AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ.

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ
ಪತ್ನಿ ಜತೆ ನಾಗಾರ್ಜುನ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 22, 2022 | 5:56 PM

Share

ಕೊವಿಡ್​ನಿಂದ ದೇಶದ ಪರಿಸ್ಥಿತಿ ಹದಗೆಟ್ಟಿದೆ. ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದನ್ನು ನಿಯಂತ್ರಿಸೋಕೆ ಯಾವ ಸರ್ಕಾರಗಳಿಂದಲೂ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿಗೆ ತಂದಿವೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಇದರ ಜತೆಗೆ ಕೆಲ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ನಿಯಮಗಳು ಜಾರಿಯಲ್ಲಿವೆ. ಇದರ ಮಧ್ಯೆಯೂ ಅಕ್ಕಿನೇನಿ ನಾಗಾರ್ಜುನ (Akkineni Nagarjun) ಹಾಗೂ ನಾಗ ಚೈತನ್ಯ (Naga Chaitanya) ಅಭಿನಯದ ‘ಬಂಗಾರ‍್ರಾಜು’ ಚಿತ್ರ (Bangarraju Movie) ತೆರೆಗೆ ಬಂದಿದೆ. ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ಚಿತ್ರ ರಿಲೀಸ್​ ಆಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಮಧ್ಯೆ ಅವರು ಗೋವಾಗೆ ತೆರಳಿದ್ದಾರೆ. ಅದೂ ಐಸೋಲೇಟ್​​ ಆಗುವ ಉದ್ದೇಶದಿಂದ.

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ. ಈ ಮಧ್ಯೆ, ‘ಬಂಗಾರ‍್ರಾಜು’ ಚಿತ್ರತಂಡದ ಅನೇಕರಿಗೆ ಕೊವಿಡ್​ ಅಂಟಿದೆ. ಇದು ಅಕ್ಕಿನೇನಿ ನಾಗಾರ್ಜುನ ಆತಂಕಕ್ಕೆ ಕಾರಣವಾಗಿದೆ.

ಸಿನಿಮಾ ರಿಲೀಸ್​ ದಿನ, ಸಿನಿಮಾ ತೆರೆಕಂಡ ಬಳಿಕ ‘ಬಂಗಾರ‍್ರಾಜು’ ತಂಡದ ಅನೇಕರನ್ನು ಅಕ್ಕಿನೇನಿ ನಾಗಾರ್ಜುನ ಅವರು ಭೇಟಿ ಮಾಡಿದ್ದರು. ಅವರಲ್ಲಿ ಕೆಲವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಹೀಗಾಗಿ, ನಾಗಾರ್ಜುನ ಐಸೋಲೇಟ್​​ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅದೂ ಗೋವಾದಲ್ಲಿ ಅನ್ನೋದು ವಿಶೇಷ.

ಮನೆಯಲ್ಲಿ ಐಸೋಲೇಟ್​​ ಆದರೆ ನಾಲ್ಕು ಗೋಡೆಗಳ ಮಧ್ಯೆ ಇರಬೇಕು. ಇದು ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಬಹುದು. ಈ ಕಾರಣಕ್ಕೆ ಅವರು ಪತ್ನಿ ಸಮೇತ ಗೋವಾಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರ ತೀರದ ರೆಸಾರ್ಟ್​ ಒಂದರಲ್ಲಿ ಪತ್ನಿ ಜತೆ ಎರಡು ವಾರ ಕಳೆಯಲು ನಿರ್ಧರಿಸಿದ್ದಾರೆ. ಸಂಪೂರ್ಣ ರೆಸಾರ್ಟ್​ನಲ್ಲಿ ಪತಿ, ಪತ್ನಿ ಇಬ್ಬರೇ ಎರಡು ವಾರ ಇರಲಿದ್ದಾರೆ ಎನ್ನಲಾಗಿದೆ.

ಶುಕ್ರವಾರ (ಜನವರಿ 21) ಅಕ್ಕಿನೇನಿ ನಾಗಾರ್ಜುನ ಅವರು ತಿರುಪತಿಗೆ ಭೇಟಿ ನೀಡಿದ್ದರು. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಅವರು ಮರಳಿದ್ದರು. ಈಗ ತಮ್ಮ ಸ್ವಂತ ಫ್ಲೈಟ್​ನಲ್ಲಿ ಗೋವಾ ತೆರಳಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಅಕ್ಕಿನೇನಿ ನಾಗಾರ್ಜುನ ಚಿತ್ರದಿಂದ ಎರಡನೇ ಹೀರೋಯಿನ್​ ಔಟ್​; ಇದಕ್ಕಿದೆ ಮಹತ್ವದ ಕಾರಣ

ಅಕ್ಕಿನೇನಿ ಕುಟುಂಬಕ್ಕೆ ಸಿಹಿ ಸುದ್ದಿ; ಖುಷಿಪಟ್ಟ ಅಭಿಮಾನಿಗಳು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!