AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ.

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ
ಪತ್ನಿ ಜತೆ ನಾಗಾರ್ಜುನ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 22, 2022 | 5:56 PM

Share

ಕೊವಿಡ್​ನಿಂದ ದೇಶದ ಪರಿಸ್ಥಿತಿ ಹದಗೆಟ್ಟಿದೆ. ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದನ್ನು ನಿಯಂತ್ರಿಸೋಕೆ ಯಾವ ಸರ್ಕಾರಗಳಿಂದಲೂ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿಗೆ ತಂದಿವೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಇದರ ಜತೆಗೆ ಕೆಲ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ನಿಯಮಗಳು ಜಾರಿಯಲ್ಲಿವೆ. ಇದರ ಮಧ್ಯೆಯೂ ಅಕ್ಕಿನೇನಿ ನಾಗಾರ್ಜುನ (Akkineni Nagarjun) ಹಾಗೂ ನಾಗ ಚೈತನ್ಯ (Naga Chaitanya) ಅಭಿನಯದ ‘ಬಂಗಾರ‍್ರಾಜು’ ಚಿತ್ರ (Bangarraju Movie) ತೆರೆಗೆ ಬಂದಿದೆ. ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ಚಿತ್ರ ರಿಲೀಸ್​ ಆಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಮಧ್ಯೆ ಅವರು ಗೋವಾಗೆ ತೆರಳಿದ್ದಾರೆ. ಅದೂ ಐಸೋಲೇಟ್​​ ಆಗುವ ಉದ್ದೇಶದಿಂದ.

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ. ಈ ಮಧ್ಯೆ, ‘ಬಂಗಾರ‍್ರಾಜು’ ಚಿತ್ರತಂಡದ ಅನೇಕರಿಗೆ ಕೊವಿಡ್​ ಅಂಟಿದೆ. ಇದು ಅಕ್ಕಿನೇನಿ ನಾಗಾರ್ಜುನ ಆತಂಕಕ್ಕೆ ಕಾರಣವಾಗಿದೆ.

ಸಿನಿಮಾ ರಿಲೀಸ್​ ದಿನ, ಸಿನಿಮಾ ತೆರೆಕಂಡ ಬಳಿಕ ‘ಬಂಗಾರ‍್ರಾಜು’ ತಂಡದ ಅನೇಕರನ್ನು ಅಕ್ಕಿನೇನಿ ನಾಗಾರ್ಜುನ ಅವರು ಭೇಟಿ ಮಾಡಿದ್ದರು. ಅವರಲ್ಲಿ ಕೆಲವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಹೀಗಾಗಿ, ನಾಗಾರ್ಜುನ ಐಸೋಲೇಟ್​​ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅದೂ ಗೋವಾದಲ್ಲಿ ಅನ್ನೋದು ವಿಶೇಷ.

ಮನೆಯಲ್ಲಿ ಐಸೋಲೇಟ್​​ ಆದರೆ ನಾಲ್ಕು ಗೋಡೆಗಳ ಮಧ್ಯೆ ಇರಬೇಕು. ಇದು ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಬಹುದು. ಈ ಕಾರಣಕ್ಕೆ ಅವರು ಪತ್ನಿ ಸಮೇತ ಗೋವಾಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರ ತೀರದ ರೆಸಾರ್ಟ್​ ಒಂದರಲ್ಲಿ ಪತ್ನಿ ಜತೆ ಎರಡು ವಾರ ಕಳೆಯಲು ನಿರ್ಧರಿಸಿದ್ದಾರೆ. ಸಂಪೂರ್ಣ ರೆಸಾರ್ಟ್​ನಲ್ಲಿ ಪತಿ, ಪತ್ನಿ ಇಬ್ಬರೇ ಎರಡು ವಾರ ಇರಲಿದ್ದಾರೆ ಎನ್ನಲಾಗಿದೆ.

ಶುಕ್ರವಾರ (ಜನವರಿ 21) ಅಕ್ಕಿನೇನಿ ನಾಗಾರ್ಜುನ ಅವರು ತಿರುಪತಿಗೆ ಭೇಟಿ ನೀಡಿದ್ದರು. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಅವರು ಮರಳಿದ್ದರು. ಈಗ ತಮ್ಮ ಸ್ವಂತ ಫ್ಲೈಟ್​ನಲ್ಲಿ ಗೋವಾ ತೆರಳಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಅಕ್ಕಿನೇನಿ ನಾಗಾರ್ಜುನ ಚಿತ್ರದಿಂದ ಎರಡನೇ ಹೀರೋಯಿನ್​ ಔಟ್​; ಇದಕ್ಕಿದೆ ಮಹತ್ವದ ಕಾರಣ

ಅಕ್ಕಿನೇನಿ ಕುಟುಂಬಕ್ಕೆ ಸಿಹಿ ಸುದ್ದಿ; ಖುಷಿಪಟ್ಟ ಅಭಿಮಾನಿಗಳು

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​