ್ರ ಮಾಡಿದ ನಾಗ ಚೈತನ್ಯ; ಆದರೆ ಇಲ್ಲಿದೆ ಒಂದು ಟ್ವಿಸ್ಟ್​​

Akkineni Naga Chaitanya: ಕಾನ್ಸ್​ಟೇಬಲ್​ ಪಾತ್ರ ಮಾಡುವಾಗ ಅಕ್ಕಿನೇನಿ ನಾಗ ಚೈತನ್ಯ ಅವರು ಇಮೇಜ್​ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕಥೆಗೆ ಅವರು ಹೆಚ್ಚು ಮಹತ್ವ ನೀಡಿದ್ದಾರೆ.

Custody Movie: ಇಮೇಜ್​ ಬದಿಗಿಟ್ಟು ಕಾನ್ಸ್​ಟೇಬಲ್​ ಪಾತ್ರ ಮಾಡಿದ ನಾಗ ಚೈತನ್ಯ; ಆದರೆ ಇಲ್ಲಿದೆ ಒಂದು ಟ್ವಿಸ್ಟ್​​
ನಾಗ ಚೈತನ್ಯ
ಮದನ್​ ಕುಮಾರ್​
|

Updated on: May 12, 2023 | 6:45 AM

Share

ಮುಖ್ಯಾಂಶಗಳು

  • ವೆಂಕಟ್​ ಪ್ರಭು ಅವರು ‘ಕಸ್ಟಡಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.
  • ಅರವಿಂದ್​ ಸ್ವಾಮಿ ಅವರು ವಿಲನ್​ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ.
  • ಇಳಯರಾಜ ಮತ್ತು ಯುವನ್​ ಶಂಕರ್​ ರಾಜ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಟಾಲಿವುಡ್​ನ ಸ್ಟಾ​ರ್​ ನಟ ಅಕ್ಕಿನೇನಿ ನಾಗ ಚೈತನ್ಯ (Akkineni Naga Chaitanya) ಅವರು ಒಂದು ಗೆಲುವಿಗಾಗಿ ಕಾದಿದ್ದಾರೆ. ಸಮಂತಾ ರುತ್​ ಪ್ರಭು ಜೊತೆಗಿನ ದಾಂಪತ್ಯ ಜೀವನಕ್ಕೆ ಗುಡ್​ ಬೈ ಹೇಳಿದ ಬಳಿಕ ಅವರು ವೃತ್ತಿಜೀವನದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಆದರೆ ಗೆಲ್ಲಬೇಕು ಎಂಬ ಅವರ ಪ್ರಯತ್ನವಂತೂ ನಿಂತಿಲ್ಲ. ನಾಗ ಚೈತನ್ಯ ನಟಿಸಿದ್ದ ‘ಥ್ಯಾಂಕ್​ ಯೂ’ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೋಲುಂಡಿತು. ಆಮಿರ್​ ಖಾನ್​ ಜೊತೆ ಅವರು ಸ್ಕ್ರೀನ್​ ಶೇರ್​ ಮಾಡಿಕೊಂಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಕೂಡ ನೆಲಕಚ್ಚಿತು. ಈಗ ಅವರು ‘ಕಸ್ಟಡಿ’ ಸಿನಿಮಾ (Custody Movie) ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಸಿನಿಮಾ ಇಂದು (ಮೇ 12) ಬಿಡುಗಡೆ ಆಗುತ್ತಿದೆ. ಟ್ರೇಲರ್​ ಮೂಲಕ ‘ಕಸ್ಟಡಿ’ ಸಿನಿಮಾ ಗಮನ ಸೆಳೆದಿದೆ. ಈ ಚಿತ್ರದಲ್ಲಿ ನಾಗ ಚೈತನ್ಯ ಅವರು ಕಾನ್ಸ್​ಟೇಬಲ್​ (Police Constable) ಪಾತ್ರ ಮಾಡಿದ್ದಾರೆ.

ಸಾಮಾನ್ಯವಾಗಿ ಸಿನಿಮಾ ಹೀರೋಗಳು ತಮ್ಮ ಪಾತ್ರದ ಇಮೇಜ್​ ಬಗ್ಗೆ ಸಾಕಷ್ಟು ಕಾಳಜಿ ವಹಿಸುತ್ತಾರೆ. ಅನೇಕ ಹೀರೋಗಳು ಈಗಾಗಲೇ ಪೊಲೀಸ್​ ಪಾತ್ರ ಮಾಡಿ ಮಿಂಚಿದ್ದಾರೆ. ಆದರೆ ಆ ಎಲ್ಲ ಪಾತ್ರಗಳು ಪೊಲೀಸ್​ ಇಲಾಖೆಯ ಉನ್ನತ ಅಧಿಕಾರಿಗಳ ಪಾತ್ರಗಳೇ ಆಗಿರುತ್ತವೆ. ಕಾನ್ಸ್​ಟೇಬಲ್​ ಪಾತ್ರದಲ್ಲಿ ಕಾಣಿಸಿಕೊಳ್ಳುಬೇಕು ಎಂದಾಗ ಕೆಲವು ಹೀರೋಗಳು ಒಪ್ಪಿಕೊಳ್ಳದೇ ಇರಬಹುದು. ಆದರೆ ನಾಗ ಚೈತನ್ಯ ಅವರು ಈ ಪಾತ್ರವನ್ನು ಇಷ್ಟಪಟ್ಟು ನಟಿಸಿದ್ದಾರೆ.

ಇದನ್ನೂ ಓದಿ: ‘ನಾನು ತಪ್ಪು ಮಾಡಿಲ್ಲ, ಭಯ ಪಡಲ್ಲ’; ನಾಗ ಚೈತನ್ಯ ಜೊತೆಗಿನ ಡೇಟಿಂಗ್ ವಿಚಾರಕ್ಕೆ ನಟಿಯ ಸ್ಪಷ್ಟನೆ

ಇದನ್ನೂ ಓದಿ
Image
ಆಮಿರ್​ ಖಾನ್​ ಮೇಲೆ ನಾಗ ಚೈತನ್ಯ ಫ್ಯಾನ್ಸ್​ ಬೇಸರ; ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​ನಿಂದ ನಿರಾಸೆ
Image
ವೃತ್ತಿಜೀವನದಲ್ಲೂ ಮಾಜಿ ಗಂಡನಿಗೆ ಎದುರಾಳಿಯಾಗಿ ನಿಂತ ಸಮಂತಾ; ನಾಗ ಚೈತನ್ಯ ಚಿತ್ರಕ್ಕೆ ‘ಯಶೋದ’ ಫೈಟ್​
Image
3 ವರ್ಷದ ಹಿಂದಿನ ಘಟನೆ ನೆನೆದು ಖುಷಿಪಟ್ಟ ಸಮಂತಾ; ಇದು ಮಾಜಿ ಪತಿ ನಾಗ ಚೈತನ್ಯ ಕುರಿತ ವಿಷಯ
Image
ವಿದೇಶದಲ್ಲಿ ಹಣ ಉಳಿಸಲು ಇಂಥ ಕೆಲಸ ಮಾಡಿದ್ರಾ​ ನಾಗ ಚೈತನ್ಯ-ರಾಶಿ ಖನ್ನಾ? ಇದು ಟಾಲಿವುಡ್​ ಗಾಸಿಪ್​

ಕಾನ್ಸ್​ಟೇಬಲ್​ ಪಾತ್ರ ಮಾಡುವಾಗ ಅಕ್ಕಿನೇನಿ ನಾಗ ಚೈತನ್ಯ ಅವರು ಇಮೇಜ್​ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕಥೆಗೆ ಅವರು ಹೆಚ್ಚು ಮಹತ್ವ ನೀಡಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟ ಆಗಲಿದೆ ಎಂಬ ಭರವಸೆ ಅವರಿಗೆ ಇದೆ. ಪೊಲೀಸ್​ ಇಲಾಖೆಯಲ್ಲಿ ಕಾನ್ಸ್​ಟೇಬಲ್​ಗೆ ಹೆಚ್ಚು ಅಧಿಕಾರ ಇರುವುದಿಲ್ಲ. ಅಂಥ ಪಾತ್ರವನ್ನು ‘ಕಸ್ಟಡಿ’ ಚಿತ್ರದಲ್ಲಿ ಹೀರೋ ರೀತಿ ತೋರಿಸುತ್ತಿರುವುದು ವಿಶೇಷ. ಚಿತ್ರದ ದ್ವಿತೀಯಾರ್ಧದಲ್ಲಿ ಈ ಪಾತ್ರ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆಯಂತೆ. ಆಗ ಪ್ರೇಕ್ಷಕರಿಗೆ ಟ್ವಿಸ್ಟ್​ ಸಿಗಲಿದೆ. ಈ ಎಲ್ಲ ಕಾರಣದಿಂದ ನಾಗ ಚೈತನ್ಯ ಅವರು ಕಾನ್ಸ್​ಟೇಬಲ್​ ಪಾತ್ರವನ್ನು ಒಪ್ಪಿಕೊಂಡು ನಟಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ನಾಗ ಚೈತನ್ಯ ಮಾತು, ಮೂರನೇ ವ್ಯಕ್ತಿಗಳ ಬಗ್ಗೆ ಆಕ್ರೋಶ

ವೆಂಕಟ್​ ಪ್ರಭು ಅವರು ‘ಕಸ್ಟಡಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅರವಿಂದ್​ ಸ್ವಾಮಿ ಅವರು ವಿಲನ್​ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ. ಇಳಯರಾಜ ಮತ್ತು ಯುವನ್​ ಶಂಕರ್​ ರಾಜ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕೃತಿ ಶೆಟ್ಟಿ ಅವರು ನಾಯಕಿಯಾಗಿ ನಟಿಸಿದ್ದಾರೆ. ಪ್ರಿಯಾಮಣಿ, ಶರತ್​ ಕುಮಾರ್​, ಸಂಪತ್​ ರಾಜ್​, ಪ್ರೇಮ್​ಜಿ, ವೆನ್ನೆಲ ಕಿಶೋರ್​, ಪ್ರೇಮಿ ವಿಶ್ವನಾಥ್​ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ