AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akkineni Nagarjuna: ನಿಂತ ಜಾಗದಲ್ಲೇ ಸಾವಿರ ಎಕರೆ ಕಾಡನ್ನು ದತ್ತು ಪಡೆದ ಅಕ್ಕಿನೇನಿ ನಾಗಾರ್ಜುನ

ರಾಜ್ಯ ಸಭೆಯ ಸದಸ್ಯ ಸಂತೋಷ್​ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ.

Akkineni Nagarjuna: ನಿಂತ ಜಾಗದಲ್ಲೇ ಸಾವಿರ ಎಕರೆ ಕಾಡನ್ನು ದತ್ತು ಪಡೆದ ಅಕ್ಕಿನೇನಿ ನಾಗಾರ್ಜುನ
ನಾಗಾರ್ಜುನ
TV9 Web
| Edited By: |

Updated on:Dec 13, 2021 | 2:28 PM

Share

ಅಕ್ಕಿನೇನಿ ನಾಗಾರ್ಜುನ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ಮಗ ನಾಗ ಚೈತನ್ಯ ಹಾಗೂ ಸಮಂತಾ ಅಕ್ಕಿನೇನಿ ನಡುವೆ ವಿಚ್ಛೇದನ ಉಂಟಾದ ನಂತರದಲ್ಲಿ ನಾಗಾರ್ಜುನ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಮಾಧ್ಯಮಗಳು ಪ್ರಶ್ನಿಸುವ ಮೊದಲೇ ಅವರು ಬೇಸರ ಹೊರಹಾಕಿದ್ದರು. ಇದರ ಜತೆಗೆ ತೆಲುಗು ಬಿಗ್​ ಬಾಸ್​ ಅನ್ನು ಯಶಸ್ವಿಯಾಗಿ ಅವರು ನಡೆಸಿಕೊಡುತ್ತಿದ್ದಾರೆ. ಈ ಮಧ್ಯೆ ಅವರು ಹೊಸ ವಿಚಾರವೊಂದಕ್ಕೆ ಸುದ್ದಿಯಾಗಿದ್ದಾರೆ. ಅವರು ತೆಗೆದುಕೊಂಡ ನಿರ್ಧಾರದಿಂದ ಫ್ಯಾನ್ಸ್​ ಸಾಕಷ್ಟು ಖುಷಿಪಟ್ಟಿದ್ದಾರೆ.

ರಾಜ್ಯ ಸಭೆಯ ಸದಸ್ಯ ಸಂತೋಷ್​ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಇವರ ಪರಿಚಯ ಅನೇಕರಿಗೆ ಇದೆ. ಗ್ರೀನ್​ ಇಂಡಿಯಾ ಚಾಲೆಂಜ್​​ ಅಡಿಯಲ್ಲಿ 16 ಕೋಟಿ ಮರಗಳನ್ನು ಅವರು ಬೆಳೆಸಿದ್ದಾರೆ. ಈ ಒಂದು ಅದ್ಭುತ ಕೆಲಸಕ್ಕೆ ಸಾಕಷ್ಟು ಸೆಲೆಬ್ರಿಟಿಗಳನ್ನೂ ಅವರು ಸೇರ್ಪಡೆ ಮಾಡಿಕೊಂಡಿದ್ದಾರೆ. ಈಗ ಈ ಸಾಲಿಗೆ ಅಕ್ಕಿನೇನಿ ನಾಗಾರ್ಜುನ ಕೂಡ ಸೇರಿಕೊಂಡಿದ್ದಾರೆ.

ಸಂತೋಷ್​ ಅವರು ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ತೆಲುಗು ಬಿಗ್​ ಬಾಸ್​ ವೇದಿಕೆ ಏರಿದ್ದರು. ಈ ವೇಳೆ ಪ್ರಭಾಸ್​ ಅವರು 1643 ಎಕರೆ ಅರಣ್ಯ ದತ್ತು ಪಡೆದಿದ್ದಾರೆ ಎಂದು ಸಂತೋಷ್​ ಮಾಹಿತಿ ನೀಡಿದರು. ಈ ವೇಳೆ ನಾಗಾರ್ಜುನ ಅವರು ನಿಜಕ್ಕೂ ಸಂತಸಗೊಂಡರು. ಅಲ್ಲದೆ, ನಿಂತ ಜಾಗದಲ್ಲೇ 1,000 ಎಕರೆ ಕಾಡನ್ನು ದತ್ತು ಪಡೆಯುವುದಾಗಿ ಘೋಷಿಸಿದರು. ‘ಪರಿಸರವನ್ನು ಕಾಪಾಡುವ ಜವಾಬ್ದಾರಿ ನಮ್ಮದು. ಹೀಗಾಗಿ, ಕಾಡುಗಳನ್ನು ನಾನು ದತ್ತುಪಡೆಯುತ್ತಿದ್ದೇನೆ. ಆ ಕಾಡನ್ನು ಪೋಷಿಸುವ ಹೊಣೆಯನ್ನು ನಾನು ಈಗಲೇ ಹೊತ್ತುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಅವರು. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸಂತೋಷ್​ ಅವರು ನಿಜಕ್ಕೂ ಸಂತಸ ಪಟ್ಟಿದ್ದಾರೆ.

ನಾಗಾರ್ಜುನ ಅವರು ತೆಗೆದುಕೊಂಡ ಈ ನಿರ್ಧಾರದಿಂದ ಅನೇಕರಿಗೆ ಸ್ಫೂರ್ತಿ ಸಿಗಲಿದೆ. ಅವರ ಅಭಿಮಾನಿಗಳು ಕೂಡ ಕಾಡುಗಳನ್ನು ಪಡೆದುಕೊಳ್ಳಲು ಆಸಕ್ತಿ ತೋರಿಸುವ ಸಾಧ್ಯತೆ ಇದೆ. ಓರ್ವ ಅಭಿಮಾನಿ ಒಂದು ಎಕರೆ ಕಾಡನ್ನು ದತ್ತು ಪಡೆದರೂ ಅದರ ಒಟ್ಟಾರೆ ಸಂಖ್ಯೆ  .

ಇದನ್ನೂ ಓದಿ:ಪುನೀತ್ ಯಾವಾಗ ಸಿಕ್ಕರೂ ಒಳ್ಳೆಯ ಮಾತನ್ನಷ್ಟೇ ಆಡುತ್ತಿದ್ದರು; ಕಂಬನಿ ಮಿಡಿದ ನಾಗಾರ್ಜುನ 

ಸ್ವರ್ಗದಲ್ಲಿ ದೇವರಿಗೂ ಅವರು ಹಾಡು ಕೇಳಿಸ್ತಾರೆ ಎಂದ ಅಕ್ಕಿನೇನಿ ನಾಗಾರ್ಜುನ

Published On - 2:26 pm, Mon, 13 December 21

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!