AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akkineni Nagarjuna: ನಿಂತ ಜಾಗದಲ್ಲೇ ಸಾವಿರ ಎಕರೆ ಕಾಡನ್ನು ದತ್ತು ಪಡೆದ ಅಕ್ಕಿನೇನಿ ನಾಗಾರ್ಜುನ

ರಾಜ್ಯ ಸಭೆಯ ಸದಸ್ಯ ಸಂತೋಷ್​ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ.

Akkineni Nagarjuna: ನಿಂತ ಜಾಗದಲ್ಲೇ ಸಾವಿರ ಎಕರೆ ಕಾಡನ್ನು ದತ್ತು ಪಡೆದ ಅಕ್ಕಿನೇನಿ ನಾಗಾರ್ಜುನ
ನಾಗಾರ್ಜುನ
TV9 Web
| Edited By: |

Updated on:Dec 13, 2021 | 2:28 PM

Share

ಅಕ್ಕಿನೇನಿ ನಾಗಾರ್ಜುನ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ಮಗ ನಾಗ ಚೈತನ್ಯ ಹಾಗೂ ಸಮಂತಾ ಅಕ್ಕಿನೇನಿ ನಡುವೆ ವಿಚ್ಛೇದನ ಉಂಟಾದ ನಂತರದಲ್ಲಿ ನಾಗಾರ್ಜುನ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಮಾಧ್ಯಮಗಳು ಪ್ರಶ್ನಿಸುವ ಮೊದಲೇ ಅವರು ಬೇಸರ ಹೊರಹಾಕಿದ್ದರು. ಇದರ ಜತೆಗೆ ತೆಲುಗು ಬಿಗ್​ ಬಾಸ್​ ಅನ್ನು ಯಶಸ್ವಿಯಾಗಿ ಅವರು ನಡೆಸಿಕೊಡುತ್ತಿದ್ದಾರೆ. ಈ ಮಧ್ಯೆ ಅವರು ಹೊಸ ವಿಚಾರವೊಂದಕ್ಕೆ ಸುದ್ದಿಯಾಗಿದ್ದಾರೆ. ಅವರು ತೆಗೆದುಕೊಂಡ ನಿರ್ಧಾರದಿಂದ ಫ್ಯಾನ್ಸ್​ ಸಾಕಷ್ಟು ಖುಷಿಪಟ್ಟಿದ್ದಾರೆ.

ರಾಜ್ಯ ಸಭೆಯ ಸದಸ್ಯ ಸಂತೋಷ್​ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಇವರ ಪರಿಚಯ ಅನೇಕರಿಗೆ ಇದೆ. ಗ್ರೀನ್​ ಇಂಡಿಯಾ ಚಾಲೆಂಜ್​​ ಅಡಿಯಲ್ಲಿ 16 ಕೋಟಿ ಮರಗಳನ್ನು ಅವರು ಬೆಳೆಸಿದ್ದಾರೆ. ಈ ಒಂದು ಅದ್ಭುತ ಕೆಲಸಕ್ಕೆ ಸಾಕಷ್ಟು ಸೆಲೆಬ್ರಿಟಿಗಳನ್ನೂ ಅವರು ಸೇರ್ಪಡೆ ಮಾಡಿಕೊಂಡಿದ್ದಾರೆ. ಈಗ ಈ ಸಾಲಿಗೆ ಅಕ್ಕಿನೇನಿ ನಾಗಾರ್ಜುನ ಕೂಡ ಸೇರಿಕೊಂಡಿದ್ದಾರೆ.

ಸಂತೋಷ್​ ಅವರು ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ತೆಲುಗು ಬಿಗ್​ ಬಾಸ್​ ವೇದಿಕೆ ಏರಿದ್ದರು. ಈ ವೇಳೆ ಪ್ರಭಾಸ್​ ಅವರು 1643 ಎಕರೆ ಅರಣ್ಯ ದತ್ತು ಪಡೆದಿದ್ದಾರೆ ಎಂದು ಸಂತೋಷ್​ ಮಾಹಿತಿ ನೀಡಿದರು. ಈ ವೇಳೆ ನಾಗಾರ್ಜುನ ಅವರು ನಿಜಕ್ಕೂ ಸಂತಸಗೊಂಡರು. ಅಲ್ಲದೆ, ನಿಂತ ಜಾಗದಲ್ಲೇ 1,000 ಎಕರೆ ಕಾಡನ್ನು ದತ್ತು ಪಡೆಯುವುದಾಗಿ ಘೋಷಿಸಿದರು. ‘ಪರಿಸರವನ್ನು ಕಾಪಾಡುವ ಜವಾಬ್ದಾರಿ ನಮ್ಮದು. ಹೀಗಾಗಿ, ಕಾಡುಗಳನ್ನು ನಾನು ದತ್ತುಪಡೆಯುತ್ತಿದ್ದೇನೆ. ಆ ಕಾಡನ್ನು ಪೋಷಿಸುವ ಹೊಣೆಯನ್ನು ನಾನು ಈಗಲೇ ಹೊತ್ತುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಅವರು. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸಂತೋಷ್​ ಅವರು ನಿಜಕ್ಕೂ ಸಂತಸ ಪಟ್ಟಿದ್ದಾರೆ.

ನಾಗಾರ್ಜುನ ಅವರು ತೆಗೆದುಕೊಂಡ ಈ ನಿರ್ಧಾರದಿಂದ ಅನೇಕರಿಗೆ ಸ್ಫೂರ್ತಿ ಸಿಗಲಿದೆ. ಅವರ ಅಭಿಮಾನಿಗಳು ಕೂಡ ಕಾಡುಗಳನ್ನು ಪಡೆದುಕೊಳ್ಳಲು ಆಸಕ್ತಿ ತೋರಿಸುವ ಸಾಧ್ಯತೆ ಇದೆ. ಓರ್ವ ಅಭಿಮಾನಿ ಒಂದು ಎಕರೆ ಕಾಡನ್ನು ದತ್ತು ಪಡೆದರೂ ಅದರ ಒಟ್ಟಾರೆ ಸಂಖ್ಯೆ  .

ಇದನ್ನೂ ಓದಿ:ಪುನೀತ್ ಯಾವಾಗ ಸಿಕ್ಕರೂ ಒಳ್ಳೆಯ ಮಾತನ್ನಷ್ಟೇ ಆಡುತ್ತಿದ್ದರು; ಕಂಬನಿ ಮಿಡಿದ ನಾಗಾರ್ಜುನ 

ಸ್ವರ್ಗದಲ್ಲಿ ದೇವರಿಗೂ ಅವರು ಹಾಡು ಕೇಳಿಸ್ತಾರೆ ಎಂದ ಅಕ್ಕಿನೇನಿ ನಾಗಾರ್ಜುನ

Published On - 2:26 pm, Mon, 13 December 21

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ