AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ.

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ
ಪತ್ನಿ ಜತೆ ನಾಗಾರ್ಜುನ
TV9 Web
| Edited By: |

Updated on: Jan 22, 2022 | 5:56 PM

Share

ಕೊವಿಡ್​ನಿಂದ ದೇಶದ ಪರಿಸ್ಥಿತಿ ಹದಗೆಟ್ಟಿದೆ. ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದನ್ನು ನಿಯಂತ್ರಿಸೋಕೆ ಯಾವ ಸರ್ಕಾರಗಳಿಂದಲೂ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿಗೆ ತಂದಿವೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಇದರ ಜತೆಗೆ ಕೆಲ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ನಿಯಮಗಳು ಜಾರಿಯಲ್ಲಿವೆ. ಇದರ ಮಧ್ಯೆಯೂ ಅಕ್ಕಿನೇನಿ ನಾಗಾರ್ಜುನ (Akkineni Nagarjun) ಹಾಗೂ ನಾಗ ಚೈತನ್ಯ (Naga Chaitanya) ಅಭಿನಯದ ‘ಬಂಗಾರ‍್ರಾಜು’ ಚಿತ್ರ (Bangarraju Movie) ತೆರೆಗೆ ಬಂದಿದೆ. ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ಚಿತ್ರ ರಿಲೀಸ್​ ಆಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಮಧ್ಯೆ ಅವರು ಗೋವಾಗೆ ತೆರಳಿದ್ದಾರೆ. ಅದೂ ಐಸೋಲೇಟ್​​ ಆಗುವ ಉದ್ದೇಶದಿಂದ.

‘ಬಂಗಾರ‍್ರಾಜು’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ನಾಗ ಚೈತನ್ಯ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಹಾಗೂ ಕೃತಿ ಶೆಟ್ಟಿ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಅಕ್ಕಿನೇನಿ ನಾಗಾರ್ಜುನಗೆ ಖುಷಿ ನೀಡಿದೆ. ಈ ಮಧ್ಯೆ, ‘ಬಂಗಾರ‍್ರಾಜು’ ಚಿತ್ರತಂಡದ ಅನೇಕರಿಗೆ ಕೊವಿಡ್​ ಅಂಟಿದೆ. ಇದು ಅಕ್ಕಿನೇನಿ ನಾಗಾರ್ಜುನ ಆತಂಕಕ್ಕೆ ಕಾರಣವಾಗಿದೆ.

ಸಿನಿಮಾ ರಿಲೀಸ್​ ದಿನ, ಸಿನಿಮಾ ತೆರೆಕಂಡ ಬಳಿಕ ‘ಬಂಗಾರ‍್ರಾಜು’ ತಂಡದ ಅನೇಕರನ್ನು ಅಕ್ಕಿನೇನಿ ನಾಗಾರ್ಜುನ ಅವರು ಭೇಟಿ ಮಾಡಿದ್ದರು. ಅವರಲ್ಲಿ ಕೆಲವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಹೀಗಾಗಿ, ನಾಗಾರ್ಜುನ ಐಸೋಲೇಟ್​​ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅದೂ ಗೋವಾದಲ್ಲಿ ಅನ್ನೋದು ವಿಶೇಷ.

ಮನೆಯಲ್ಲಿ ಐಸೋಲೇಟ್​​ ಆದರೆ ನಾಲ್ಕು ಗೋಡೆಗಳ ಮಧ್ಯೆ ಇರಬೇಕು. ಇದು ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಬಹುದು. ಈ ಕಾರಣಕ್ಕೆ ಅವರು ಪತ್ನಿ ಸಮೇತ ಗೋವಾಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರ ತೀರದ ರೆಸಾರ್ಟ್​ ಒಂದರಲ್ಲಿ ಪತ್ನಿ ಜತೆ ಎರಡು ವಾರ ಕಳೆಯಲು ನಿರ್ಧರಿಸಿದ್ದಾರೆ. ಸಂಪೂರ್ಣ ರೆಸಾರ್ಟ್​ನಲ್ಲಿ ಪತಿ, ಪತ್ನಿ ಇಬ್ಬರೇ ಎರಡು ವಾರ ಇರಲಿದ್ದಾರೆ ಎನ್ನಲಾಗಿದೆ.

ಶುಕ್ರವಾರ (ಜನವರಿ 21) ಅಕ್ಕಿನೇನಿ ನಾಗಾರ್ಜುನ ಅವರು ತಿರುಪತಿಗೆ ಭೇಟಿ ನೀಡಿದ್ದರು. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಅವರು ಮರಳಿದ್ದರು. ಈಗ ತಮ್ಮ ಸ್ವಂತ ಫ್ಲೈಟ್​ನಲ್ಲಿ ಗೋವಾ ತೆರಳಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಅಕ್ಕಿನೇನಿ ನಾಗಾರ್ಜುನ ಚಿತ್ರದಿಂದ ಎರಡನೇ ಹೀರೋಯಿನ್​ ಔಟ್​; ಇದಕ್ಕಿದೆ ಮಹತ್ವದ ಕಾರಣ

ಅಕ್ಕಿನೇನಿ ಕುಟುಂಬಕ್ಕೆ ಸಿಹಿ ಸುದ್ದಿ; ಖುಷಿಪಟ್ಟ ಅಭಿಮಾನಿಗಳು

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ